Homeಮುಖಪುಟಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

ಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ನಿಂದ ಮೃತಪಟ್ಟಿರುವುದು ದೃಡಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ದೃಢಪಡಿಸಿದ್ದಾರೆ. ನಿನ್ನೆ ಸೋಮವಾರ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರ ಅಸಹಜ ಸಾವಿನ ನಂತರ ಜಿಲ್ಲೆಯಾದ್ಯಂತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ndtv ವರದಿ ಮಾಡಿದೆ.

ಕೇಂದ್ರದಿಂದ ಕೇರಳಕ್ಕೆ ತಂಡವನ್ನು ಕಳುಹಿಸಲಾಗಿದೆ. ನಿಫಾ ಕುರಿತು ರಾಜ್ಯಕ್ಕೆ ತಂಡ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ 30 ರಂದು ಮೊದಲ ಪ್ರಕರಣ ದಾಖಲಾಗಿತ್ತು. ಎರಡನೇ ಪ್ರಕರಣ ನಿನ್ನೆ ವರದಿಯಾಗಿದೆ. ಕೋಝಿಕ್ಕೋಡ್ನಲ್ಲಿ ಈಗಾಗಲೇ ಕೇರಳ ಸರ್ಕಾರ ಕಂಟ್ರೋಲ್ ರೂಂ ಸ್ಥಾಪಿಸಿದೆ. ಜನರು ಮಾಸ್ಕ್ ಬಳಸುವಂತೆ ಸೂಚನೆ ನೀಡಿದೆ.

ನಿಫಾ ವೈರಸ್ ಕುರಿತು ಈಗಾಗಲೇ ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಗಾಬರಿ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಅಗತ್ಯ. ಮೃತ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದಿದ್ದಾರೆ.

ನಿಫಾ ವೈರಸ್ ಮೊದಲ ಬಾರಿಗೆ ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ 2018 ರಲ್ಲಿ ಪತ್ತೆಯಾಗಿತ್ತು. ಬಳಿಕ 2021ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಂಡು ಬಂದಿತ್ತು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ನಿಪಾಹ್ ವೈರಸ್ ಹಣ್ಣುಗಳನ್ನು ಕಚ್ಚುವ ಬಾವಲಿಗಳಿಂದ ಉಂಟಾಗುತ್ತದೆ. ಅದನ್ನು ಸೇವಿಸುವ ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ತೊಂದರೆಯ ಜೊತೆಗೆ, ಇದು ಜ್ವರ, ಸ್ನಾಯು ನೋವು, ತಲೆನೋವು, ಜ್ವರ, ತಲೆತಿರುಗುವಿಕೆ ಮತ್ತು ವಾಕರಿಕೆ ನಿಫಾದ ಪ್ರಮುಖ ಲಕ್ಷಣವಾಗಿದೆ.

ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು ಆಗಸ್ಟ್ 30ರಂದು ಸಾವನ್ನಪ್ಪಿದ್ದಾರೆ. ಅವರು ಸ್ಯಾಂಪಲ್ ಕಳುಹಿಸಿರಲಿಲ್ಲ. ಇನ್ನೊಬ್ಬರು ಸೋಮವಾರ ಮೃತಪಟ್ಟಿದ್ದು, ಅವರ ಸ್ಯಾಂಪಲ್ ಅನ್ನು ಪುಣೆಗೆ ಕಳುಹಿಸಿರುವ ಬಗ್ಗೆ ತಿಳಿಸಿದ್ದರು.

ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಯಿಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಜನರಿಗೆ ಮನವಿ ಮಾಡಿದರು.

ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

ವೈರಸ್ ಹೇಗೆ ಹರಡುತ್ತದೆ?

* ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
* ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
* ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
* ಬಳಿಕ ಪ್ರಜ್ಞಾಹೀನರಾಗುತ್ತಾರೆ
* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...