Homeಕರ್ನಾಟಕಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

ಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

- Advertisement -
- Advertisement -

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು, ಹಿಂದಿ ಹೇರಿಕೆ ದೇಶದ ಐಕ್ಯತೆಗೆ ಮಾರಕವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ”ಹಿಂದಿ ಹೇರಿಕೆಯ ಕ್ರೂರ ಪರಿಣಾಮಗಳನ್ನು‌ ನಾವು ಈಗಾಗಲೇ ನಮ್ಮ ಬ್ಯಾಂಕು, ಅಂಚೆ ಕಚೇರಿಗಳಲ್ಲಿ, ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ, ಹೆದ್ದಾರಿಗಳಲ್ಲಿ ನೋಡುತ್ತಿದ್ದೇವೆ. ಹೀಗೇ ಬಿಟ್ಟರೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

”ನಾವು ಯಾವ ನುಡಿಯ ವಿರೋಧಿಗಳೂ ಅಲ್ಲ. ಅವರವರಿಗೆ ಅವರವರ ನುಡಿಗಳು ಹೆಚ್ಚು. ನಿಮ್ಮ ಮೇಲೆ ನಮ್ಮ ನುಡಿಯನ್ನು ನಾವು ಹೇರಿಲ್ಲ. ನಮ್ಮ ಮೇಲೆ ನಿಮ್ಮ ನುಡಿಯನ್ನು ಹೇರಬೇಡಿ. ನಮಗೆ ಇಷ್ಟವಾದ ನುಡಿ ಕಲಿಯುತ್ತೇವೆ. ಹಿಂದಿಯನ್ನೇ ಕಲಿಯಬೇಕು ಎಂಬ ಹೇರಿಕೆ ಮಾಡಬೇಡಿ” ಎಂದು ಕಿಡಿಕಾರಿದ್ದಾರೆ.

”ಭಾರತ ಸಂವಿಧಾನದಲ್ಲಿ ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ನಿಲ್ಲಿಸಬೇಕು. ಹಿಂದಿಗೆ ಹೆಚ್ಚುಗಾರಿಕೆ ನೀಡುವುದೆಂದರೆ ಹಿಂದಿ ಭಾಷಿಕರಿಗೆ ಹೆಚ್ಚುಗಾರಿಕೆ ನೀಡುವುದು. ಹೀಗಾದಾಗ ಎಲ್ಲರೂ ಸಮಾನರೆಂಬ ಸಂವಿಧಾನದ ಮೂಲ ಆಶಯವೇ ಈಡೇರುವುದಿಲ್ಲ. ಎಲ್ಲ ನುಡಿಗಳೂ ಸಮಾನವಾಗಬೇಕು” ಎಂದು ಹೇಳಿದರು.

”ಒಕ್ಕೂಟ ಸರ್ಕಾರ ಇದೇ ರೀತಿ ಹಿಂದಿ ಹೇರಿಕೆ ಮುಂದುವರೆಸಿದರೆ ಭಾರತದ ಒಗ್ಗಟ್ಟಿನ ಬೇರೇ ಸಡಿಲವಾಗುತ್ತದೆ. ಈ ಹೇರಿಕೆಯಿಂದ ಹಿಂದಿಯೇತರರಲ್ಲಿ ಅಭದ್ರತಾ ಭಾವ ನೆಲೆಸುತ್ತಿದೆ. ಇದು ಒಳ್ಳೆಯ ಸೂಚನೆ ಅಲ್ಲ. ಭಾರತ ಒಂದಾಗಿರಬೇಕೆಂದರೆ ಎಲ್ಲರಿಗೂ ಸಮಾನ ಹಕ್ಕು ಅವಕಾಶಗಳಿರಬೇಕು” ಎಂದಿದ್ದಾರೆ.

