Homeಮುಖಪುಟಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

ಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

- Advertisement -
- Advertisement -

INDIA ಒಕ್ಕೂಟ ಸ್ಥಾಪನೆ ಬಳಿಕ ಆರು ರಾಜ್ಯಗಳ 7 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ವಿರೋಧ ಪಕ್ಷದ ಒಕ್ಕೂಟ  INDIA 4 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು NDA ಒಕ್ಕೂಟ 3 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಇದು ವಿಪಕ್ಷಗಳ ಒಕ್ಕೂಟ ರಚನೆಯಾದ ಬಳಿಕ ಎನ್‌ಡಿಎ ಒಕ್ಕೂಟಕ್ಕೆ ಸಿಕ್ಕ ಮೊದಲ ಆಘಾತವಾಗಿದೆ.

ಬಿಜೆಪಿ ಮೂರು ಉಪಚುನಾವಣೆಗಳಲ್ಲಿ ಗೆದ್ದರೆ ಅವುಗಳಲ್ಲಿ ಎರಡು ಅದರ ಹಾಲಿ ಸ್ಥಾನಗಳಾಗಿದ್ದವು.  INDIA ಒಕ್ಕೂಟ ಮಿತ್ರಪಕ್ಷಗಳು ನಾಲ್ಕನ್ನು ಗೆದ್ದುಕೊಂಡಿದೆ. ಅದರಲ್ಲೂ ಉತ್ತರ ಪ್ರದೇಶದ ನಿರ್ಣಾಯಕ ಸ್ಥಾನವನ್ನು INDIA ಒಕ್ಕೂಟ ತಮ್ಮದಾಗಿಸಿಕೊಂಡಿದೆ.

ಜಾರ್ಖಂಡ್‌ನ ಡುಮ್ರಿ ಮತ್ತು ಉತ್ತರ ಪ್ರದೇಶದ ಘೋಸಿಯಲ್ಲಿ ಗೆಲುವು INDIA ಒಕ್ಕೂಟದ ಮೊದಲ ಯಶಸ್ವಿ ಎಂದು ಬಣ್ಣಿಸಲಾಗಿದೆ.

ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಪಕ್ಷ ಕೇರಳದಲ್ಲಿ ಜಯ ಸಾಧಿಸಿದೆ. ದಿವಂಗತ ಮುಖ್ಯಮಂತ್ರಿ ಒಮನ್ ಚಾಂಡಿಯವರ ಪುತ್ರ ತಮ್ಮ ತಂದೆಯ ಭದ್ರಕೋಟೆಯನ್ನು ಉಳಿಸಿಕೊಂಡಿದ್ದಾರೆ.

ದೇಶದಲ್ಲಿ ಭಾರೀ ಕುತೂಹಲ ಮೂಡಿಸಿದ ಘೋಸಿ ಕ್ಷೇತ್ರದಲ್ಲಿ ಬಿಜೆಪಿ ಸೋಲು ಅನುಭವಿಸಿದೆ.  ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ದಾರಾ ಸಿಂಗ್ ಚೌಹಾಣ್ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಯೋಗಿ ಆದಿತ್ಯನಾಥ್ ಸಂಪುಟದ ಹಲವು ಸಚಿವರು ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿ ಪ್ರಚಾರ, ತಂತ್ರ ನಡೆಸಿದ್ದಾರೆ. ಅದ್ಯಾವುದೂ ಫಲಿಸಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿಯ ದಾರಾ ಸಿಂಗ್ ಚೌಹಾಣ್ ವಿರುದ್ಧ ಸಮಾಜವಾದಿ ಪಕ್ಷದ ಸುಧಾಕರ್ ಸಿಂಗ್ 42,759 ಮತಗಳ ಭಾರಿ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

INDIA ಒಕ್ಕೂಟದ ಭಾಗವಾದ  SP ಕೇವಲ ಘೋಸಿಯನ್ನು ಗೆಲ್ಲಲಿಲ್ಲ, ಅದು 2022ರಿಂದ ತನ್ನ ಮತಗಳ ಪಾಲನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಿದೆ. 42% ದಿಂದ  58%ಕ್ಕೆ ಮತಗಳನ್ನು ಹೆಚ್ಚಿಸಿಕೊಂಡಿದೆ.

ಜಾರ್ಖಂಡ್‌ನ ದುಮ್ರಿ ಕ್ಷೇತ್ರದಲ್ಲಿ ಇಂಡಿಯಾ ಬೆಂಬಲಿತ ಜೆಎಂಎಂನ ಅಭ್ಯರ್ಥಿ ಬೇಬಿ ದೇವಿ ಅವರು ಎನ್‌ಡಿಎ ಬೆಂಬಲಿತ ಎಜೆಎಸ್‌ಯು ಅಭ್ಯರ್ಥಿ ಯಶೋದಾ ದೇವಿ ವಿರುದ್ಧ 17,000ಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಧೂಪಗುರಿ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ನಿರ್ಮಲ್ ಚಂದ್ರ ರಾಯ್‌ 4,313 ಮತಗಳಿಂದ ಬಿಜೆಪಿ ಅಭ್ಯರ್ಥಿ ತಾಪಸಿ ರಾಯ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಉತ್ತರಾಖಂಡದ ಬಾಗೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಪಾರ್ವತಿ ದಾಸ್‌,  ಕಾಂಗ್ರೆಸ್‌ ಅಭ್ಯರ್ಥಿ ಬಸಂತ ಕುಮಾರ್‌ ವಿರುದ್ಧ ಅಲ್ಪ(2400) ಮತಗಳಿಂದ ಗೆಲುವು ಪಡೆದುಕೊಂಡಿದ್ದಾರೆ. ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಬಕ್ಸ್ ನಗರ ಕ್ಷೇತ್ರವನ್ನು ಸಿಪಿಎಂನಿಂದ ಕಸಿದುಕೊಂಡಿದ್ದರೆ. ಧನಪುರ ಕೇತ್ರವನ್ನು ಉಳಿಸಿಕೊಂಡಿದೆ.

ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೆಪ್ಟೆಂಬರ್ 5 ರಂದು ನಡೆದ ಏಳು ಉಪಚುನಾವಣೆಗಳಲ್ಲಿ ನಾಲ್ಕರಲ್ಲಿ ಬಿಜೆಪಿ ಸೋತಿದೆ. ಇದು ಇಂಡಿಯಾ ಮೈತ್ರಿಗೆ ಸಿಕ್ಕ ದೊಡ್ಡ ಗೆಲುವು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿಗೆ ಪರ್ಯಾಯವಾಗಿ ಜನರು ಇಂಡಿಯಾ ಮೈತ್ರಿಕೂಟವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಉಪಚುನಾವಣೆಯಲ್ಲಿ ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾದ ಅಭ್ಯರ್ಥಿಗಳ ಗೆಲುವು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನು ಓದಿ: ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...