Homeಕರ್ನಾಟಕಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

ಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಗೋಕಾಕ, ಕಾಗವಾಡ ಮತ್ತು ಅಥಣಿ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ‌ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮಧ್ಯಂತರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ ಎಂದ ವ್ಯಂಗ್ಯವಾಡಿದ್ದಾರೆ.

ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಹೇಳುವ ಮೂಲಕ ಬಿಜೆಪಿಯನ್ನು ಟಾರ್ಗೆಟ್ ಮಾಡಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ.

ಯಡಿಯೂರಪ್ಪ, ಬಡವನ ಹಸಿವಿನ ಬಗ್ಗೆ ನೀವು ಅರಿಯದಷ್ಟು ನಿಮ್ಮ ಹೊಟ್ಟೆ ತುಂಬಿದೆಯೇ? ಅಥವಾ ನಿಮ್ಮ ಪಕ್ಷವು ಗಣ್ಯರ ಹಸಿವನ್ನು ಮಾತ್ರ ಪೂರೈಸುತ್ತದೆಯೇ? ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚುವ ಯಾವುದೇ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್ ನಂತಹ ಜನಪರವಾದ ಯೋಜನೆಗಳು ಮತ್ತು ನೀತಿಗಳನ್ನು ಕಡಿಮೆ ಮಾಡಲು ಅಥವಾ ನಾಶಮಾಡಲು ಬಿಜೆಪಿ ಸರ್ಕಾರ ಮುಂದಾಗುತ್ತಿದೆ. ನಮ್ಮ ಬೆದರಿಕೆಯ ನಂತರ ಅನ್ನ ಭಾಗ್ಯ ನಿಲ್ಲಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಇಂದಿರಾ ಕ್ಯಾಂಟೀನ್ ಬಗ್ಗೆಯೂ ಸಹ ನಮ್ಮ ನಿಲುವು ಭಿನ್ನವಾಗಿರುವುದಿಲ್ಲ. ಹಾಗಾಗಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹೋದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಪ್ರತಿದಿನ 3 ಲಕ್ಷಕ್ಕೂ ಹೆಚ್ಚು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯಗಳಿಗೆ ಬಲಿಯಾದ ಅನೇಕ ಅಂಚಿನಲ್ಲಿರುವ ವರ್ಗಗಳ ಹಸಿವನ್ನು ನೀಗಿಸುವ ಕಾರ್ಯಕ್ರಮವಿದು. ಕ್ಯಾಂಟೀನ್‌ಗಳನ್ನು ಮುಚ್ಚುವ ಯಾವುದೇ ಪ್ರಯತ್ನವು ನಗರ ಬಡತನ ಮತ್ತು ಬಡ ಕುಟುಂಬಗಳ ಜೀವನೋಪಾಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಬಜೆಟ್ 2.3 ಲಕ್ಷಕ್ಕಿಂತ ಹೆಚ್ಚಿನದಾಗಿದೆ. ಅದರಲ್ಲಿ ಯಡಿಯುರಪ್ಪನವರು ಕೇವಲ 300-400 ಕೋಟಿ ನೀಡುವ ಮೂಲಕ ಇಂದಿರಾ ಕ್ಯಾಂಟೀನ್ ನಡೆಯಲು ಅವಕಾಶ ಕಲ್ಪಿಸುವುದು ಕಷ್ಟವೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯನವರು ನಿರ್ಗತಿಕರಿಗೆ ಆಹಾರಕ್ಕಾಗಿ ಸಬ್ಸಿಡಿಯ ಅರ್ಹತೆ ಇಲ್ಲವೆನ್ನುವುದಾದರೆ, ಮುಂದುವರಿದು ವರ್ಗಗಳಿಗೂ ಸಹ ಸಬ್ಸಿಡಿಯನ್ನು ಕೊಡಬಾರದು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...