Homeಕರ್ನಾಟಕದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

- Advertisement -
- Advertisement -

ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ಡಿಕೆ, ”ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು” ಎಂದರು.

ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ:

”ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತಾ ಇರ್ತೀರಲ್ಲ, ಅಲ್ಲವೇ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ?” ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

”ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ಐಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ?” ಎಂದು ಕಿಡಿಕಾರಿದ್ದಾರೆ.

”ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದರಲ್ಲ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ.. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

”ಮಚ್ವು, ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲಾ, ದಲಿತರ ಪರ ಕಾಳಜಿ ಇರುವ ವಿಧೇಯಕವನ್ನು ಬೇರೆ ಬೇರೆ ಸದನದಲ್ಲಿ ಪಾಸ್ ಮಾಡಿಕೊಂಡಿದ್ದೀರಲ್ಲ, ಕಸದ ಬುಟ್ಟಿಗೆ ಹಾಕಲಿಕ್ಕೆ ಆ ಬಿಲ್ ಅನ್ನು ಪಾಸ್ ಮಾಡಿಕೊಂಡಿದ್ದೀರಾ? ತಕ್ಷಣ ನಿಮ್ಮ ಮಂತ್ರಿಯನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

”ನಾವು ಟೀಕೆ ಮಾಡಿದರೆ ಅಸೂಯೆ ಅಂತಾರೆ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೆನಾ ನೀವು ದಲಿತರನ್ನು ಉದ್ದಾರ ಮಾಡುವುದು ಎಂದ ಅವರು; ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ” ಎಂದು ಕಿಡಿಕಾರಿದ್ದಾರೆ.

”ದಲಿತ ಸಂಘಟನೆಗಳಿಗೂ ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಅವರು ಈ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಇರಬಾರದು. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು”  ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ಏನಿದು ಪ್ರಕರಣ?

ಸಚಿವ ಡಿ ಸುಧಾಕರ್ ವಿರುದ್ಧ ಯಲಹಂಕದಲ್ಲಿ ವಿವಾದಿತ ಆಸ್ತಿಯಿಂದ ಕುಟುಂಬವನ್ನು ಅತಿಕ್ರಮ ಪ್ರವೇಶ ಮಾಡಿ ಬಲವಂತವಾಗಿ ಹೊರಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಸಚಿವರು ಮತ್ತು ಇತರರ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಅವರನ್ನು ಆರೋಪಿ ಸಂಖ್ಯೆ 1 ಮತ್ತು ಸಚಿವ ಸುಧಾಕರ್ ಅವರನ್ನು ಆರೋಪಿ ಸಂಖ್ಯೆ 2 ಎಂದು ಹೆಸರಿಸಲಾಗಿದೆ. ಶ್ರೀನಿವಾಸ್ ಮತ್ತು ಭಾಗ್ಯಮ್ಮ ಅವರನ್ನು 3 ಮತ್ತು 4 ಆರೋಪಿಗಳಾಗಿ ಹೆಸರಿಸಲಾಗಿದೆ. ಸುಧಾಕರ್ ಸೆವೆನ್ ಹಿಲ್ಸ್ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ತನ್ನ ಮತ್ತು ಸೆವೆನ್ ಹಿಲ್ಸ್ ಡೆವಲಪರ್ಸ್ ನಡುವೆ ನ್ಯಾಯಾಲಯದಲ್ಲಿ ಯಲಹಂಕದ ಸರ್ವೆ ನಂಬರ್ 108/1ಕ್ಕೆ ಸಂಬಂಧಿಸಿದ ಆಸ್ತಿ ವಿವಾದ ಬಾಕಿ ಇದೆ ಎಂದು ಸುಬಮ್ಮ ಎಂಬ ದೂರುದಾರರು ಆರೋಪಿಸಿದ್ದಾರೆ.

ಶನಿವಾರದಂದು ಸುಧಾಕರ್ ಇತರ 35 ಮಂದಿ ಜೆಸಿಬಿಯೊಂದಿಗೆ ಬಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶೀಟ್ ಶೆಡ್ ಮತ್ತು ಮನೆಯ ಕಾಂಪೌಂಡ್ ಅನ್ನು ಧ್ವಂಸಗೊಳಿಸಿದ್ದಾರೆ. ಕುಟುಂಬದವರು ಮರಳಿ ಬಂದು ಸಚಿವರನ್ನು ವಿಚಾರಿಸಿದಾಗ ಜಾತಿ ನಿಂದನೆ ಮಾಡಿದರು ಎಂದು ದೂರುದಾರರು ಹೇಳಿದ್ದಾರೆ. ಸಚಿವ ಸುಧಾಕರ್ ತನ್ನ ಮಗಳು ಆಶಾ ಮೇಲೆ ಹಲ್ಲೆ ನಡೆಸಿದ್ದಾರೆ. ಅತಿಕ್ರಮಣದಾರರನ್ನು ತೆರವುಗೊಳಿಸುವಂತೆ ಸುಬಮ್ಮ ಪೊಲೀಸರಿಗೆ ಸೂಚಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಮಂಗಳವಾರ, ವಿವಾದಿತ ಸ್ಥಳದಲ್ಲಿ ಸಚಿವರು ಎಂದು ಹೇಳಲಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ದೂರಿನ ಆಧಾರದ ಮೇಲೆ ಪೊಲೀಸರು ದೌರ್ಜನ್ಯ ತಡೆ ಕಾಯ್ದೆಯಡಿ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಆರೋಪವನ್ನು ನಿರಾಕರಿಸಿದ ಸಚಿವರು, ತಾವು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಹೇಳಿದ್ದಾರೆ. “ನಾನು ಹಲವಾರು ವರ್ಷಗಳಿಂದ ಅವರನ್ನು ಭೇಟಿ ಮಾಡಿಲ್ಲ. ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಜಮೀನು ಕಂಪನಿಗೆ ಸೇರಿದ್ದು, ಹಣವನ್ನು ಅವರ ಖಾತೆಗೆ ವರ್ಗಾಯಿಸಲಾಗಿದೆ ಮತ್ತು ಅದರ ಪುರಾವೆ ನಮ್ಮ ಬಳಿ ಇದೆ ಎಂದು ಸಚಿವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...