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿಹೇರಿಕೆ ದೇಶದ ಐಕ್ಯತೆಗೆ ಮಾರಕ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ? ಉತ್ತರದ ರಾಜ್ಯಗಳಲ್ಲಿ ಎಂದಾದರೂ ಕನ್ನಡ ದಿವಸವನ್ನು ಆಚರಿಸಿದ್ದಾರೆಯೇ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಯಾಕೆ? ಹಿಂದಿ ರಾಜ್ಯಗಳಲ್ಲಿ ಹಿಂದಿ ದಿವಸ ಆಚರಿಸಿಕೊಳ್ಳಿ. ಕನ್ನಡ ನಾಡಿನಲ್ಲಿ ನಿಮ್ಮ ಆಚರಣೆ ಬೇಕಿಲ್ಲ” ಎಂದು ವಿರೋಧ ವ್ಯಕ್ತಪಡಿಸಿದರು.

”ಹಿಂದಿ ಎಂಬುದು ಹಿಂದೂಸ್ತಾನಿ, ಉರ್ದು, ಪರ್ಶಿಯನ್, ಸಂಸ್ಕೃತ ನುಡಿಗಳಿಂದ ಸಂಕರಗೊಂಡ ಕೃತಕ ನುಡಿ. ಅದಕ್ಕೆ ಯಾವ ಇತಿಹಾಸವೂ ಇಲ್ಲ. ಅದಕ್ಕೊಂದು ಸಾಂಸ್ಕೃತಿಕ ಪರಂಪರೆಯೂ ಇಲ್ಲ. ನಮಗೆ ನಮ್ಮ ಶ್ರೀಮಂತ ಕನ್ನಡವೇ ರಾಷ್ಟ್ರನುಡಿ. ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ದಕ್ಷಿಣದ ರಾಜ್ಯಗಳಿಗೆ ಯಾವ ರೀತಿಯೂ ಸಂಬಂಧವಿಲ್ಲದ ಹಿಂದಿಯನ್ನು ಬಲವಂತವಾಗಿ ನಮ್ಮ ಶಿಕ್ಷಣದಲ್ಲಿ ತರಲಾಯಿತು. ಕನ್ನಡದ ಮಕ್ಕಳಿಗೆ ಬಲವಂತವಾಗಿ ಕಲಿಸಲಾಯಿತು. ಹಿಂದಿ ದೇಶದ ರಾಷ್ಟ್ರಭಾಷೆ ಎಂದು ಸುಳ್ಳು ಹೇಳಿಕೊಡಲಾಯಿತು. ಇಷ್ಟು ದೊಡ್ಡ ದ್ರೋಹವನ್ನು ಬ್ರಿಟಿಷರೂ ಮಾಡಿರಲಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

”ಕನ್ನಡಿಗರು ಯಾವ ಕಾರಣಕ್ಕೆ ಕಡ್ಡಾಯವಾಗಿ ಹಿಂದಿ ಕಲಿಯಬೇಕು? ಉತ್ತರದ ರಾಜ್ಯಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುತ್ತಿಲ್ಲ ಯಾಕೆ? ಇಷ್ಟನ್ನು ಅರ್ಥ ಮಾಡಿಕೊಂಡರೆ ಹಿಂದಿಹೇರಿಕೆಯ ಹುನ್ನಾರ ಅರ್ಥವಾಗುತ್ತದೆ. ನಮ್ಮನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುವುದೇ ಹಿಂದಿ ಹೇರಿಕೆಯ ಸಂಚು” ಎಂದು ಹೇಳಿದ್ದಾರೆ.

”ಕನ್ನಡಿಗರಿಗೆ, ಕನ್ನಡ ನುಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾವು ಯಾರ ಅಡಿಯಾಳೂ ಅಲ್ಲ. ನಮಗೆ ನಮ್ಮದೇ ಆದ ಸಂಸ್ಕೃತಿ ಪರಂಪರೆ ಇದೆ. ಹಿಂದಿ ನುಡಿಯ ಯಜಮಾನಿಕೆ ನಮಗೆ ಬೇಕಿಲ್ಲ. ಒಕ್ಕೂಟ ಸರ್ಕಾರ ಇದನ್ನು ಅರ್ಥ ಮಾಡಿಕೊಂಡು ಹಿಂದಿ ಹೇರಿಕೆ ನಿಲ್ಲಿಸಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದಿ ಕಲಿಕೆ ಬಗ್ಗೆ ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೆ; ಹಿಂದಿ ಹೇರಿಕೆಗಾಗಿ ಇತಿಹಾಸವನ್ನೇ ತಿರುಚುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...