Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...