Homeಮುಖಪುಟಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

- Advertisement -
- Advertisement -

ಮಾಧ್ಯಮಗಳು ತಮ್ಮ ದೇಶ ಮತ್ತು ಪ್ರದೇಶಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು G20 ದೇಶಗಳ ಸಂಪಾದಕರು ಮತ್ತು ಪತ್ರಕರ್ತರು ಒಟ್ಟುಗೂಡಿ ಸೆಪ್ಟೆಂಬರ್ 6ರಂದು ‘M20’ ಎಂಬ ಆನ್‌ಲೈನ್ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ ನಡೆಸಿದರು.

”M20 ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ”ಯ ಉದ್ದೇಶವು ಮಾಧ್ಯಮಗಳ ಕಳವಳಗಳನ್ನು ಎತ್ತಿ ತೋರಿಸುವುದು ಮತ್ತು ಸೆಪ್ಟೆಂಬರ್ 9-10ರಂದು ನವದೆಹಲಿಯಲ್ಲಿ G20 ನಾಯಕರ ಸಭೆಗೆ ಪತ್ರಿಕಾ ಸ್ವಾತಂತ್ರ್ಯದ ಮುಖ್ಯವಾದ ಸಂದೇಶವನ್ನು ಕಳುಹಿಸುವುದಾಗಿದೆ.

ಭಾರತದ 11 ಸಂಪಾದಕರು ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ಒಳಗೊಂಡ M20 ಸಂಘಟನಾ ಸಮಿತಿಯು ಈ ಶೃಂಗಸಭೆಯನ್ನು ಆಯೋಜಿಸಿದೆ.

M20 ಏಕೆ?

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಮತ್ತು ಸಂಘಟನಾ ಸಮಿತಿಯ ಸಂಚಾಲಕ ಸಿದ್ಧಾರ್ಥ್ ವರದರಾಜನ್ ಅವರು ತಮ್ಮ ಆರಂಭಿಕ ಭಾಷಣದಲ್ಲಿ, ”ಆತಿಥೇಯ ಸರ್ಕಾರ ಮತ್ತು ಅನೇಕ ಜಿ20 ಸದಸ್ಯರಿಗೆ ಮಾಧ್ಯಮ ಸ್ವಾತಂತ್ರ್ಯವು ಮುಖ್ಯ ಎಂದೆನಿಸದ ಕಾರಣಕ್ಕೆ M20 ಶೃಂಗಸಭೆಯ ಅಗತ್ಯವು ಉದ್ಭವಿಸಿದೆ” ಎಂದು ಹೇಳಿದರು.

”G20 ದೇಶಗಳು ಮಾಧ್ಯಮಗಳ ಸ್ವಾತಂತ್ರದ ಬಗ್ಗೆ ಮಾತವಲ್ಲ ಅನೇಕ ಸಾಮಾನ್ಯ ಸಮಸ್ಯೆಗಳು ಮತ್ತು ಮಾಧ್ಯಮಗಳು ಎದುರಿಸುತ್ತಿರುವ ಬೆದರಿಕೆಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ತೋರುತ್ತಿಲ್ಲ” ಎಂದು ಅವರು ಹೇಳಿದರು.

”ನಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾವುಗಳೇ ಮಾತನಾಡಬೇಕು ಆಗ ಅವರಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸಬಹುದು. ಜಿ20 ನಾಯಕರು ಶೀಘ್ರದಲ್ಲೇ ತಮ್ಮ ಶೃಂಗಸಭೆಗೆ ಸೇರುತ್ತಾರೆ, ಅವರು ತಮ್ಮ ದೇಶಗಳಲ್ಲಿ ಮಾಧ್ಯಮಗಳು ಮುಕ್ತವಾಗಿಲ್ಲದಿದ್ದರೆ, ಅಲ್ಲಿ ಯಾವುದೇ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಿಲ್ಲ” ಎಂದರು.

