Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...