Homeಮುಖಪುಟಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

ಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

ಭಾರತದಲ್ಲಿ ರಾಜಕೀಯವು ಹೋರಾಟವು ಒಂದು “ಮಹಾತ್ಮ ಗಾಂಧಿಯವರ ದೃಷ್ಟಿಕೋನ” ಮತ್ತು ಅವರ ಹಂತಕ “ನಾಥುರಾಮ್ ಗೋಡ್ಸೆ ಅವರ ದೃಷ್ಟಿಕೋನದ” ನಡುವೆ  ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಪ್ರಸ್ತುತ ಯುರೋಪ್‌ ರಾಷ್ಟ್ರಗಳ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ, ದೇಶದಲ್ಲಿ ಒಡಕು ಮೂಡಿಸುತ್ತಿದ್ದಾರೆ ಮತ್ತು ಬಂಡವಾಳಶಾಹಿ ಹಿತಾಸಕ್ತಿಗಳಿಗೆ ಆಶ್ರಯ ನೀಡುತ್ತಿದ್ದಾರೆಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೆಪ್ಟೆಂಬರ್ 8 ರಂದು ಬ್ರಸೆಲ್ಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಯುರೋಪಿಯನ್ ಸಂಸದರೊಂದಿಗಿನ ತಮ್ಮ ಸಭೆಯ ಕುರಿತು ಮಾಹಿತಿ ನೀಡಿದ್ದು, ಸಭೆಯಲ್ಲಿ ಭಾರತದ ಪ್ರಜಾಪ್ರಭುತ್ವವು ಪ್ರಸ್ತುತ ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲಾಗಿದೆ . ಭಾರತ ಎದುರಿಸುತ್ತಿರುವ ಆರ್ಥಿಕ ಸವಾಲುಗಳು, ಇತರ ಸವಾಲುಗಳು, ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ಸಾಮಾನ್ಯ ರೀತಿಯ ದಾಳಿ ಬಗ್ಗೆ ಅವರಿಗೆ ಅರಿವು ನೀಡಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆದಿದೆ  ಮತ್ತು  ಅಲ್ಪಸಂಖ್ಯಾತ , ದಲಿತ ಸಮುದಾಯಗಳು, ಬುಡಕಟ್ಟು, ಕೆಳ ಜಾತಿಯ ಸಮುದಾಯಗಳು ದಾಳಿಗೆ ಒಳಗಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಮ್ಮ ದೇಶದ ಸ್ವರೂಪವನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನದಲ್ಲಿ ನಮ್ಮ ದೇಶವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ ಮತ್ತು ನಮ್ಮ ಒಕ್ಕೂಟದ ಅತ್ಯಂತ ಮುಖ್ಯ ಅಂಶವೆಂದರೆ ನಮ್ಮ ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯಾಗಿದೆ. ಆದರೆ ಈಗ ಪರ್ಯಾಯ ದೃಷ್ಟಿ ಇದೆ, ಅದು ಬಿಜೆಪಿ ದೃಷ್ಟಿಕೋನವಾಗಿದೆ, ಇದು ಅಧಿಕಾರವನ್ನು ಕೇಂದ್ರೀಕರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪರ್ಯಾಯ ದೃಷ್ಟಿ ಕೋನವು  ಸಂಪತ್ತು ಕೇಂದ್ರೀಕೃತವಾಗಬೇಕು ಮತ್ತು ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯನ್ನು ದಮನ ಮಾಡಬೇಕು ಎಂದು ಹೇಳುತ್ತದೆ. ಭಾರತದಲ್ಲಿರುವುದು ಎರಡು ದೃಷ್ಟಿಕೋನಗಳ ನಡುವಿನ ಹೋರಾಟವಾಗಿದೆ. ಒಂದು ಮಹಾತ್ಮಾ ಗಾಂಧಿಯವರ ದೃಷ್ಟಿ ಮತ್ತು ಇನ್ನೊಂದು ನಾಥೂರಾಂ ಗೋಡ್ಸೆ ಅವರ ದೃಷ್ಟಿಕೋನವಾಗಿದೆ. ನಾಥೂರಾಂ ಗೋಡ್ಸೆ, ಗಾಂಧೀಜಿಯನ್ನು ಹತ್ಯೆ ಮಾಡಿದ ವ್ಯಕ್ತಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತದಲ್ಲಿ ನಾವು ಮಾಡುತ್ತಿರುವುದು ಪ್ರಜಾಸತ್ತಾತ್ಮಕ ಹೋರಾಟ ಮತ್ತು ಇದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಥೆಗಳ ಮೇಲೆ ಮತ್ತು ನಮ್ಮ ಸ್ವಾತಂತ್ರ್ಯದ ಮೇಲೆ ಆಕ್ರಮಣವನ್ನು ನಿಲ್ಲಿಸುತ್ತೇವೆ ಎಂಬ ಭರವಸೆಯನ್ನು ಪ್ರತಿಪಕ್ಷಗಳು ನೀಡುತ್ತದೆ  ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುರೋಪ್‌ನಲ್ಲಿರುವ ಭಾರತೀಯರನ್ನು ಭೇಟಿ ಮಾಡಲು ಮತ್ತು ಅವರು ಭಾರತವನ್ನು ಹೇಗೆ ನೋಡುತ್ತಾರೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ಅರ್ಥೈಸಲು ಬಂದಿದ್ದೇನೆ. ನಾನು ಸಾವಿರಾರು ಯುವಕರನ್ನು ಭೇಟಿಯಾಗಿದ್ದೇನೆ. ಅವರು ಹೇಳಿದ ಮೂರು ವಿಷಯಗಳೆಂದರೆ, ನಿರುದ್ಯೋಗ, ಬಡತನದ ಮಟ್ಟದಲ್ಲಿ ಭಾರಿ ಹೆಚ್ಚಳ ಮತ್ತು ಸಂಪೂರ್ಣವಾಗಿ ಅಸಮಾನ ಆದಾಯ ಹಂಚಿಕೆಗಳಾಗಿದೆ. ಇದರಿಂದಾಗಿ ಕೆಲ ಜನರು  ಹೆಚ್ಚು ಶ್ರೀಮಂತರಾಗುತ್ತಾರೆ ಮತ್ತು ಹೆಚ್ಚಿನ ಜನರು ಮತ್ತೆ ಬಡತನಕ್ಕೆ ತಳ್ಳಲ್ಪಡತ್ತಾರೆ ಎಂದು ಹೇಳಿದ್ದಾರೆ.

ಬೆಲೆಗಳ ಏರಿಕೆ ಮತ್ತು ಹಣದುಬ್ಬರ ಇವೆ. ನಿಜವಾದ ಸಂಗತಿಯೆಂದರೆ ಭಾರತವು ಕಳೆದ 40 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಆರ್ಥಿಕ ನೀತಿ ತಪ್ಪಾಗಿದೆ. ಸರ್ಕಾರಕ್ಕೆ ಸಾಕಷ್ಟು ಮಾಧ್ಯಮ ಬೆಂಬಲವಿದೆ. ಆದ್ದರಿಂದ ಆ ರೀತಿಯ ವಿಷಯಗಳು ಹೊರಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...