Homeಕರ್ನಾಟಕಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆ

ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ನಾವು ಇದಕ್ಕೆ ತಲೆ ಕೆಡಿಸಿಕೊಂಡಿಲ್ಲ, ಆದರೆ ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಕಡೆ ಜೆಡಿಎಸ್ ವಾಲಿತ್ತು,  ಇದೀಗ ಯಡಿಯೂರಪ್ಪ ಸ್ಪಷ್ಟನೆ ನೀಡಿ ಮೈತ್ರಿಯನ್ನು ದೃಢಪಡಿಸಿದ್ದಾರೆ.

ಮೈತ್ರಿಕೂಟದ ಅಡಿಯಲ್ಲಿ ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಡುವ ನಾಲ್ಕು ಸ್ಥಾನಗಳ ಬಗ್ಗೆ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಜೆಡಿಎಸ್‌ಗೆ ಮಂಡ್ಯ, ಕೋಲಾರ, ತುಮಕೂರು ಮತ್ತು ಹಾಸನ ಲೋಕಸಭಾ ಸ್ಥಾನಗಳು ಸಿಗುವ ಸಾಧ್ಯತೆ ಇದೆ.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ್ದಾರೆ. ಮೈತ್ರಿಯ ನಂತರ ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಪಕ್ಷ ಉಳಿಯುತ್ತದೋ ಇಲ್ಲವೋ ಗೊತ್ತಿಲ್ಲ. ಅವರ ಮೈತ್ರಿಗೆ ನಾನು ವಿರೋಧಿಯಲ್ಲ. ಅವರಿಗೆ ಆಲ್ ದಿ ಬೆಸ್ಟ್ ಎಂದು ಹೇಳಿದ್ದಾರೆ.

ಸಚಿವ ಎಂ.ಬಿ.ಪಾಟೀಲ್ ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಅನುಕೂಲವಾಗಲಿದೆ. ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಅದು ನಮಗೆ ಸಂಬಂಧಪಟ್ಟ ವಿಷಯ ಅಲ್ಲ. ಸೆಕ್ಯುಲರ್ ಎನ್ನುವ ಹೆಸರು ಇಟ್ಟುಕೊಂಡಿರುವ ಜೆಡಿಎಸ್ ಬಣ್ಣವೂ ಬಯಲಾಗಲಿದೆ. ನಾವು ಏಕಾಂಗಿಯಾಗಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನಾದರೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ಚುನಾವಣೆ ಮುಗಿದು ಐದಾರು ತಿಂಗಳಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಜನರಿಂದ ತಿರಸ್ಕೃತವಾಗಿರುವ ಆ ಪಕ್ಷ ಈಗಾಗಲೇ ಮುಳುಗಿ ಹೋಗಿರುವ ಹಡಗು. ಸಂಪೂರ್ಣ ಹತಾಶ ಸ್ಥಿತಿ ತಲುಪಿರುವ ಪಕ್ಷಕ್ಕೆ ಯಾವ ಭವಿಷ್ಯವೂ ಇಲ್ಲ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಾಲಿಯಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಂ.ಬಿ.ಪಾಟೀಲ್‌ ಅವರು ಹೇಳಿದ್ದಾರೆ.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಈ ಕುರಿತು ಪ್ರತಿಕ್ರಿಯಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ಪರಿಣಾಮ ಬೀರುವುದಿಲ್ಲ.  ಅವರ ಮೈತ್ರಿಯಿಂದ ಯಾವುದು ಜಾತ್ಯಾತೀತ, ಯಾವುದು ಜಾತಿವಾದಿ ಪಕ್ಷ ಅನ್ನೋದು ಜನರಿಗೆ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.

ಬಿಜೆಪಿ- ಜೆಡಿಎಸ್‌ ಮೈತ್ರಿ ಬಗ್ಗೆ ಯಡಿಯೂರಪ್ಪ ಘೋಷಿಸಿದರೂ, ಬಿಜೆಪಿ ಜೊತೆ ಮೈತ್ರಿ ವಿಚಾರದಲ್ಲಿ ಇನ್ನೂ ಸಮಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದು, ಮೈತ್ರಿ ಬಗ್ಗೆ ಹೆಚ್ಚು ಮಾತನಾಡಲು ನಿರಾಕರಿಸಿದ್ದಾರೆ.

ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕುಮಾರಸ್ವಾಮಿ ಹಾಗೂ ದೇವೇಗೌಡರು ಚರ್ಚೆ ನಡೆಸಿದ್ದು ನಾಳೆ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಕೆಲವು ಜೆಡಿಎಸ್ ಮುಖಂಡರು ಮೈತ್ರಿ ಬಗ್ಗೆ ಮೌನವನ್ನು ತಾಳಿದ್ದು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ನನಗೆ ಮೈತ್ರಿ ಬಗ್ಗೆ ಏನು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಸಿ ಎಂ ಇಬ್ರಾಹಿಂ, ಮೈತ್ರಿ ವಿಚಾರದ ಬಗ್ಗೆ ರಾಷ್ಟ್ರೀಯ ನಾಯಕ ಹೆಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತೀರ್ಮಾನ ಮಾಡುತ್ತಾರೆ. ಸದ್ಯ ಬಿಜೆಪಿ ನಾಯಕರು ಅಭಿಪ್ರಾಯ ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...