Homeಮುಖಪುಟಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

- Advertisement -
- Advertisement -

ದೆಹಲಿಯ ಐಐಟಿಯಲ್ಲಿ ಇಬ್ಬರು ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳ ಆತ್ಮಹತ್ಯೆಯ ನಂತರ ಬೋರ್ಡ್‌ ಫಾರ್‌ ಸ್ಟುಡೆಂಟ್ಸ್‌ ಪಬ್ಲಿಕೇಶನ್ (BSP ) ಜಾತಿ ತಾರತಮ್ಯದ ಕುರಿತು ಸರ್ವೆಯನ್ನು ಪ್ರಕಟಿಸಿದ್ದು, ಅದನ್ನು ಕೆಲವೇ ಗಂಟೆಗಳ ಒಳಗೆ ಹಿಂಪಡೆಯಲಾಗಿದೆ.

ಕ್ಯಾಂಪಸ್‌ನಲ್ಲಿರುವ ಹಲವಾರು ವಿದ್ಯಾರ್ಥಿಗಳು ಸಮೀಕ್ಷೆಯು ಅಪ್ರಸ್ತುತ ಮತ್ತು ಸೂಕ್ಷ್ಮವಲ್ಲದ ಅನಾವಶ್ಯಕ ಪ್ರಶ್ನೆಗಳನ್ನು ಹೊಂದಿದೆ ಎಂದು ಆರೋಪಿಸಿದ್ದರು.

ಈ ಕುರಿತು ವಿದ್ಯಾರ್ಥಿಯೋರ್ವರು ಪ್ರತಿಕ್ರಿಯಿಸಿ, ಸರ್ವೆಯಲ್ಲಿ ಸಂಸ್ಥೆಯ ಮೀಸಲಾತಿ ನೀತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಅದಕ್ಕೆ ಆಯ್ಕೆಯಾಗಿ ಕೆಳಗೆ,  ಪ್ರಸ್ತುತ  ವಿಧಾನವನ್ನು ಬೆಂಬಲಿಸಿ, ಸಂಪೂರ್ಣವಾಗಿ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಹೊಸ ನೀತಿಯನ್ನು ಬದಲಿಸಿ, ಮೀಸಲಾತಿಯನ್ನು ರದ್ದುಗೊಳಿಸಿ ಕೊನೆಗೆ ಉತ್ತರಿಸದಿರಲು ಆದ್ಯತೆ ನೀಡಿ ಎಂದು ಆಯ್ಕೆ ನೀಡಲಾಗಿದೆ. ಸಮೀಕ್ಷೆಯಲ್ಲಿ ಕೊನೆಯ ಆಯ್ಕೆಯನ್ನು ಏಕೆ ಹಾಕಬೇಕು. ಅದರ ಬಗ್ಗೆ ಮುಕ್ತವಾಗಿರುವುದರಲ್ಲಿ ಸಮಸ್ಯೆ ಏನು? ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ.

ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯ, ಗ್ರಾಮೀಣ ಅಥವಾ ನಗರ ಹಿನ್ನೆಲೆ, ಪ್ರವೇಶದ ವರ್ಷ, ಲಿಂಗ ಮತ್ತು ಪದವಿ ಕೇಳಲಾಗಿದೆ.

