Homeಎಕಾನಮಿಜಿಯೋಗೆ ಪಟ್ಟ - ಬಿಸ್ಸೆನ್ನೆಲ್‍ಗೆ ಚಟ್ಟ...

ಜಿಯೋಗೆ ಪಟ್ಟ – ಬಿಸ್ಸೆನ್ನೆಲ್‍ಗೆ ಚಟ್ಟ…

- Advertisement -
- Advertisement -

70 ವರ್ಷಗಳ ಭಾರತ ರಾಷ್ಟ್ರ ನಿರ್ಮಾಣದ ಇತಿಹಾಸದಲ್ಲಿ ಬಿಎಸ್ಸೆನ್ನೆಲ್‍ಗೆ ತನ್ನದೇ ಆದ ಮಹತ್ವದ ಪಾತ್ರವಿದೆ. ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ, ದೇಶದ ಒಟ್ಟಾರೆ ಆರ್ಥಿಕ ವಾಣಿಜ್ಯ ವಹಿವಾಟುಗಳಿಗೆ ಬಿಸ್ಸೆನ್ನೆಲ್ ನೀಡಿದ ಕೊಡುಗೆ ಅಪಾರವಾದದ್ದು. ಮೂಲೆಮೂಲೆಯ ಹಳ್ಳಿಗಾಡುಗಳನ್ನೂ ಒಳಗೊಂಡು ಇಡೀ ದೇಶಕ್ಕೆ ಸಂಪರ್ಕ ಸೇತುವಾಗಿ ದುಡಿದ ಸಂಸ್ಥೆಯ ಸೇವೆಯನ್ನು ರೂಪಾಯಿಗಳಲ್ಲಿ ಲೆಕ್ಕ ಹಾಕಲಾಗದು. ಇಂಥಾ ಸಂಸ್ಥೆಯನ್ನು ಮಣ್ಣುಗೂಡಿಸಲು ಇದೀಗ ರಂಗ ಸಜ್ಜಾಗಿದೆ.

ಇದು ದಿಢೀರ್ ಸಂಭವಿಸಿದ್ದಲ್ಲ. ಬಹಳ ವ್ಯವಸ್ಥಿತವಾಗಿ ಹಂತಹಂತವಾಗಿ ನಡೆಸಿದ ಷಡ್ಯಂತ್ರ. ಖಾಸಗಿ ಕಂಪನಿಗಳು 4ಜಿ ಸೇವೆ ಒದಗಿಸುತ್ತಿರುವ ಸಂದರ್ಭದಲ್ಲಿ ಬಿಎಸ್ಸೆನ್ನೆಲ್‍ಗೆ 4ಜಿ ಸ್ಪೆಕ್ಟ್ರಮ್ ಮಂಜೂರಾತಿಯೇ ಸಿಗಲಿಲ್ಲವೆಂದರೆ ನಿಮಗೆ ಆಶ್ಚರ್ಯ ಎನಿಸಬಹುದು. ಕುಸಿಯುತ್ತಿರುವ ಸಂಸ್ಥೆಯನ್ನು ಉಳಿಸಿಕೊಳ್ಳಲು ಬಿಸ್ಸೆನ್ನೆಲ್ ನೌಕರರು ಹಲವು ಬಾರಿ ಮುಷ್ಕರ ಹೂಡಿದ್ದಾರೆ. ಮುಷ್ಕರ ಎಂದರೆ ಸಂಬಳ ಭತ್ಯೆ ಜಾಸ್ತಿ ಮಾಡಿ ಎಂದು ಕೇಳುವುದು ಮಾಮೂಲಿ. ಆದರೆ ಬಿಸ್ಸೆನ್ನೆಲ್ ನೌಕರರ ಪ್ರಧಾನ ಬೇಡಿಕೆ ‘4ಜಿ ಸ್ಪೆಕ್ಟ್ರಮ್ ಹಂಚಿಕೆ ಮಾಡಿ – ಬಿಸ್ಸೆನ್ನೆಲ್ ಉಳಿಸಿ’ ಎಂಬುದಾಗಿತ್ತು. ಮುಷ್ಕರ ತೀವ್ರಗೊಂಡ ಸಂದರ್ಭದಲ್ಲಿ ಕೇಂದ್ರದ ಮಂತ್ರಿಗಳು ಹಾಜರಾಗಿ 4ಜಿ ಕೊಡುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ಬೇಡಿಕೆಯನ್ನು ಕಸದಬುಟ್ಟಿಗೆ ಹಾಕಿದ್ದು ಹಳೆ ಸಂಗತಿ.

