Homeಕರ್ನಾಟಕಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

ಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

- Advertisement -
- Advertisement -

”ವರ್ಣಾಶ್ರಮ ವ್ಯವಸ್ಥೆಯನ್ನು ಜೀವಂತವಾಗಿ ಇರಿಸುವ ಉದ್ದೇಶ ಸನಾತನ ಧರ್ಮ ಹೊಂದಿದೆ. ಅದಕ್ಕಾಗಿ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವ ಮನಸ್ಥಿತಿಯ ಮುಖಂಡರು ಮುಂದಾಗಿದ್ದಾರೆ. ಈ ಕಾರಣದಿಂದ ದೇಶದ ಬಹುಸಂಖ್ಯಾತ ಶೂದ್ರ ಸಮುದಾಯ ಅಪಾಯಕ್ಕೆ ಸಿಲುಕಲಿದೆ” ಎಂದು ವಿಮರ್ಶಕ, ಚಿಂತಕ ಕೆ.ಪಿ. ಸುರೇಶ್ ಹೇಳಿದರು.

ಸಾಗರದ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಸನಾತನ ಧರ್ಮ ಎಂದರೇನು? ಎಂಬ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಮಹಾಭಾರತ, ಭಗವದ್ಗೀತೆ ಇವುಗಳನ್ನು ಅಧ್ಯಯನ ಮಾಡಿದರೆ ಸನಾತನ ಧರ್ಮದ ಉದ್ದೇಶಗಳು ತಿಳಿಯುತ್ತವೆ. ಅದರೊಳಗಿನ ಆಂತರ್ಯ ಅರಿಯಲು ನಾವೆಲ್ಲರೂ ಮುಂದಾಗಬೇಕು. ಸನಾತನ ಧರ್ಮದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರನೆಂಬ ವರ್ಣಾಶ್ರಮ ವ್ಯವಸ್ಥೆ ಇದ್ದು, ಶೂದ್ರರು ಕನಿಷ್ಠವಾಗಿ ಕಾಣಲ್ಪಡುತ್ತಾರೆ. ಅವರು ಸಹ ನಮ್ಮಂತೆ ಮನುಷ್ಯರೆಂಬ ಅಂಬೇಡ್ಕರ್ ರಚಿತ ಸಂವಿಧಾನವನ್ನು ಇಂದಿನ ಬಿಜೆಪಿ ಸರ್ಕಾರ ತಿದ್ದುಪಡಿ ತರದೆ ನಿಷ್ಪಲಗೊಳಿಸುವ ಕೆಲಸಕ್ಕೆ ಮುಂದಾಗುತ್ತಿರುವುದು ಖೇದಕರ ವಿಚಾರ. ಅದಕ್ಕೆ ವಿಚಾರವಾದಿಗಳು ಒಂದಾಗಿ ಸೇರಿ ಜನತೆಯನ್ನು ಜಾಗೃತಿಗೊಳಿಸಬೇಕಿದೆ” ಎಂದು ಹೇಳಿದರು.

”ಈ ದೇಶದಲ್ಲಿ ಆಳಬೇಕಾದ ಸಮುದಾಯ ಆಳಿಸಿಕೊಳ್ಳುತ್ತಿದೆ. ರೈತರು ಸಂಘಟಿತರಾದರೆ ಅವರೇ ಚುಕ್ಕಾಣಿ ಹಿಡಿಯಬಹುದು. ದಲಿತರು, ಹಿಙದುಳಿದವರು ತುಂಡುಗಳಾಗಿ ಒಡೆದು ಹೋಗುತ್ತಿರುವ ದಿನಗಳಲ್ಲಿ ಈ ಸಮುದಾಯಗಳಿಂದ ರಾಜಕಾರಣಿಗಳಿಗೆ ಲಾಭವಾಗುತ್ತಿದೆ. ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸಲ್ಮಾನರು ಮೀಸಲಾತಿ ಎಷ್ಟು ಪಡೆದಿದ್ದಾರೆ. ಸಣ್ಣ ಸಮುದಾಯವಾದ ಬ್ರಾಹ್ಮಣ ಸಮುದಾಯ ಎಷ್ಟು ಮೀಸಲಾತಿ ಪಡೆದಿದೆ. ಇದನ್ನು ಹೆಚ್ಚಾಗಿ ಪ್ರಚಾರ ನೀಡದೆ ಅಲ್ಲಿಯೇ ಒತ್ತುತ್ತಿರುವುದು ವಿಷಾದನೀಯ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಅವರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವವರು ವಿಶ್ವದಲ್ಲಿರುವ ಬೇರೆ ದೇಶಗಳ ಹೆಸರನ್ನಕ್ಕೆ ಹೇಳುವುದಿಲ್ಲ” ಎಂದರು.

