Homeಕರ್ನಾಟಕ5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದೆ. 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶರಿಗೆ ಸಿಸಿಬಿ ಮನವಿ ಮಾಡಿದ್ದರು.

ಬಂಧನ ಪ್ರಕ್ರಿಯೆ ಬಗ್ಗೆ ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಮೊದಲು ಉಡುಪಿ ಪೊಲೀಸರು ಬಂಧಿಸಿದರು. ಉಡುಪಿ ಪೊಲೀಸರು ಸ್ವಲ್ಪ ಕಿರಿಕಿರಿ ಮಾಡಿದರೆಂದ, ಸಿಸಿಬಿ ಪೊಲೀಸರು ಕೈ ಎಳೆದಾಡಿ ನೋವು ಮಾಡಿದ್ದಾರೆ. ನನ್ನ ತಾಯಿ ಜತೆ ಮಾತನಾಡಲು ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮೇಲೆ ಯಾವ ಕೇಸ್ ಇದೆ ಎಂದು ನನಗೆ ಗೊತ್ತಿಲ್ಲ ಎಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ನಲ್ಲಿ ಚೈತ್ರಾ ಕಣ್ಣೀರು ಹಾಕಿದ್ದಾರೆ.

ಬಂಧನ ಕುರಿತು ಕುಟುಂಬದವರಿಗೆ ಮಾಹಿತಿ ನೀಡಲಾಗಿದೆಯೇ ಎಂದು ತನಿಖಾಧಿಕಾರಿ ರೀನಾ ಸುವರ್ಣಾಗೆ ನ್ಯಾಯಾಧೀಶರು ಪ್ರಶ್ನೆ ಮಾಡಿದ್ದು, ಈ ವೇಳೆ ಕುಟುಂಬದವರಿಗೆ ಮಾಹಿತಿ ಇಲ್ಲವೆಂದು ಚೈತ್ರಾ ಹೇಳಿದ್ದಾರೆ. ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ನನ್ನ ವಿರುದ್ಧದ ದಾಖಲಿಸಿರುವ ದೂರಿನ ಸೆಕ್ಷನ್ ಮಾತ್ರ ಹೇಳಿದ್ದಾರೆ. ಯಾವ ದೂರು, ಯಾರು ದೂರು ನೀಡಿದರು ಎಂದು ಮಾಹಿತಿ ನೀಡಿಲ್ಲ ಎಂದಿದ್ದಾರೆ.

ಆರೋಪಿಗಳ ಜತೆ ವಕೀಲರು ಅರ್ಧ ಗಂಟೆ ಮಾತನಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದು, ಕೋರ್ಟ್ ಆವರಣದಲ್ಲೇ ಆರೋಪಿಗಳಿಗೆ ವಕೀಲರೊಂದಿಗೆ ಮಾತನಾಡಲು ನ್ಯಾಯಾಲಯ ಅವಕಾಶ ನೀಡಿದೆ.

ಆರೋಪಿಗಳಿಗೆ ಯಾವುದೇ ನೋಟಿಸ್ ನೀಡದೆ ಬಂಧಿಸಿದ್ದಾರೆ ಎಂದು ವಿಚಾರಣೆ ವೇಳೆ ಕೋರ್ಟ್‌ಗೆ ಆರೋಪಿಗಳ ಪರ ವಕೀಲರು ಹೇಳಿದ್ದಾರೆ. ಸಿಆರ್‌ಪಿಸಿ 41ರಡಿ ನೋಟಿಸ್ ನೀಡಬೇಕಿತ್ತು. ಸಿಸಿಬಿ ಪೊಲೀಸರು ನಿಯಮ ಉಲ್ಲಂಘಿಸಿದ್ದಾರೆ ಎಂದಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದರೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಹೇಳಿದ್ದಾರೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ, ಎಫ್​​ಐಆರ್​ ದಾಖಲಾಗುತ್ತಿದ್ದಂತೆ ನಾಪತ್ತೆ ಆಗಿದ್ದಾರೆ. ನಿನ್ನೆ ಸಂಜೆವರೆಗೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಪ್ರಕರಣ ಬಳಿಕ ಮೈಸೂರಿನತ್ತ ಹೊರಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...