ಈಗ 5ಜಿ ಟೆಕ್ನಾಲಜಿ ಅಳವಡಿಕೆಗೆ ರಂಗ ಸಜ್ಜಾಗಿರುವ ಹೊತ್ತಿನಲ್ಲಿ ಬಿಸ್ಸೆನ್ನೆಲ್ ಇನ್ನೂ ಓಬೀರಾಯನ ಕಾಲದಲ್ಲೇ ಇದೆ. ಪರಿಣಾಮವಾಗಿ ಸಂಸ್ಥೆಗೆ ಹೊಸ ಗ್ರಾಹಕರು ಸೇರುವುದಿರಲಿ, ಇದ್ದ ಗ್ರಾಹಕರೇ ದೂರಾಗುವಂತಹ ಸನ್ನಿವೇಶ ನಿರ್ಮಿಸಲಾಗಿದೆ. ಇತ್ತೀಚೆಗೆ ಜಿಯೋ ದರ ಸಮರಕ್ಕೆ ಇಳಿದ ಮೇಲಂತೂ ಬಿಸ್ಸೆನ್ನೆಲ್ ಅಸ್ತಿತ್ವವೇ ಪ್ರಶ್ನಾರ್ಹ. ಇತಿಹಾಸದಲ್ಲಿ ಮೊದಲ ಬಾರಿಗೆ ಈಗ ಬಿಸ್ಸೆನ್ನೆಲ್ ಬಳಿ ವೇತನಕ್ಕೂ ಕಾಸಿಲ್ಲ. ಈಗ 50 ವರ್ಷ ಮೇಲ್ಪಟ್ಟ ನೌಕರರ ಸ್ವಯಂನಿವೃತ್ತಿ ಘೋಷಿಸಲಾಗಿದೆ. ನಿವೃತ್ತಿ ವಯಸ್ಸನ್ನು 60 ರಿಂದ 58ಕ್ಕೆ ಇಳಿಸಲಾಗಿದೆ. ಪರಿಣಾಮವಾಗಿ ಸುಮಾರು 54 ಸಾವಿರ ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

‘ನಷ್ಟದಲ್ಲಿರುವ ಸಂಸ್ಥೆಗೆ ಹಣ ಯಾಕೆ ಕೊಡಬೇಕು?’ ‘ತೆರಿಗೆದಾರರ ಜೇಬಿಗೆ ಕತ್ತರಿ’ ಇತ್ಯಾದಿ ಪಾಂಡಿತ್ಯಪೂರ್ಣ ವಾದಗಳು, ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ, ಟಿವಿ ಪ್ಯಾನೆಲ್ ಚರ್ಚೆಗಳು ನಡೆದಿವೆ. ಜನಮಾನಸದಲ್ಲಿ ಬಿಸ್ಸೆನ್ನೆಲ್ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಜಾಲವೊಂದು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕೆಲವು ಕಟುಸತ್ಯಗಳನ್ನು ನಾವು ನೆನಪಿನಲ್ಲಿಡಬೇಕು. 2004-05ರಲ್ಲಿ ಇದೇ ಬಿಸ್ಸೆನ್ನೆಲ್ 10,000 ಕೋಟಿ ನಿವ್ವಳ ಲಾಭ ಗಳಿಸಿತ್ತು. 2014, 2015, 2016ನೇ ಸಾಲಿನಲ್ಲಿಯೂ ಅಲ್ಪ ಪ್ರಮಾಣದ ಲಾಭವನ್ನು ದಾಖಲಿಸಿತ್ತು.

