Homeಮುಖಪುಟಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

- Advertisement -
- Advertisement -

ದೆಹಲಿಯ ಐಐಟಿಯಲ್ಲಿ ಇಬ್ಬರು ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳ ಆತ್ಮಹತ್ಯೆಯ ನಂತರ ಬೋರ್ಡ್‌ ಫಾರ್‌ ಸ್ಟುಡೆಂಟ್ಸ್‌ ಪಬ್ಲಿಕೇಶನ್ (BSP ) ಜಾತಿ ತಾರತಮ್ಯದ ಕುರಿತು ಸರ್ವೆಯನ್ನು ಪ್ರಕಟಿಸಿದ್ದು, ಅದನ್ನು ಕೆಲವೇ ಗಂಟೆಗಳ ಒಳಗೆ ಹಿಂಪಡೆಯಲಾಗಿದೆ.

ಕ್ಯಾಂಪಸ್‌ನಲ್ಲಿರುವ ಹಲವಾರು ವಿದ್ಯಾರ್ಥಿಗಳು ಸಮೀಕ್ಷೆಯು ಅಪ್ರಸ್ತುತ ಮತ್ತು ಸೂಕ್ಷ್ಮವಲ್ಲದ ಅನಾವಶ್ಯಕ ಪ್ರಶ್ನೆಗಳನ್ನು ಹೊಂದಿದೆ ಎಂದು ಆರೋಪಿಸಿದ್ದರು.

ಈ ಕುರಿತು ವಿದ್ಯಾರ್ಥಿಯೋರ್ವರು ಪ್ರತಿಕ್ರಿಯಿಸಿ, ಸರ್ವೆಯಲ್ಲಿ ಸಂಸ್ಥೆಯ ಮೀಸಲಾತಿ ನೀತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಅದಕ್ಕೆ ಆಯ್ಕೆಯಾಗಿ ಕೆಳಗೆ,  ಪ್ರಸ್ತುತ  ವಿಧಾನವನ್ನು ಬೆಂಬಲಿಸಿ, ಸಂಪೂರ್ಣವಾಗಿ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಹೊಸ ನೀತಿಯನ್ನು ಬದಲಿಸಿ, ಮೀಸಲಾತಿಯನ್ನು ರದ್ದುಗೊಳಿಸಿ ಕೊನೆಗೆ ಉತ್ತರಿಸದಿರಲು ಆದ್ಯತೆ ನೀಡಿ ಎಂದು ಆಯ್ಕೆ ನೀಡಲಾಗಿದೆ. ಸಮೀಕ್ಷೆಯಲ್ಲಿ ಕೊನೆಯ ಆಯ್ಕೆಯನ್ನು ಏಕೆ ಹಾಕಬೇಕು. ಅದರ ಬಗ್ಗೆ ಮುಕ್ತವಾಗಿರುವುದರಲ್ಲಿ ಸಮಸ್ಯೆ ಏನು? ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ.

ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯ, ಗ್ರಾಮೀಣ ಅಥವಾ ನಗರ ಹಿನ್ನೆಲೆ, ಪ್ರವೇಶದ ವರ್ಷ, ಲಿಂಗ ಮತ್ತು ಪದವಿ ಕೇಳಲಾಗಿದೆ.