”ಇಲ್ಲಿ ಧರ್ಮವನ್ನು ಹಿಡಿದುಕೊಂಡು ರಾಜಕಾರಣ ಮಾಡಲಾಗುತ್ತಿದೆ ಬದಲಿಗೆ ಆಳುವವರು ರಾಜಧರ್ಮ ಪಾಲಿಸದೆ ಶೂದ್ರರನ್ನು ತುಳಿಯುತ್ತಿರುವುದು ಎಷ್ಟು ಸರಿ ಇದೆ ಎಂದು ಹೇಳಿದರು. ವಿಶ್ವದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಹೇಳುವ ನಮ್ಮ ಸರಕಾರಗಳು ಅವರೊಂದಿಗೆ ಏಕೆ ರಾಜ್ಯ ತಾಂತ್ರಿಕ ಭಾಂದವ್ಯವನ್ನು ಮುರಿದುಕೊಂಡಿಲ್ಲ ಎಂಬುದನ್ನು ಈ ದೇಶದ ಜನತೆ ಅರ್ಥಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

”ದೇಶದಲ್ಲಿ ಮುಸಲ್ಮಾನ ಸಮುದಾಯ ಬೆರಳು ತೋರಿಸಿ ಅಧಿಕಾರ ಹಿಡಿಯುವ ಪಕ್ಷ ಒಂದು ಅವರ ಹೆಸರಿನಲ್ಲಿ ಶೂದ್ರ ಸಮುದಾಯವನ್ನು ಲೆಕ್ಕಕ್ಕಿಲ್ಲದಂತೆ ಮಾಡುತ್ತಿದ್ದಾರೆ ಮೀಸಲಾತಿಯ ಬಗ್ಗೆ ಮಾತನಾಡುವ ನೇತಾರರು 3% ಇರುವ ಸಮುದಾಯಕ್ಕೆ ಏಕೆ 10% ಮೀಸಲಾತಿ ನೀಡಿದರು. ಇದು ವಿಚಾರ ಮಾಡುವಂಥದ್ದು” ಎಂದರು.

”ನಾವುಗಳು ಇಂದು ಚಿರತೆಯೊಂದು ಜಿಂಕೆಯ ಗುಂಪನ್ನು ದೂರದಿಂದ ನೋಡುತ್ತದೆ. ಮರದ ಮೇಲಿನ ಮುಷಿಯ ಇದನ್ನು ನೋಡಿ ಜೋರಾಗಿ ಕಿರುಚುತ್ತದೆ. ಆಗ ಜಿಂಕೆ ಹಿಂಡು ಅಪಾಯದಿಂದ ಪಾರಾಗಲು ಕೊಡುವ ಸೂಚನೆಯ ಹೊರತು ಇದರಿಂದ ಮರದ ಮೇಲಿನ ಮುಶಿಯಕ್ಕೇನು ಅಪಾಯವಿಲ್ಲ. ಇಂದಿನ ದಿನಮಾನಕ್ಕೆ ಜಾಗೃತರಾಗುವ ಪ್ರಜೆಗಳು ಮುಶಿಯಾದ ಪಾತ್ರ ವಹಿಸಬೇಕು” ಎಂದು ಹೇಳಿದರು.