G20 ದೇಶಗಳಲ್ಲಿ ಮಾಧ್ಯಮಗಳು ಎದುರಿಸುತ್ತಿರುವ ಸಾಮಾನ್ಯ ಸವಾಲುಗಳು ದಮನದ ಸಮಸ್ಯೆ ಮತ್ತು ‘ಕಾಶ್ಮೀರದಿಂದ ಕನ್ಯಾಕುಮಾರಿ’ವರೆಗೆ ಪತ್ರಿಕೋದ್ಯಮವನ್ನು ಅಪರಾಧೀಕರಿಸಲು ಕಾನೂನಿನ ದುರುಪಯೋಗ, ಸ್ಪೈವೇರ್ ಮೂಲಕ ಪತ್ರಕರ್ತರ ಮೇಲೆ ಕಣ್ಗಾವಲು ಇಡುವುದು, ಮಾಧ್ಯಮಗಳು ತೀವ್ರ ಒತ್ತಡದಲ್ಲಿವೆ” ಎಂದು ವರದರಾಜನ್ ಹೇಳಿದರು.

ಇದನ್ನೂ ಓದಿ: G20 ಔತಣ ಕೂಟಕ್ಕೆ ಆಹ್ವಾನಿಸದ ಬಗ್ಗೆ ಮೌನ ಮುರಿದ ಖರ್ಗೆ

ದಿ ಹಿಂದೂ ಮಾಧ್ಯಮ ಸಂಸ್ಥೆಯ ಮಾಜಿ ಪ್ರಧಾನ ಸಂಪಾದಕ ಎನ್. ರಾಮ್ ಮಾತನಾಡಿ, ”ಜಾಗತಿಕವಾಗಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಭಾರತದ ಶ್ರೇಯಾಂಕವು ಕಳೆದ ಒಂಬತ್ತು ವರ್ಷಗಳಲ್ಲಿ ಅಥವಾ ಈ ಸರ್ಕಾರವು ಅಧಿಕಾರದಲ್ಲಿದ್ದಾಗಿನಿಂದ ನಿರಂತರವಾಗಿ ಅಡೆತಡೆಯಿಲ್ಲದೆ ಇಳಿಯುತ್ತಿದೆ” ಎಂದು ಹೇಳಿದರು.

ಸ್ವತಂತ್ರ ಸುದ್ದಿ ಸಂಸ್ಥೆಗಳ ಮೇಲಿನ ತೆರಿಗೆ ದಾಳಿಗಳು, ಭಯೋತ್ಪಾದನೆಗೆ ಸಂಬಂಧಿಸಿದ ಕಾನೂನುಗಳನ್ನು ಬಳಸಿಕೊಂಡು ಪತ್ರಕರ್ತರ ಬಂಧನಗಳು ಮತ್ತು ಕೇಂದ್ರೀಯ ಕಾನೂನುಗಳನ್ನು ಬಳಸಿಕೊಂಡು ಅಂತರ್ಜಾಲದಲ್ಲಿ ಸೆನ್ಸಾರ್ಶಿಪ್‌ನ್ನು ರಾಮ್ ಉಲ್ಲೇಖಿಸಿದರು.

”ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ಹೇಳಲಾಗುತ್ತದೆ. ಅವರನ್ನು ಭಕ್ತರು ಎಂದು ಕರೆಯಲಾಗುತ್ತದೆ. ಅವರು ನಿಜವಾಗಿಯೂ ತಾವು ಇಷ್ಟಪಡದವರನ್ನು ಗುರಿಯಾಗಿಸಿ ದಾಳಿ ಮಾಡುತ್ತಾರೆ” ಎಂದು ಅವರು ಹೇಳಿದರು.

ಸ್ವತಂತ್ರ ಪತ್ರಕರ್ತ ಮತ್ತು ಟರ್ಕಿಯ ಹರ್ರಿಯೆಟ್‌ನ ಮಾಜಿ ವಿದೇಶಿ ಸಂಪಾದಕ ಇಪೆಕ್ ಯೆಜ್ದಾನಿ ಮಾತನಾಡಿ, ”ಟರ್ಕಿಯಲ್ಲಿನ 90% ಕ್ಕಿಂತ ಹೆಚ್ಚು ಮುಖ್ಯವಾಹಿನಿಯ ಮಾಧ್ಯಮವು ಸರ್ಕಾರದ ನಿಯಂತ್ರಣದಲ್ಲಿದೆ ಅಥವಾ ನೇರವಾಗಿ ಸರ್ಕಾರದ ಒಡೆತನದಲ್ಲಿದೆ” ಎಂದು ಆತಂಕಕಾರಿ ವಿಚಾರವನ್ನು ಹಂಚಿಕೊಂಡರು.