SC/ST ಕೋಶವು ಇದನ್ನು ಪರಿಶೀಲಿಸುತ್ತಿದೆ ಮತ್ತು ಅಧಿಕೃತ ಚಾನಲ್‌ಗಳ ಮೂಲಕ ಶೀಘ್ರದಲ್ಲೇ ಹೊಸ ಸಮೀಕ್ಷೆಯನ್ನು ಬಿಡುಗಡೆ ಮಾಡಲು BSP ಯೊಂದಿಗೆ ಕೆಲಸ ಮಾಡುತ್ತಿದೆ ಎಂದು  IIT-ದೆಹಲಿ SC/ST ಸೆಲ್ ಸಂಪರ್ಕಾಧಿಕಾರಿ ಪ್ರವೀಣ್ ಇಂಗೋಲ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸರ್ವೆ ಅಧಿಕೃತ ಮಾರ್ಗಗಳ ಮೂಲಕ ನಡೆದಿಲ್ಲ. ಬಿಎಸ್‌ಪಿಯ ಚಟುವಟಿಕೆಗಳನ್ನು ನಿರ್ದೇಶಿಸುವ ಅಧ್ಯಾಪಕರು ಮಂಡಳಿಯ, ಬೋರ್ಡ್‌ನ ಸದಸ್ಯ ವಿದ್ಯಾರ್ಥಿಗಳಿಗೆ ಎಸ್‌ಸಿ/ಎಸ್‌ಟಿ ಕೋಶವನ್ನು ಸಂಪರ್ಕಿಸಲು ಸಲಹೆ ನೀಡಿದ್ದರು. ಅದನ್ನು ಅವರು ಮಾಡಲಿಲ್ಲ. ಸಮೀಕ್ಷೆಯು ಸರಿಯಾಗಿ ನಡೆಯದೆ ಬಿಡುಗಡೆಯಾಗಿದೆ. ನಾವು ಅದನ್ನು ಕಂಡುಕೊಂಡ ತಕ್ಷಣ ಅದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.

ಹೆಸರು ಹೇಳಲಿಚ್ಛಿಸದ ಬಿಎಸ್‌ಪಿ ಬೋರ್ಡ್‌ನ ವಿದ್ಯಾರ್ಥಿ ಮುಖ್ಯಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಾವು ಈ ವಾರದ ಆರಂಭದಲ್ಲಿ ಸಮೀಕ್ಷೆಯನ್ನು ನಡೆಸಿದ್ದೇವೆ. ಆದರೆ, ಸಂಸ್ಥೆಯ ಎಸ್‌ಸಿ/ಎಸ್‌ಟಿ ಸೆಲ್‌ನಿಂದ ಕೆಲವು ದೂರುಗಳ ಕಾರಣ ತಾತ್ಕಾಲಿಕವಾಗಿ ಸಮೀಕ್ಷೆ ಹಿಂಪಡೆಯಲಾಗಿದೆ. ಈ ವಿಷಯವನ್ನು ಆಂತರಿಕವಾಗಿ ಪರಿಹರಿಸಲಾಗಿದೆ ಮತ್ತು BSP ಪ್ರಸ್ತುತ SC/ST ಸೆಲ್‌ನೊಂದಿಗೆ ಹೊಸ ಸಮೀಕ್ಷೆಯನ್ನು ನಡೆಸುವಲ್ಲಿ ತೊಡಗಿಸಿಕೊಂಡಿದೆ, ಅದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ವಾರಗಳ ಹಿಂದೆ ಐಐಟಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ  ವಿದ್ಯಾರ್ಥಿ ಅನಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಟೆಕ್ ವ್ಯಾಸಂಗ ಮಾಡಲು ಅವರು 2019ರಲ್ಲಿ ಐಐಟಿಗೆ ಸೇರಿದರು. ಇದಲ್ಲದೆ ಐಐಟಿಯಲ್ಲಿ ಇನ್ನೊಬ್ಬ ಎಸ್‌ಸಿ ವಿದ್ಯಾರ್ಥಿ ಆಯುಷ್ ಅಶ್ನಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವೆರಡು ಆತ್ಮಹತ್ಯೆಗಳು ಒಂದು ತಿಂಗಳ ಅಂತರದಲ್ಲಿ ನಡೆದಿದೆ.

ಸಮೀಕ್ಷೆಯನ್ನು ಆತ್ಮಹತ್ಯೆ ವಿಚಾರವನ್ನು ಮುಂದಿಟ್ಟು ಮಾಡಲಾಗಿಲ್ಲ. ಈ ಸಮೀಕ್ಷೆಯು ಐಐಟಿ-ದೆಹಲಿಯಲ್ಲಿ ಇತ್ತೀಚೆಗೆ ನಡೆದ ಆತ್ಮಹತ್ಯೆಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಬಿಎಸ್‌ಪಿ ವಿದ್ಯಾರ್ಥಿ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...