Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...