Homeಕರ್ನಾಟಕಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ನಿಜಗುಣಾನಂದ ಸ್ವಾಮೀಜಿಗೆ ಹಿಂದುತ್ವವಾದಿಗಳಿಂದ ಕೊಲೆ ಬೆದರಿಕೆ ಪತ್ರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಪತ್ರ ಆಗಸ್ಟ್- 8ರಂದೇ ಈ ಪತ್ರ ಬಂದಿದ್ದು ವಿಷಯ ತಡವಾಗಿ ಬಹಿರಂಗವಾಗಿದೆ.

ಈ ಬೆದರಿಕೆ ಪತ್ರದಲ್ಲಿ ”2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬದರಿಕೆ ಪತ್ರ ಮಠಕ್ಕೆ ಬಂದಿದೆ. ತಮಗೆ ಬೆದರಿಕೆ ಪತ್ರ ಬಂದಿರುವ ಕುರಿತು ಶ್ರೀಗಳು ತಮ್ಮ ಭಕ್ತರಿಗೆ ವಿಷಯ ತಿಳಿಸಿದ್ದಾರೆ.

”ನಮ್ಮ ಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆ ಬರಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ. ಕೊಣೆಯಲ್ಲಿ ”ಓಂ ಶ್ರೀ ಕಾಳಿಕಾದೇವಿ ನಮಃ” ”ಸಹಿಷ್ಣು ಹಿಂದೂ” ಎಂದು ಬರೆಯಲಾಗಿದೆ.

2020ರಲ್ಲಿ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ. ತಮ್ಮ ಖಡಕ್ ಮಾತುಗಳಿಂದಲೇ ರಾಜ್ಯದಲ್ಲಿ ಖ್ಯಾತಿಗಳಿಸಿರುವ ನಿಜಗುಣಾನಂದ ಸ್ವಾಮೀಜಿ ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ದಶಕಗಳಿಂದ ಬಸವಣ್ಣನವರ ವಿಚಾರಧಾರೆಯ ಪ್ರಚಾರಕರಾಗಿದ್ದಾರೆ. ತಮ್ಮ ವಿಚಾರಗಳನ್ನು ಬಿತ್ತುತ್ತಾ ಬಂದಿದ್ದಾರೆ. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರ ಪ್ರವಚನದಲ್ಲಿ ಕಾಣಬಹುದಾಗಿದೆ.

ಪತ್ರದಲ್ಲೇನಿದೆ?

”ನಿಜಗುಣಾನಂದ ಸ್ವಾಮೀಜಿ ನಿನ್ನ ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಮಾತಿನ ಕೊಡ ತುಂಬಿದೆ. ಆದಷ್ಟು ಬೇಗ ನಿನ್ನ ಭಕ್ತಾದಿಗಳಿಗೆ ನಿನ್ನ ತಿಥಿ ಬಗ್ಗೆ ಹೇಳು. ನಮ್ಮಧರ್ಮದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತದೆ. ನಿನ್ನ ಅಂತಿಮ ದಿನಗಳು ಪ್ರಾರಂಭವಾಗಿವೆ. ದಿನಗಳನ್ನು ಎಣಿಸು. ಓಂ ಶ್ರೀ ಕಾಳಿಕಾದೇವಿ ನಮಃ, ಓಂ ಶ್ರೀ ಕಾಳಿಕಾದೇವಿ ನಮಃ” ಎಂದು ಬಿಳಿ ಹಾಳೆಯಲ್ಲಿ ಬರೆದು, ಅದನ್ನು ಪ್ಯಾಕೇಟ್‌ನಲ್ಲಿಟ್ಟು ಕಳಿಸಲಾಗಿದೆ.

ನಿಜಗುಣಾನಂದ ಶ್ರೀಗಳು ದಶಕಗಳಿಂದ ಬಸವಾದಿ ಶರಣ ತತ್ವಗಳನ್ನು ಪ್ರಚುರಪಡಿಸುವಲ್ಲಿ ನಿರತರಾಗಿದ್ದಾರೆ. ಬೈಲೂರಿನ ಮಠವನ್ನು ಕೇಂದ್ರವಾಗಿಸಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಅವರ ಪ್ರವಚನದಲ್ಲಿ ಮೌಡ್ಯ ವಿರೋಧಿ, ಕಂದಾಚಾರ ವಿರೋಧಿ, ಮೂರ್ತಿ ಪೂಜೆಯ ವಿರುದ್ಧ ಟೀಕೆಗಳು ಸಾಮಾನ್ಯವಾಗಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, ”ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ಪ್ರೇಮಪತ್ರಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...