Homeಕರ್ನಾಟಕಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಯೋಜನೆಯ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ  Aaj Tak ವಿಡಿಯೋವನ್ನು ಡಿಲಿಟ್‌ ಮಾಡಿರುವುದು ಕಂಡು ಬಂದಿದೆ.

ಕರ್ನಾಟಕ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಬಗ್ಗೆ ಬೆಂಗಳೂರಿನಲ್ಲಿ ಕೆಎಂಡಿಸಿ ಅಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ.

ಎಫ್ಐಆರ್ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆಯೇ ಆಜ್‌ ತಕ್ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಯೂಟ್ಯೂಬ್‌ ಹಾಗೂ ಸೋಷಿಯಲ್ ಮೀಡಿಯಾದಿಂದ ವಿಡಿಯೋ ‘ಡಿಲೀಟ್’ ಮಾಡಿದ್ದಾರೆ.

ಎಫ್ಐಆರ್ ದಾಖಲಾಗುತ್ತಿದ್ದಂತೆ ವಿಡಿಯೋ ‘ಡಿಲೀಟ್’ ಮಾಡಿರುವ ಹಿನ್ನೆಲೆಯಲ್ಲಿ ‘ಆಜ್‌ ತಕ್’ ಮತ್ತು ಸುಧೀರ್ ಚೌಧರಿಯನ್ನು ಪ್ರಶ್ನಿಸಿರುವ ನೆಟ್ಟಿಗರು, ನೀವು ತಪ್ಪು ಮಾಡಿಲ್ಲ ಎಂದಾದರೆ, ಯೂಟ್ಯೂಬ್‌ ಮತ್ತು ಟ್ವಿಟ್ಟರ್‌ನಿಂದ ವಿಡಿಯೋ ಯಾಕೆ ಡಿಲೀಟ್ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

Aaj Tak ಪತ್ರಕರ್ತ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದಾರೆ. Aaj Tak ವರದಿಯಲ್ಲಿ ಕರ್ನಾಟಕದಲ್ಲಿ ಅಲ್ಪಸಂಖ್ಯಾತರಿಗೆ ಸಬ್ಸಿಡಿ ನೀಡಿದ್ದು, ಹಿಂದೂಗಳಿಗೆ ಇಲ್ಲ ಎಂದು ವರದಿಗೆ ತಲೆ ಬರಹವನ್ನು ನೀಡಿತ್ತು.

ವರದಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಬಡ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಮಾತ್ರ ಆಟೋರಿಕ್ಷಾ ಅಥವಾ ಟ್ಯಾಕ್ಸಿ ಖರೀದಿಯಲ್ಲಿ 50% ಸಬ್ಸಿಡಿ ನೀಡುತ್ತದೆ. ಕರ್ನಾಟಕದಲ್ಲಿ ಯಾರಾದರೂ ಅಲ್ಪಸಂಖ್ಯಾತ ಸಮುದಾಯದವರಲ್ಲದ ಬಹುಸಂಖ್ಯಾತ ಸಮಾಜದಲ್ಲಿ ಜನ್ಮ ಪಡೆದರೆ ಅವರು ಎಷ್ಟೆ ಬಡವರಾಗಿದ್ದರೂ ಅವರಿಗೆ ಸಿಗುವುದಿಲ್ಲ. ಈ ಯೋಜನೆ ಹಿಂದೂಗಳಿಗೆ ಇಲ್ಲ. ಅವರೆಷ್ಟೇ ಬಡವರೇ ಆಗಿರಲಿ, ಅವರ ಬಳಿ ಹಣವೇ ಇಲ್ಲದಿರಲಿ,  ಅವರಿಗೆ ಸಬ್ಸಿಡಿ ಸಿಗುವುದಿಲ್ಲ. ಆದರೆ ಯೋಜನೆಯಲ್ಲಿ ಇತರ ಮುಸ್ಲಿಂ, ಬೌದ್ಧ ,ಜೈನ ಇತರ ಅಲ್ಪಸಂಖ್ಯಾತರಿಗೆ 50% ಸಬ್ಸಿಡಿ ನೀಡಲಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ಕಾರ್ಯಕ್ರಮದಿಂದ ಕರ್ನಾಟಕದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮಾತ್ರ ಪ್ರಯೋಜನವಾಗಿದೆ ಎಂದು ಅವರ ವರದಿ ಹೇಳಿದೆ. ಆದರೆ ಇದು ಸುಳ್ಳಾಗಿದೆ. ಈ ಕಾರ್ಯಕ್ರಮವು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸದಸ್ಯರಿಗೂ ಲಭ್ಯವಿದೆ ಎಂಬುವುದನ್ನು ಇಲಾಖೆಯ ವೆಬ್‌ಸೈಟ್ ನಲ್ಲಿ ತಿಳಿಸಲಾಗಿದೆ. ಕರ್ನಾಟಕ ಸ್ವಾವಲಂಬಿ ಸಾರಥಿ ಯೋಜನೆ 2023ರ ಪ್ರಕಾರ ಯೋಜನೆಯು ಅಲ್ಪಸಂಖ್ಯಾತರಿಗೆ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸದಸ್ಯರಿಗೆ 4 ಲಕ್ಷ ಸಬ್ಸಿಡಿ ಸಿಗಲಿದೆ.

ಸ್ವಾವಲಂಬಿ ಸಾರಥಿ ಯೋಜನೆಯನ್ನು ಕರ್ನಾಟಕ ಸರ್ಕಾರವು ರಾಜ್ಯದ ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ಪ್ರಾರಂಭಿಸಿದೆ. ರಾಜ್ಯದ ನಿರುದ್ಯೋಗಿ ಯುವಕರು ಈ ಕಾರ್ಯಕ್ರಮದಡಿಯಲ್ಲಿ ನಾಲ್ಕು ಚಕ್ರಗಳ ವಾಹನಗಳ ಖರೀದಿಗೆ 50% ರಿಂದ 75% ವರೆಗೆ ಸಹಾಯಧನವನ್ನು ನೀಡಲಿದೆ. ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ನೇರ ಠೇವಣಿ ಮೂಲಕ ಈ ಮೊತ್ತವನ್ನು ಪಡೆಯುತ್ತಾರೆ. ಸ್ವಾವಲಂಬಿ ಸಾರಥಿ ಯೋಜನೆಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

ಇದನ್ನು ಓದಿ: ತಪ್ಪು ಮಾಹಿತಿ ಹರಡಿದ ಆರೋಪ: Aaj Takನ ಸುಧೀರ್ ಚೌಧರಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...