SC/ST ಕೋಶವು ಇದನ್ನು ಪರಿಶೀಲಿಸುತ್ತಿದೆ ಮತ್ತು ಅಧಿಕೃತ ಚಾನಲ್‌ಗಳ ಮೂಲಕ ಶೀಘ್ರದಲ್ಲೇ ಹೊಸ ಸಮೀಕ್ಷೆಯನ್ನು ಬಿಡುಗಡೆ ಮಾಡಲು BSP ಯೊಂದಿಗೆ ಕೆಲಸ ಮಾಡುತ್ತಿದೆ ಎಂದು  IIT-ದೆಹಲಿ SC/ST ಸೆಲ್ ಸಂಪರ್ಕಾಧಿಕಾರಿ ಪ್ರವೀಣ್ ಇಂಗೋಲ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸರ್ವೆ ಅಧಿಕೃತ ಮಾರ್ಗಗಳ ಮೂಲಕ ನಡೆದಿಲ್ಲ. ಬಿಎಸ್‌ಪಿಯ ಚಟುವಟಿಕೆಗಳನ್ನು ನಿರ್ದೇಶಿಸುವ ಅಧ್ಯಾಪಕರು ಮಂಡಳಿಯ, ಬೋರ್ಡ್‌ನ ಸದಸ್ಯ ವಿದ್ಯಾರ್ಥಿಗಳಿಗೆ ಎಸ್‌ಸಿ/ಎಸ್‌ಟಿ ಕೋಶವನ್ನು ಸಂಪರ್ಕಿಸಲು ಸಲಹೆ ನೀಡಿದ್ದರು. ಅದನ್ನು ಅವರು ಮಾಡಲಿಲ್ಲ. ಸಮೀಕ್ಷೆಯು ಸರಿಯಾಗಿ ನಡೆಯದೆ ಬಿಡುಗಡೆಯಾಗಿದೆ. ನಾವು ಅದನ್ನು ಕಂಡುಕೊಂಡ ತಕ್ಷಣ ಅದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.

ಹೆಸರು ಹೇಳಲಿಚ್ಛಿಸದ ಬಿಎಸ್‌ಪಿ ಬೋರ್ಡ್‌ನ ವಿದ್ಯಾರ್ಥಿ ಮುಖ್ಯಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಾವು ಈ ವಾರದ ಆರಂಭದಲ್ಲಿ ಸಮೀಕ್ಷೆಯನ್ನು ನಡೆಸಿದ್ದೇವೆ. ಆದರೆ, ಸಂಸ್ಥೆಯ ಎಸ್‌ಸಿ/ಎಸ್‌ಟಿ ಸೆಲ್‌ನಿಂದ ಕೆಲವು ದೂರುಗಳ ಕಾರಣ ತಾತ್ಕಾಲಿಕವಾಗಿ ಸಮೀಕ್ಷೆ ಹಿಂಪಡೆಯಲಾಗಿದೆ. ಈ ವಿಷಯವನ್ನು ಆಂತರಿಕವಾಗಿ ಪರಿಹರಿಸಲಾಗಿದೆ ಮತ್ತು BSP ಪ್ರಸ್ತುತ SC/ST ಸೆಲ್‌ನೊಂದಿಗೆ ಹೊಸ ಸಮೀಕ್ಷೆಯನ್ನು ನಡೆಸುವಲ್ಲಿ ತೊಡಗಿಸಿಕೊಂಡಿದೆ, ಅದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ವಾರಗಳ ಹಿಂದೆ ಐಐಟಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ  ವಿದ್ಯಾರ್ಥಿ ಅನಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಟೆಕ್ ವ್ಯಾಸಂಗ ಮಾಡಲು ಅವರು 2019ರಲ್ಲಿ ಐಐಟಿಗೆ ಸೇರಿದರು. ಇದಲ್ಲದೆ ಐಐಟಿಯಲ್ಲಿ ಇನ್ನೊಬ್ಬ ಎಸ್‌ಸಿ ವಿದ್ಯಾರ್ಥಿ ಆಯುಷ್ ಅಶ್ನಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವೆರಡು ಆತ್ಮಹತ್ಯೆಗಳು ಒಂದು ತಿಂಗಳ ಅಂತರದಲ್ಲಿ ನಡೆದಿದೆ.

ಸಮೀಕ್ಷೆಯನ್ನು ಆತ್ಮಹತ್ಯೆ ವಿಚಾರವನ್ನು ಮುಂದಿಟ್ಟು ಮಾಡಲಾಗಿಲ್ಲ. ಈ ಸಮೀಕ್ಷೆಯು ಐಐಟಿ-ದೆಹಲಿಯಲ್ಲಿ ಇತ್ತೀಚೆಗೆ ನಡೆದ ಆತ್ಮಹತ್ಯೆಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಬಿಎಸ್‌ಪಿ ವಿದ್ಯಾರ್ಥಿ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...