Homeಮುಖಪುಟವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

- Advertisement -
- Advertisement -

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅವರ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

”ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಪರಾಧವಲ್ಲ, ಅದು ತಪ್ಪು ಹೇಳಿಕೆಗಳಾಗಿರಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

”ದೇಶದಾದ್ಯಂತ ಪತ್ರಕರ್ತರು ತಪ್ಪು ಹೇಳಿಕೆಗಳನ್ನು ನೀಡುತ್ತಾರೆ, ನೀವು ಎಲ್ಲರನ್ನೂ ವಿಚಾರಣೆಗೆ ಒಳಪಡಿಸುತ್ತೀರಾ?” ಎಂದು ನ್ಯಾಯಾಲಯ ಕೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಮೇಲ್ನೋಟಕ್ಕೆ ತೋರುವಂತೆ, ಪತ್ರಕರ್ತರ ವಿರುದ್ಧ ಯಾವುದೇ ಅಪರಾಧಗಳನ್ನು ಮಾಡಲಾಗಿಲ್ಲ. ನಾಲ್ವರು ಪತ್ರಕರ್ತರ ವಿರುದ್ಧದ ಎಫ್‌ಐಆರ್‌ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದರು.

”ಪತ್ರಕರ್ತರು ವಿಷಯವನ್ನು ಪ್ರಸ್ತುತಪಡಿಸಲು ಮಾತ್ರ ಮುಂದಾಗಿದ್ದಾರೆ. ಈ ಅಪರಾಧಗಳನ್ನು (ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಿದಂತೆ) ಹೇಗೆ ಮಾಡಲಾಗಿದೆ ಎಂಬುದನ್ನು ನಮಗೆ ತೋರಿಸಿ. ಇದು ಕೇವಲ ವರದಿಯಾಗಿದೆ. ನೀವು ಅಪರಾಧಗಳನ್ನು ಮಾಡದಿರುವ ಸೆಕ್ಷನ್‌ಗಳನ್ನು ಸೇರಿಸಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವೇಳೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರಿಗೆ ಇನ್ನೂ ಎರಡು ವಾರಗಳವರೆಗೆ ಬಂಧನದಿಂದ ರಕ್ಷಣೆಯನ್ನು ವಿಸ್ತರಿಸಿದೆ.

ಇದನ್ನೂ ಓದಿ: ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...