Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...