Homeಮುಖಪುಟಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

- Advertisement -
- Advertisement -

ದೆಹಲಿಯ ಐಐಟಿಯಲ್ಲಿ ಇಬ್ಬರು ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳ ಆತ್ಮಹತ್ಯೆಯ ನಂತರ ಬೋರ್ಡ್‌ ಫಾರ್‌ ಸ್ಟುಡೆಂಟ್ಸ್‌ ಪಬ್ಲಿಕೇಶನ್ (BSP ) ಜಾತಿ ತಾರತಮ್ಯದ ಕುರಿತು ಸರ್ವೆಯನ್ನು ಪ್ರಕಟಿಸಿದ್ದು, ಅದನ್ನು ಕೆಲವೇ ಗಂಟೆಗಳ ಒಳಗೆ ಹಿಂಪಡೆಯಲಾಗಿದೆ.

ಕ್ಯಾಂಪಸ್‌ನಲ್ಲಿರುವ ಹಲವಾರು ವಿದ್ಯಾರ್ಥಿಗಳು ಸಮೀಕ್ಷೆಯು ಅಪ್ರಸ್ತುತ ಮತ್ತು ಸೂಕ್ಷ್ಮವಲ್ಲದ ಅನಾವಶ್ಯಕ ಪ್ರಶ್ನೆಗಳನ್ನು ಹೊಂದಿದೆ ಎಂದು ಆರೋಪಿಸಿದ್ದರು.

ಈ ಕುರಿತು ವಿದ್ಯಾರ್ಥಿಯೋರ್ವರು ಪ್ರತಿಕ್ರಿಯಿಸಿ, ಸರ್ವೆಯಲ್ಲಿ ಸಂಸ್ಥೆಯ ಮೀಸಲಾತಿ ನೀತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಅದಕ್ಕೆ ಆಯ್ಕೆಯಾಗಿ ಕೆಳಗೆ,  ಪ್ರಸ್ತುತ  ವಿಧಾನವನ್ನು ಬೆಂಬಲಿಸಿ, ಸಂಪೂರ್ಣವಾಗಿ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಹೊಸ ನೀತಿಯನ್ನು ಬದಲಿಸಿ, ಮೀಸಲಾತಿಯನ್ನು ರದ್ದುಗೊಳಿಸಿ ಕೊನೆಗೆ ಉತ್ತರಿಸದಿರಲು ಆದ್ಯತೆ ನೀಡಿ ಎಂದು ಆಯ್ಕೆ ನೀಡಲಾಗಿದೆ. ಸಮೀಕ್ಷೆಯಲ್ಲಿ ಕೊನೆಯ ಆಯ್ಕೆಯನ್ನು ಏಕೆ ಹಾಕಬೇಕು. ಅದರ ಬಗ್ಗೆ ಮುಕ್ತವಾಗಿರುವುದರಲ್ಲಿ ಸಮಸ್ಯೆ ಏನು? ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ.

ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯ, ಗ್ರಾಮೀಣ ಅಥವಾ ನಗರ ಹಿನ್ನೆಲೆ, ಪ್ರವೇಶದ ವರ್ಷ, ಲಿಂಗ ಮತ್ತು ಪದವಿ ಕೇಳಲಾಗಿದೆ.

