Homeಕರ್ನಾಟಕಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆ

ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ನಾವು ಇದಕ್ಕೆ ತಲೆ ಕೆಡಿಸಿಕೊಂಡಿಲ್ಲ, ಆದರೆ ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಕಡೆ ಜೆಡಿಎಸ್ ವಾಲಿತ್ತು,  ಇದೀಗ ಯಡಿಯೂರಪ್ಪ ಸ್ಪಷ್ಟನೆ ನೀಡಿ ಮೈತ್ರಿಯನ್ನು ದೃಢಪಡಿಸಿದ್ದಾರೆ.

ಮೈತ್ರಿಕೂಟದ ಅಡಿಯಲ್ಲಿ ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಡುವ ನಾಲ್ಕು ಸ್ಥಾನಗಳ ಬಗ್ಗೆ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಜೆಡಿಎಸ್‌ಗೆ ಮಂಡ್ಯ, ಕೋಲಾರ, ತುಮಕೂರು ಮತ್ತು ಹಾಸನ ಲೋಕಸಭಾ ಸ್ಥಾನಗಳು ಸಿಗುವ ಸಾಧ್ಯತೆ ಇದೆ.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ್ದಾರೆ. ಮೈತ್ರಿಯ ನಂತರ ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಪಕ್ಷ ಉಳಿಯುತ್ತದೋ ಇಲ್ಲವೋ ಗೊತ್ತಿಲ್ಲ. ಅವರ ಮೈತ್ರಿಗೆ ನಾನು ವಿರೋಧಿಯಲ್ಲ. ಅವರಿಗೆ ಆಲ್ ದಿ ಬೆಸ್ಟ್ ಎಂದು ಹೇಳಿದ್ದಾರೆ.

ಸಚಿವ ಎಂ.ಬಿ.ಪಾಟೀಲ್ ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಅನುಕೂಲವಾಗಲಿದೆ. ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಅದು ನಮಗೆ ಸಂಬಂಧಪಟ್ಟ ವಿಷಯ ಅಲ್ಲ. ಸೆಕ್ಯುಲರ್ ಎನ್ನುವ ಹೆಸರು ಇಟ್ಟುಕೊಂಡಿರುವ ಜೆಡಿಎಸ್ ಬಣ್ಣವೂ ಬಯಲಾಗಲಿದೆ. ನಾವು ಏಕಾಂಗಿಯಾಗಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನಾದರೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ಚುನಾವಣೆ ಮುಗಿದು ಐದಾರು ತಿಂಗಳಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಜನರಿಂದ ತಿರಸ್ಕೃತವಾಗಿರುವ ಆ ಪಕ್ಷ ಈಗಾಗಲೇ ಮುಳುಗಿ ಹೋಗಿರುವ ಹಡಗು. ಸಂಪೂರ್ಣ ಹತಾಶ ಸ್ಥಿತಿ ತಲುಪಿರುವ ಪಕ್ಷಕ್ಕೆ ಯಾವ ಭವಿಷ್ಯವೂ ಇಲ್ಲ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಾಲಿಯಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಂ.ಬಿ.ಪಾಟೀಲ್‌ ಅವರು ಹೇಳಿದ್ದಾರೆ.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಈ ಕುರಿತು ಪ್ರತಿಕ್ರಿಯಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ಪರಿಣಾಮ ಬೀರುವುದಿಲ್ಲ.  ಅವರ ಮೈತ್ರಿಯಿಂದ ಯಾವುದು ಜಾತ್ಯಾತೀತ, ಯಾವುದು ಜಾತಿವಾದಿ ಪಕ್ಷ ಅನ್ನೋದು ಜನರಿಗೆ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.

ಬಿಜೆಪಿ- ಜೆಡಿಎಸ್‌ ಮೈತ್ರಿ ಬಗ್ಗೆ ಯಡಿಯೂರಪ್ಪ ಘೋಷಿಸಿದರೂ, ಬಿಜೆಪಿ ಜೊತೆ ಮೈತ್ರಿ ವಿಚಾರದಲ್ಲಿ ಇನ್ನೂ ಸಮಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದು, ಮೈತ್ರಿ ಬಗ್ಗೆ ಹೆಚ್ಚು ಮಾತನಾಡಲು ನಿರಾಕರಿಸಿದ್ದಾರೆ.

ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕುಮಾರಸ್ವಾಮಿ ಹಾಗೂ ದೇವೇಗೌಡರು ಚರ್ಚೆ ನಡೆಸಿದ್ದು ನಾಳೆ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಕೆಲವು ಜೆಡಿಎಸ್ ಮುಖಂಡರು ಮೈತ್ರಿ ಬಗ್ಗೆ ಮೌನವನ್ನು ತಾಳಿದ್ದು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ನನಗೆ ಮೈತ್ರಿ ಬಗ್ಗೆ ಏನು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಸಿ ಎಂ ಇಬ್ರಾಹಿಂ, ಮೈತ್ರಿ ವಿಚಾರದ ಬಗ್ಗೆ ರಾಷ್ಟ್ರೀಯ ನಾಯಕ ಹೆಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತೀರ್ಮಾನ ಮಾಡುತ್ತಾರೆ. ಸದ್ಯ ಬಿಜೆಪಿ ನಾಯಕರು ಅಭಿಪ್ರಾಯ ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...