”ಉದಯ ನಿಧಿ ಸ್ಟಾಲಿನ್ ಹೇಳಿದ ಸನಾತನ ಧರ್ಮದ ಹೇಳಿಕೆಗೆ ಆರಂಭದಲ್ಲಿ ವಿರೋಧ ಉಂಟಾಯಿತು. ಹಿಂದೂಪರ ಸಂಘಟನೆಗಳು ಪ್ರತಿರೋಧ ತೋರಿಸಿದವು. ಆದರೆ ಸನಾತನ ಧರ್ಮದ ಬಗ್ಗೆ ಹೆಚ್ಚಿಗೆ ವಿರೋಧಿಸಿದರೆ ಅಲ್ಲಿ ಇತರ ಸಮುದಾಯಗಳು ನಮ್ಮಿಂದ ದೂರವಾಗಿ ವೋಟ್ ಬ್ಯಾಂಕ್ ಇಲ್ಲದಂತಾಗಬಹುದು ಎಂಬ ಕಾರಣಕ್ಕೆ ಒಂದು ರಾಜಕೀಯ ಪಕ್ಷ ಸುಮ್ಮನಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡಿದಾಗ ಪ್ರತಿಭಟನೆ ಇಳಿಯುವ ಧರ್ಮರಕ್ಷಕರು ಮಣಿಪುರದಲ್ಲಿ ಕುಕ್ಕಿ ಮತ್ತು ಮೈತೆಯಿ ಈ ಸಮುದಾಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಎಲ್ಲಿ ಹೋಗಿದ್ದರೆಂದು ಪ್ರಶ್ನಿಸಿದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಭುಗಿಲೆದ್ದಿದೆ. ಈ ಕಾರಣದಿಂದ ಸನಾತನ ಧರ್ಮದ ಉದಯ ನಿಧಿ ಸ್ಟಾಲಿನ್ ಹೇಳಿಕೆ ಮೂಲೆಗುಂಪಾಗಿದೆ. ಇವುಗಳ ಬಗ್ಗೆ ಚರ್ಚೆ ನಡೆಯಬೇಕು” ಎಂದರು.

”ಸನಾತನ ಧರ್ಮದ ಕಿರುಕುಳದಿಂದ ಜೈನ ಧರ್ಮ ಉದಯವಾಯಿತು. ಲಿಂಗಾಯತ ಧರ್ಮ ಉದಯವಾಯಿತು. ಅನೇಕರು ಹಿಂದೂ ಧರ್ಮವನ್ನು ತೊರೆದು ಬೌದ್ಧ ಮತ್ತು ಕ್ರಿಶ್ಚಿಯನ್ ಧರ್ಮದ ಕಡೆ ಮುಖ ಮಾಡಿದರು. ಇದಕ್ಕೆಲ್ಲ ಕಾರಣ ಧರ್ಮದಲ್ಲಿ ಇರುವ ತಾರತಮ್ಯ ಇವುಗಳ ಬಗ್ಗೆ ಪ್ರಶ್ನಿಸಿದರೆ ಅವರು ಧರ್ಮವಿರೋಧಿಗಳೆಂಬ ಹಣೆಪಟ್ಟಿ ಕಟ್ಟುತ್ತಾರೆ. ಕೋರ್ಟು, ಕೇಸುಗಳೆಂದು ಅಲೆಯುವಂತೆ ಮಾಡುತ್ತಾರೆ. ಆದರೂ ಸತ್ಯವಾದ ಮಾತನ್ನು ಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ನಾವೆಲ್ಲರೂ ಸೇರಿ ಮುನ್ನಡೆಯೋಣ” ಎಂದು ಹೇಳಿದರು.

ಇದನ್ನೂ ಓದಿ: ಸನಾತನ ವಿವಾದ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...