SC/ST ಕೋಶವು ಇದನ್ನು ಪರಿಶೀಲಿಸುತ್ತಿದೆ ಮತ್ತು ಅಧಿಕೃತ ಚಾನಲ್‌ಗಳ ಮೂಲಕ ಶೀಘ್ರದಲ್ಲೇ ಹೊಸ ಸಮೀಕ್ಷೆಯನ್ನು ಬಿಡುಗಡೆ ಮಾಡಲು BSP ಯೊಂದಿಗೆ ಕೆಲಸ ಮಾಡುತ್ತಿದೆ ಎಂದು  IIT-ದೆಹಲಿ SC/ST ಸೆಲ್ ಸಂಪರ್ಕಾಧಿಕಾರಿ ಪ್ರವೀಣ್ ಇಂಗೋಲ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸರ್ವೆ ಅಧಿಕೃತ ಮಾರ್ಗಗಳ ಮೂಲಕ ನಡೆದಿಲ್ಲ. ಬಿಎಸ್‌ಪಿಯ ಚಟುವಟಿಕೆಗಳನ್ನು ನಿರ್ದೇಶಿಸುವ ಅಧ್ಯಾಪಕರು ಮಂಡಳಿಯ, ಬೋರ್ಡ್‌ನ ಸದಸ್ಯ ವಿದ್ಯಾರ್ಥಿಗಳಿಗೆ ಎಸ್‌ಸಿ/ಎಸ್‌ಟಿ ಕೋಶವನ್ನು ಸಂಪರ್ಕಿಸಲು ಸಲಹೆ ನೀಡಿದ್ದರು. ಅದನ್ನು ಅವರು ಮಾಡಲಿಲ್ಲ. ಸಮೀಕ್ಷೆಯು ಸರಿಯಾಗಿ ನಡೆಯದೆ ಬಿಡುಗಡೆಯಾಗಿದೆ. ನಾವು ಅದನ್ನು ಕಂಡುಕೊಂಡ ತಕ್ಷಣ ಅದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.

ಹೆಸರು ಹೇಳಲಿಚ್ಛಿಸದ ಬಿಎಸ್‌ಪಿ ಬೋರ್ಡ್‌ನ ವಿದ್ಯಾರ್ಥಿ ಮುಖ್ಯಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಾವು ಈ ವಾರದ ಆರಂಭದಲ್ಲಿ ಸಮೀಕ್ಷೆಯನ್ನು ನಡೆಸಿದ್ದೇವೆ. ಆದರೆ, ಸಂಸ್ಥೆಯ ಎಸ್‌ಸಿ/ಎಸ್‌ಟಿ ಸೆಲ್‌ನಿಂದ ಕೆಲವು ದೂರುಗಳ ಕಾರಣ ತಾತ್ಕಾಲಿಕವಾಗಿ ಸಮೀಕ್ಷೆ ಹಿಂಪಡೆಯಲಾಗಿದೆ. ಈ ವಿಷಯವನ್ನು ಆಂತರಿಕವಾಗಿ ಪರಿಹರಿಸಲಾಗಿದೆ ಮತ್ತು BSP ಪ್ರಸ್ತುತ SC/ST ಸೆಲ್‌ನೊಂದಿಗೆ ಹೊಸ ಸಮೀಕ್ಷೆಯನ್ನು ನಡೆಸುವಲ್ಲಿ ತೊಡಗಿಸಿಕೊಂಡಿದೆ, ಅದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ವಾರಗಳ ಹಿಂದೆ ಐಐಟಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ  ವಿದ್ಯಾರ್ಥಿ ಅನಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಟೆಕ್ ವ್ಯಾಸಂಗ ಮಾಡಲು ಅವರು 2019ರಲ್ಲಿ ಐಐಟಿಗೆ ಸೇರಿದರು. ಇದಲ್ಲದೆ ಐಐಟಿಯಲ್ಲಿ ಇನ್ನೊಬ್ಬ ಎಸ್‌ಸಿ ವಿದ್ಯಾರ್ಥಿ ಆಯುಷ್ ಅಶ್ನಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವೆರಡು ಆತ್ಮಹತ್ಯೆಗಳು ಒಂದು ತಿಂಗಳ ಅಂತರದಲ್ಲಿ ನಡೆದಿದೆ.

ಸಮೀಕ್ಷೆಯನ್ನು ಆತ್ಮಹತ್ಯೆ ವಿಚಾರವನ್ನು ಮುಂದಿಟ್ಟು ಮಾಡಲಾಗಿಲ್ಲ. ಈ ಸಮೀಕ್ಷೆಯು ಐಐಟಿ-ದೆಹಲಿಯಲ್ಲಿ ಇತ್ತೀಚೆಗೆ ನಡೆದ ಆತ್ಮಹತ್ಯೆಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಬಿಎಸ್‌ಪಿ ವಿದ್ಯಾರ್ಥಿ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...