Homeಕರ್ನಾಟಕದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

- Advertisement -
- Advertisement -

ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ಡಿಕೆ, ”ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು” ಎಂದರು.

ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ:

”ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತಾ ಇರ್ತೀರಲ್ಲ, ಅಲ್ಲವೇ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ?” ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

”ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ಐಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ?” ಎಂದು ಕಿಡಿಕಾರಿದ್ದಾರೆ.

”ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದರಲ್ಲ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ.. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

”ಮಚ್ವು, ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲಾ, ದಲಿತರ ಪರ ಕಾಳಜಿ ಇರುವ ವಿಧೇಯಕವನ್ನು ಬೇರೆ ಬೇರೆ ಸದನದಲ್ಲಿ ಪಾಸ್ ಮಾಡಿಕೊಂಡಿದ್ದೀರಲ್ಲ, ಕಸದ ಬುಟ್ಟಿಗೆ ಹಾಕಲಿಕ್ಕೆ ಆ ಬಿಲ್ ಅನ್ನು ಪಾಸ್ ಮಾಡಿಕೊಂಡಿದ್ದೀರಾ? ತಕ್ಷಣ ನಿಮ್ಮ ಮಂತ್ರಿಯನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

”ನಾವು ಟೀಕೆ ಮಾಡಿದರೆ ಅಸೂಯೆ ಅಂತಾರೆ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೆನಾ ನೀವು ದಲಿತರನ್ನು ಉದ್ದಾರ ಮಾಡುವುದು ಎಂದ ಅವರು; ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ” ಎಂದು ಕಿಡಿಕಾರಿದ್ದಾರೆ.

”ದಲಿತ ಸಂಘಟನೆಗಳಿಗೂ ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಅವರು ಈ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಇರಬಾರದು. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು”  ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ಏನಿದು ಪ್ರಕರಣ?

ಸಚಿವ ಡಿ ಸುಧಾಕರ್ ವಿರುದ್ಧ ಯಲಹಂಕದಲ್ಲಿ ವಿವಾದಿತ ಆಸ್ತಿಯಿಂದ ಕುಟುಂಬವನ್ನು ಅತಿಕ್ರಮ ಪ್ರವೇಶ ಮಾಡಿ ಬಲವಂತವಾಗಿ ಹೊರಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಸಚಿವರು ಮತ್ತು ಇತರರ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಅವರನ್ನು ಆರೋಪಿ ಸಂಖ್ಯೆ 1 ಮತ್ತು ಸಚಿವ ಸುಧಾಕರ್ ಅವರನ್ನು ಆರೋಪಿ ಸಂಖ್ಯೆ 2 ಎಂದು ಹೆಸರಿಸಲಾಗಿದೆ. ಶ್ರೀನಿವಾಸ್ ಮತ್ತು ಭಾಗ್ಯಮ್ಮ ಅವರನ್ನು 3 ಮತ್ತು 4 ಆರೋಪಿಗಳಾಗಿ ಹೆಸರಿಸಲಾಗಿದೆ. ಸುಧಾಕರ್ ಸೆವೆನ್ ಹಿಲ್ಸ್ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ತನ್ನ ಮತ್ತು ಸೆವೆನ್ ಹಿಲ್ಸ್ ಡೆವಲಪರ್ಸ್ ನಡುವೆ ನ್ಯಾಯಾಲಯದಲ್ಲಿ ಯಲಹಂಕದ ಸರ್ವೆ ನಂಬರ್ 108/1ಕ್ಕೆ ಸಂಬಂಧಿಸಿದ ಆಸ್ತಿ ವಿವಾದ ಬಾಕಿ ಇದೆ ಎಂದು ಸುಬಮ್ಮ ಎಂಬ ದೂರುದಾರರು ಆರೋಪಿಸಿದ್ದಾರೆ.

ಶನಿವಾರದಂದು ಸುಧಾಕರ್ ಇತರ 35 ಮಂದಿ ಜೆಸಿಬಿಯೊಂದಿಗೆ ಬಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶೀಟ್ ಶೆಡ್ ಮತ್ತು ಮನೆಯ ಕಾಂಪೌಂಡ್ ಅನ್ನು ಧ್ವಂಸಗೊಳಿಸಿದ್ದಾರೆ. ಕುಟುಂಬದವರು ಮರಳಿ ಬಂದು ಸಚಿವರನ್ನು ವಿಚಾರಿಸಿದಾಗ ಜಾತಿ ನಿಂದನೆ ಮಾಡಿದರು ಎಂದು ದೂರುದಾರರು ಹೇಳಿದ್ದಾರೆ. ಸಚಿವ ಸುಧಾಕರ್ ತನ್ನ ಮಗಳು ಆಶಾ ಮೇಲೆ ಹಲ್ಲೆ ನಡೆಸಿದ್ದಾರೆ. ಅತಿಕ್ರಮಣದಾರರನ್ನು ತೆರವುಗೊಳಿಸುವಂತೆ ಸುಬಮ್ಮ ಪೊಲೀಸರಿಗೆ ಸೂಚಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಮಂಗಳವಾರ, ವಿವಾದಿತ ಸ್ಥಳದಲ್ಲಿ ಸಚಿವರು ಎಂದು ಹೇಳಲಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ದೂರಿನ ಆಧಾರದ ಮೇಲೆ ಪೊಲೀಸರು ದೌರ್ಜನ್ಯ ತಡೆ ಕಾಯ್ದೆಯಡಿ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಆರೋಪವನ್ನು ನಿರಾಕರಿಸಿದ ಸಚಿವರು, ತಾವು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಹೇಳಿದ್ದಾರೆ. “ನಾನು ಹಲವಾರು ವರ್ಷಗಳಿಂದ ಅವರನ್ನು ಭೇಟಿ ಮಾಡಿಲ್ಲ. ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಜಮೀನು ಕಂಪನಿಗೆ ಸೇರಿದ್ದು, ಹಣವನ್ನು ಅವರ ಖಾತೆಗೆ ವರ್ಗಾಯಿಸಲಾಗಿದೆ ಮತ್ತು ಅದರ ಪುರಾವೆ ನಮ್ಮ ಬಳಿ ಇದೆ ಎಂದು ಸಚಿವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...