2016ರಲ್ಲಿ ಜಿಯೋ ಮಾರುಕಟ್ಟೆ ಪ್ರವೇಶಿಸಿತು. ಸಾಕ್ಷಾತ್ ಭಾರತದ ಪ್ರಧಾನಿಗಳು ಮುಂದೆ ನಿಂತು ಬಿಟ್ಟು ಜಾಹಿರಾತು ನೀಡಿ ಅದನ್ನು ಪ್ರಮೋಟ್ ಮಾಡಿದರು. ಈ ಮಧ್ಯೆ 2017ರಲ್ಲಿ ಬಿಎಸ್ಸೆನ್ನೆಲ್ ನೆಟ್‍ವರ್ಕ್ ಮೇಲೆ ಸೈಬರ್ ದಾಳಿ ನಡೆದು ಲಕ್ಷಾಂತರ ಸಂಪರ್ಕಗಳಿಗೆ ಹಾನಿಯಾಯಿತು. ಇಲ್ಲಿ ಕಾಣದ ಕೈಗಳು ಕೆಲಸ ಮಾಡಿರುವುದು ಸ್ಪಷ್ಟ. ಯಾವಾಗ ಜಿಯೋ ಅಟ್ಟಹಾಸದಿಂದ ಟೆಲಿಕಾಂ ಪ್ರವೇಶಿಸಿ ದರ ಸಮರಕ್ಕಿಳಿಯಿತೋ ಆಗ ಮೊದಲೇ 4ಜಿ ತಂತ್ರಜ್ಞಾನವಿಲ್ಲದೆ ದುರ್ಬಲವಾಗಿದ್ದ ಸಂಸ್ಥೆ ಕುಸಿದುಹೋಯ್ತು. ಇದು ಕೇವಲ ಬಿಸ್ಸೆನ್ನೆಲ್‍ಗೆ ಮಾತ್ರ ಅನ್ವಯಿಸುವಂತದ್ದಲ್ಲ, ವೊಡಾಫೋನ್ ಹಾಗೂ ಏರ್ಟೆಲ್‍ನಂತಹ ಖಾಸಗಿ ಕಂಪನಿಗಳೂ ಕೂಡ ಈ ಅವಧಿಯಲ್ಲಿ ನಷ್ಟ ಅನುಭವಿಸಿವೆ ಎಂಬುದನ್ನು ನಾವು ನೆನಪಿಡಬೇಕು.

ತಮಾಷೆಯೆಂದರೆ ‘ಅಧಿಕ ಸ್ಪೀಡ್ ಮತ್ತು ಕಡಿಮೆ ದರ’ ಎಂಬುದು ಜಿಯೋದ ತಂತ್ರವಾಗಿದ್ದಾಗಲೇ ಬಿಸ್ಸೆನ್ನೆಲ್‍ನ ಆಡಳಿತ ಮಂಡಳಿ ದರಗಳನ್ನು ಏರಿಸಿಬಿಟ್ಟಿತು. ಈ ಕ್ರಮ ಕೂಡ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ತಂತ್ರವೆಂದೇ ವಿಶ್ಲೇಷಿಸಲಾಗುತ್ತಿದೆ. ಮೋದಿ ಸರ್ಕಾರ ತಮ್ಮ ನೆಚ್ಚಿನ ಖಾಸಗಿ ಕೂಟದೊಂದಿಗೆ ಸೇರಿ ನಡೆಸಿದ ಷಡ್ಯಂತ್ರದ ಫಲ ಇದು.

