Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...