Homeಕರ್ನಾಟಕಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಪತ್ರ ಆಗಸ್ಟ್- 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ.

ಈ ಬೆದರಿಕೆ ಪತ್ರದಲ್ಲಿ ”2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬದರಿಕೆ ಪತ್ರ ಮಠಕ್ಕೆ ಬಂದಿದೆ. ತಮಗೆ ಬೆದರಿಕೆ ಪತ್ರ ಬಂದಿರುವ ಕುರಿತು ಶ್ರೀಗಳು ತಮ್ಮ ಭಕ್ತರಿಗೆ ವಿಷಯ ತಿಳಿಸಿದ್ದಾರೆ.

”ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊಣೆಯಲ್ಲಿ ”ಓಂ ಶ್ರೀ ಕಾಳಿಕಾದೇವಿ ನಮಃ” ”ಸಹಿಷ್ಣು ಹಿಂದೂ” ಎಂದು ಬರೆಯಲಾಗಿದೆ.

2020ರಲ್ಲಿ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ. ತಮ್ಮ ಖಡಕ್ ಮಾತುಗಳಿಂದಲೇ ರಾಜ್ಯದಲ್ಲಿ ಖ್ಯಾತಿಗಳಿಸಿರುವ ನಿಜಗುಣಾನಂದ ಸ್ವಾಮೀಜಿ ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ದಶಕಗಳಿಂದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕರಾಗಿದ್ದಾರೆ. ತಮ್ಮ ವಿಚಾರಗಳನ್ನು ಬಿತ್ತುತ್ತಾ ಬಂದಿದ್ದಾರೆ. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರ ಪ್ರವಚನದಲ್ಲಿ ಕಾಣಬಹುದಾಗಿದೆ.

ಪತ್ರದಲ್ಲೇನಿದೆ?

”ನಿಜಗುಣಾನಂದ ಸ್ವಾಮೀಜಿ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು. ನಮ್ಮಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ” ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿಟ್ಟು ಕಳಿಸಲಾಗಿದೆ.

ನಿಜಗುಣಾನಂದ ಶ್ರೀಗಳು ದಶಕಗಳಿಂದ ಬಸವಾದಿ ಶರಣ ತತ್ವಗಳನ್ನು ಪ್ರಚುರಪಡಿಸುವಲ್ಲಿ ನಿರತರಾಗಿದ್ದಾರೆ. ಬೈಲೂರಿನ ಮಠವನ್ನು ಕೇಂದ್ರವಾಗಿಸಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಅವರ ಪ್ರವಚನದಲ್ಲಿ ಮೌಡ್ಯ ವಿರೋಧಿ, ಕಂದಾಚಾರ ವಿರೋಧಿ, ಮೂರ್ತಿ ಪೂಜೆಯ ವಿರುದ್ಧ ಟೀಕೆಗಳು ಸಾಮಾನ್ಯವಾಗಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, ”ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ಪ್ರೇಮಪತ್ರಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...