Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...