”ಮಾಧ್ಯಮಗಳ ಮೇಲೆ ಹಿಡಿತ ಸಾಧಿಸಲು ಸರ್ಕಾರದ ಒತ್ತಡ ಹೇರಿ ಪತ್ರಕರ್ತರನ್ನು ಬಂಧಿಸಲಾಗಿದೆ, ಹಿಂಬಾಲಿಸಲಾಗಿದೆ. ಟರ್ಕಿಯಲ್ಲಿ ಹಲವು ವರ್ಷಗಳಿಂದ ಪತ್ರಕರ್ತರು ಅನಿಶ್ಚಿತ ನಿರುದ್ಯೋಗ ಮತ್ತು ಕಡಿಮೆ ವೇತನದೊಂದಿಗೆ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು.

”ಪತ್ರಕರ್ತರ ಬಂಧಿಸಲು ಒತ್ತಡಗಳು ಕಡಿಮೆಯಾಗಿದ್ದರೂ, ಸಾರ್ವಜನಿಕ ಜಾಹೀರಾತುಗಳನ್ನು ನ್ಯಾಯಯುತವಾಗಿ ವಿತರಿಸಲು ಸ್ಥಾಪಿಸಲಾದ ಟರ್ಕಿಯ ಸಾರ್ವಜನಿಕ ಜಾಹೀರಾತು ಏಜೆನ್ಸಿಯಂತಹ ಏಜೆನ್ಸಿಗಳ ಮೂಲಕ ಪ್ರಯೋಗಗಳು ಮತ್ತು ದಂಡಗಳು ಹೆಚ್ಚಿವೆ. ಸರ್ಕಾರವನ್ನು ಟೀಕಿಸುವ ಎಲ್ಲಾ ಪತ್ರಿಕೆಗಳ ವಿರುದ್ಧ ಸರ್ಕಾರ ಯುದ್ಧ ಘೋಷಿಸಿದೆ” ಎಂದು ಅವರು ಹೇಳಿದರು.

ಮ್ಯಾನ್ಮಾರ್ ನೌ ಸಂಪಾದಕ ಸ್ವೆ ವಿನ್ ಅವರು ಮಾತನಾಡಿ, ”ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೇಳಿದರು.

”ನಾನು ಹೇಳಬಯಸುವುದೇನೆಂದರೆ, ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್, ದಮನ ಮತ್ತು ಕ್ರೂರತೆಯ ವಿಷಯದಲ್ಲಿ ಉತ್ತರ ಕೊರಿಯಾವನ್ನು ಹೋಲುವ ದೇಶವಾಗಿದೆ. ಬಹಳಷ್ಟು ಕ್ರೌರ್ಯಗಳು ನಡೆಯುತ್ತಿವೆ. ನಮ್ಮ ತ್ಯಂತ ಪುಟ್ಟ ದೇಶವಾಗಿರುವುದರಿಂದ, ನಮ್ಮ ದೇಶದೆಡೆಗೆ ಯಾರೂ ಗಮನಹರಿಸುತ್ತಿಲ್ಲ” ಎಂದು ಅವರು ಹೇಳಿದರು.

ಇದೇ ರೀತಿ ಈ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆಯಲ್ಲಿ ಅರಬ್, ಇಂಡೋನೇಷಿಯಾ ,ಯುರೋಪ್‌, ಇಟಲಿ, ಬ್ರೆಜಿಲ್‌ನಲ್ಲಿ, ದಕ್ಷಿಣ ಆಫ್ರಿಕಾ, ಜಪಾನ್‌, ಕೊರಿಯಾ, ಆಸ್ಟ್ರೇಲಿಯಾ ಕೆನಡಾ ದೇಶದ ಮಾಧ್ಯಮ ಪ್ರತಿನಿಧಿಗಳು ತಾವು ತಮ್ಮ ದೇಶದಲ್ಲಿ ಎದುರಿಸುತ್ತಿರುವ ಸವಾಲುಗಳು ಬಗ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...