Homeಕರ್ನಾಟಕಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಆಯವ್ಯಯ(ಬಜೆಟ್) ಭಾಷಣದಲ್ಲಿ ಘೋಷಿಸಿದಂತೆ ಗಿಗ್ ಕಾರ್ಮಿಕರಿಗೆ ಅಂದರೇ ಸ್ವಿಗ್ಗಿ, ಜೊಮಾಟೊ(Zomato) ಮತ್ತು ಅಮೆಜಾನ್​​ನಂತಹ (Amazon) ಇ-ಕಾಮರ್ಸ್​​ ಡೆವಲರಿ ಬಾಯ್​​ಗಳಿಗೆ ವಿಮಾ ಸೌಲಭ್ಯ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಸಿಗ್ಗಿ , ಜೊಮಾಟೋ, ಅಮಜಾನ್‌, ಕ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತೆ ನೀಡಲು 12 ಲಕ್ಷ ಜೀವ ವಿಮೆ ಮತ್ತು 12 ಲಕ್ಷ ಅಪಘಾತ ಪರಿಹಾರ ವಿಮಾಸ ಲಭ್ಯ ಸೇರಿ ಒಟ್ಟು 4 ಲಕ್ಷ ವಿಮಾ ಸೌಲಭ್ಯ ಜಾರಿ ಮಾಡಲಾಗುವುದು. ಇದನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿ ಮಾಡಲು ಆದೇಶಿಸಲಾಗಿದೆ.

ರಾಜ್ಯ ಸರ್ಕಾರ ಸೆ.08 ರಂದು ಅಧಿಕೃತ ಸುತ್ತೋಲೆ ಹೊರಡಿಸುವ ಮೂಲಕ ಯೋಜನೆಯನ್ನು ಜಾರಿ ಮಾಡಿದೆ. 2022 ರ ನೀತಿ ಆಯೋಗದ ವರದಿ ಪ್ರಕಾರ ರಾಜ್ಯದಲ್ಲಿ ಅಂದಾಜು 2.3 ಲಕ್ಷ ಗಿಗ್ ಕೆಲಸಗಾರರಿದ್ದಾರೆ. ಆದರೆ ರಾಜ್ಯ ಕಾರ್ಮಿಕ ಇಲಾಖೆಯು ಈ ಬಗ್ಗೆ ಯಾವುದೇ ನಿಖರ ಅಂಕಿ-ಸಂಖ್ಯೆ ಹೊಂದಿಲ್ಲ. ಸರಕು ಮತ್ತು ಸೇವೆಗಳನ್ನು ನಿಗದಿತ ಸಮಯದಲ್ಲಿ ತಲುಪಿಸಲು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುವ ಕಾರ್ಮಿಕರ ಭದ್ರತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕಾದರೇ ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.

ಗಿಗ್ ಕಾರ್ಮಿಕರಿಗೆ ಜೀವ ವಿಮೆ: ಷರತ್ತುಗಳು-

  • 18-60 ವರ್ಷ ವಯಸ್ಸಿನ ಯಾವುದೇ ವ್ಯಕ್ತಿ ಮತ್ತು ಕನಿಷ್ಠ ಒಂದು ವರ್ಷದ ಅವಧಿಯವರೆಗೆ ಯಾವುದೇ ಆನ್‌ಲೈನ್ ಆಹಾರ ವಿತರಣೆ ಅಥವಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಕಂಪನಿಯಲ್ಲಿ ಗಿಗ್ ಕೆಲಸಗಾರರಾಗಿ ಕೆಲಸ ಮಾಡುತ್ತಿರಬೇಕು.
  • ಅಪಘಾತದಲ್ಲಿ ಮೃತಪಟ್ಟರೇ 4 ಲಕ್ಷ ರೂಪಾಯಿಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ 2 ಲಕ್ಷ ರೂಪಾಯಿ ಅಪಘಾತ ಕವರೇಜ್ ಕೂಡ ಸೇರಿದೆ. ಒಂದು ವೇಳೆ ಅಪಘಾತದಿಂದ ಗಾಯ ಮತ್ತು ಅಂಗವೈಕಲ್ಯರಾದರೆ ಅದರ ಪ್ರಮಾಣವನ್ನು ಆಧರಿಸಿ ಗಿಗ್ ಕೆಲಸಗಾರರಿಗೆ ಹಣ ನೀಡಲಾಗುತ್ತದೆ.
  • ಆಸ್ಪತ್ರೆಗೆ ದಾಖಲಾದರೆ, 1 ಲಕ್ಷದವರೆಗಿನ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ.
  • ಗಿಗ್ ಕಾರ್ಮಿಕರು ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಭವಿಷ್ಯ ನಿಧಿ ಅಥವಾ ಇಎಸ್‌ಐ ಹೊಂದಿದ್ದರೆ ಹಂತವರು ಯೋಜನೆಗೆ ಅರ್ಹರಾಗಿರುವುದಿಲ್ಲ.
  • ಕೆಲಸದಲ್ಲಿರುವಾಗ ಗಿಗ್  ಕಾರ್ಮಿಕ ಮದ್ಯಪಾನ ಅಥವಾ ಡ್ರಗ್ಸ್‌ನ ಅಮಲಿನಲ್ಲಿ ಅಪಘಾತ ಅಥವಾ ಮೃತಪಟ್ಟರೆ ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ.
  • ಗಿಗ್ ಕಾರ್ಮಿಕ ಆತ್ಮಹತ್ಯೆಯಿಂದ ಸತ್ತರೆ, ಉದ್ದೇಶಪೂರ್ವಕವಾಗಿ ಯಾರನ್ನಾದರೂ ನೋಯಿಸಲು ಅಪಘಾತದ ಕೃತ್ಯವನ್ನು ಮಾಡಿದರೆ ಅಥವಾ ಮಾನಸಿಕ ಅಸ್ಥಿರತೆಯಿಂದ ಅಪಘಾತ ಸಂಭವಿಸಿದಲ್ಲಿ ಯೋಜನೆಯ ಪ್ರಯೋಜನೆ ಪಡೆಯಲು ಸಾಧ್ಯವಿಲ್ಲ.
  • ಅಪಘಾತ ಅಥವಾ ಸಾವಿನ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಮತ್ತು ಇ-ಲೇಬರ್ ಐಡೆಂಟಿಟಿ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರ ನೀಡಿ ನೋಂದಾಯಿಸಿಬೇಕು.

ಇದನ್ನೂ ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...