ಕಳೆದ ಏಪ್ರಿಲ್‍ನಲ್ಲಿ ಬಿಎಸ್ಸೆನ್ನೆಲ್ ನೌಕರರ ಸಂಘ ಬಿಡುಗಡೆ ಮಾಡಿದ ಅಂಕಿಅಂಶಗಳು ನಮ್ಮನ್ನು ಬೆಚ್ಚಿಬೀಳಿಸುತ್ತವೆ. ಈಗ ಜಿಯೋ ತನ್ನ 5ಜಿ ಸೇವೆಯ ಗಿಗಾಫೈಬರ್ ಹೆಸರಿನ ಬ್ರಾಡ್ ಬ್ಯಾಂಡ್ ಬಿಡುಗಡೆಗೆ ನಿಂತಿದೆ. ಅಲ್ಲಿಗೆ ಬಿ.ಎಸ್.ಎನ್.ಎಲ್ ಕಥೆ ಏನು? ಜೊತೆಗೆ ತನ್ನ ಖರ್ಚುವೆಚ್ಚಗಳಿಗೆ ಹಾಗೂ ಬಂಡವಾಳ ಹೂಡಿಕೆಗೆ ಬಿಎಸ್ಸೆನ್ನೆಲ್ ಸಾಲ ಪಡೆದುಕೊಳ್ಳಲಾರದಂತೆ ಸರ್ಕಾರ ನಿರ್ಬಂಧಿಸಿದೆಯಂತೆ. ಕಳೆದ ಮಾರ್ಚ್‍ನ ಲೆಕ್ಕಪತ್ರಗಳ ಪ್ರಕಾರ ಟೆಲಿಕಾಂ ವ್ಯವಹಾರದಲ್ಲಿರುವ ಖಾಸಗಿ ಕಂಪನಿಗಳು ಬಿಎಸ್ಸೆನ್ನೆಲ್‍ಗೆ ಹೋಲಿಸಿದರೆ ಭಾರೀ ಸಾಲದಲ್ಲಿದ್ದವು. ವೊಡಾಫೋನ್ ಐಡಿಯಾದ ಸಾಲ 1,20,000 ಕೋಟಿ! ಏರ್ಟೆಲ್‍ನ ಸಾಲ 1,13,000 ಕೋಟಿ! ಇನ್ನೂ ಜಿಯೋದ ಸಾಲ 2 ಲಕ್ಷ ಕೋಟಿಗಳು!! ಬಿಸ್ಸೆನ್ನೆಲ್‍ನ ಸಾಲ 13,900 ಕೋಟಿಗಳು ಮಾತ್ರ.

ಬಿಸ್ಸೆನ್ನೆಲ್ ಆಸ್ತಿ-ಪಾಸ್ತಿಗಳು ದೇಶದ ಮೂಲೆಮೂಲೆಗಳಲ್ಲೂ ಸಾವಿರಾರು ನಗರ, ಪಟ್ಟಣಗಳಲ್ಲಿ ಹರಡಿಕೊಂಡಿವೆ. ದೇಶಾದ್ಯಂತ ಟವರ್‍ಗಳು ಮತ್ತು ಕೇಬಲ್ ಜಾಲವಿದೆ. 2016ರ ಅಧಿಕೃತ ಅಂದಾಜಿನ ಪ್ರಕಾರವೇ ಬಿಸೆನ್ನೆಲ್‍ನ ಮೌಲ್ಯ 70,746 ಕೋಟಿಗಳು. ವಾಸ್ತವದಲ್ಲಿ ಅದರ ಆಸ್ತಿ ಪಾಸ್ತಿಯ ಮಾರುಕಟ್ಟೆ ಮೌಲ್ಯ ಅದಕ್ಕಿಂತ ಎಷ್ಟೋ ಪಟ್ಟು ಅಧಿಕವಿರುತ್ತದೆ. ಇಂಥಾ ಅನುಕೂಲತೆ ಯಾವುದೇ ಖಾಸಗಿ ಕಂಪನಿಗೂ ಇಲ್ಲ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಬಂಡವಾಳವನ್ನು ಖದೀಮ ಕಾರ್ಪೊರೇಟ್‍ಗಳ ಬಾಯಿಗೆ ಹಾಕುತ್ತಿರುವ ಸರ್ಕಾರ ಬಿಸ್ಸೆನ್ನೆಲ್‍ಗೆ ಸಾಲ ಪಡೆಯಲು ಅನುಮತಿಯನ್ನೇ ಕೊಡಲಿಲ್ಲ!

ಸದ್ಯದಲ್ಲೇ ನಮ್ಮ ಈ ಅಮೂಲ್ಯ ಉದ್ದಿಮೆ ಸಂಸ್ಥೆ ರಕ್ಕಸ ಕಾರ್ಪೊರೇಟ್‍ಗಳ ಬಾಯಿಗೆ ಬೀಳಲಿದೆ. ಬಿಎಸ್ಸೆನ್ನೆಲ್ ಕಬಳಿಸುವ ಈ ಖಾಸಗಿ ದೇಶದ್ರೋಹವನ್ನು ಮರೆಮಾಚಿ ಬೋಪರಾಕ್ ಹಾಕಲು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವಂದಿಮಾಗಧರೂ ಈಗಾಗಲೇ ಸಜ್ಜಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...