Homeಮುಖಪುಟಬಾಲ್ಯ ವಿವಾಹ ತಡೆಯಲು ಶೀಘ್ರದಲ್ಲೇ 2,000ಕ್ಕೂ ಹೆಚ್ಚು ಜನರ ಬಂಧನ: ಹಿಮಂತ್ ಬಿಸ್ವಾ ಶರ್ಮಾ

ಬಾಲ್ಯ ವಿವಾಹ ತಡೆಯಲು ಶೀಘ್ರದಲ್ಲೇ 2,000ಕ್ಕೂ ಹೆಚ್ಚು ಜನರ ಬಂಧನ: ಹಿಮಂತ್ ಬಿಸ್ವಾ ಶರ್ಮಾ

- Advertisement -
- Advertisement -

”ಬಾಲ್ಯವಿವಾಹದ ವಿರುದ್ಧದ ಅಭಿಯಾನದ ಭಾಗವಾಗಿ ರಾಜ್ಯ ಪೊಲೀಸರು ಮುಂದಿನ ಹತ್ತು ದಿನಗಳಲ್ಲಿ 2,000 ರಿಂದ 3,000 ಪುರುಷರನ್ನು ಬಂಧಿಸಲಿದ್ದಾರೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.

ಅಸ್ಸಾಂನ ಸರ್ಕಾರವು ಫೆಬ್ರವರಿಯಿಂದ ರಾಜ್ಯವ್ಯಾಪಿ ಬಾಲ್ಯ ವಿವಾಹಗಳ ವಿರುದ್ಧ ಶಿಸ್ತುಕ್ರಮವನ್ನು ಕೈಗೊಂಡಿದೆ. 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾದವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಬಿಜೆಪಿ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಶರ್ಮಾ ಅವರು ಬಾಲ್ಯ ವಿವಾಹದ ವಿರುದ್ಧದ ಅಭಿಯಾನದ ಕುರಿತು ಮಾತನಾಡಿದ್ದು, ”ಆರು ತಿಂಗಳ ಹಿಂದೆ, ನಾನು ಅಸ್ಸಾಂನಲ್ಲಿ ಬಾಲ್ಯವಿವಾಹ ಪ್ರಕರಣದಲ್ಲಿ 5,000 ಜನರನ್ನು ಬಂಧಿಸಿದ್ದೆ” ಎಂದು ಹೇಳಿದರು.

”ನಾನು ಜಿ 20 ಕೊನೆಗೊಳ್ಳಲು ಕಾಯುತ್ತಿದ್ದೆ. ಇನ್ನು 10 ದಿನಗಳಲ್ಲಿ 2,000-3,000 ಪುರುಷರನ್ನು ಬಾಲ್ಯವಿವಾಹ ಪ್ರಕರಣದಲ್ಲಿ ಬಂಧಿಸುತ್ತೇನೆ. ಏಕೆಂದರೆ ನಾವು ಬಾಲ್ಯ ವಿವಾಹವನ್ನು ನಿರ್ಮೂಲನೆ ಮಾಡಬೇಕು ಎಂದು ಕಾನೂನು ರೂಪಿಸಲಾಗಿದೆ. ಆದರೂ ಅಂತಹ ಪ್ರಕರಣಗಳು ನಡೆದರೆ ಆ ಹೆಣ್ಣುಮಕ್ಕಳು ಎಂದಿಗೂ ಪ್ರಗತಿ ಹೊಂದುವುದಿಲ್ಲ, ಅವರು ಶೋಷಣೆಗೆ ಬಲಿಯಾಗುತ್ತಲೇ ಇರುತ್ತಾರೆ” ಎಂದು ಎಚ್ಚರಿಸಿದರು.

”ನಾವು ಮುಸ್ಲಿಂ ವಿರೋಧಿ ಎಂದು ಕೆಲವರು ಹೇಳುತ್ತಾರೆ. ಆದರೆ ತ್ರಿವಳಿ ತಲಾಖ್, ಬಹುಪತ್ನಿತ್ವ ಮತ್ತು ಬಾಲ್ಯವಿವಾಹವನ್ನು ಕೊನೆಗೊಳಿಸುವ ಮೂಲಕ ಮುಸ್ಲಿಮರಿಗೆ ಒಳ್ಳೆಯದನ್ನೇ ಮಾಡಿದ್ದೇವೆ” ಎಂದು ಹೇಳಿದರು.

ಪೊಲೀಸರ ಮಾಹಿತಿ ಪ್ರಕಾರ ಬಂಧಿತರಲ್ಲಿ ಹೆಚ್ಚಿನವರು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಯವರು ಎಂದು ತೋರಿಸಿದೆ.

”ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಕಾನೂನನ್ನು ತರಲಿದೆ” ಎಂದು ಜುಲೈನಲ್ಲಿ ಶರ್ಮಾ ಹೇಳಿದ್ದರು.

ಬಹುಪತ್ನಿತ್ವ – ಒಂದಕ್ಕಿಂತ ಹೆಚ್ಚು ಹೆಂಡತಿಯರನ್ನು ಹೊಂದುವ ಅಭ್ಯಾಸ – ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಅನುಮತಿಸಲಾಗಿದೆ. 1950ರ ದಶಕದಲ್ಲಿ ಹಿಂದೂ ಕೋಡ್ ಬಿಲ್ ಮೂಲಕ ಹಿಂದೂಗಳಲ್ಲಿ ಈ ಆಚರಣೆಯನ್ನು ನಿಷೇಧಿಸಲಾಯಿತು, ಅದು ಉತ್ತರಾಧಿಕಾರ, ದತ್ತು, ಮದುವೆ ಮತ್ತು ವಿಚ್ಛೇದನದಂತಹ ಅಂಶಗಳನ್ನು ನಿಯಂತ್ರಿಸುತ್ತದೆ.

ಇದನ್ನೂ ಓದಿ: ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...