HomeUncategorizedಅದಾನಿ ಅಕ್ರಮ: ಮೋದಿಗಾಗಿ ನಿದ್ರೆಗೆ ಜಾರಿರುವ SEBI ಈಗಲಾದರೂ ಎಚ್ಚರಗೊಳ್ಳುವುದೇ?; ಜೈರಾಮ್ ರಮೇಶ್

ಅದಾನಿ ಅಕ್ರಮ: ಮೋದಿಗಾಗಿ ನಿದ್ರೆಗೆ ಜಾರಿರುವ SEBI ಈಗಲಾದರೂ ಎಚ್ಚರಗೊಳ್ಳುವುದೇ?; ಜೈರಾಮ್ ರಮೇಶ್

- Advertisement -
- Advertisement -

”ಅದಾನಿ ಗ್ರೂಪ್‌ನ ಘಟಕಗಳ ವಿರುದ್ಧ ಮತ್ತೆ ಅಕ್ರಮ ಹಣ ವರ್ಗಾವಣೆಯ ಆರೋಪಗಳು ಕೇಳಿಬರುತ್ತಿದ್ದು, ಈ ವಿಚಾರದಲ್ಲಿ ಕ್ರಮ ಕೈಗೊಳ್ಳದ ಸೆಬಿಯ ಕ್ರಮವನ್ನು ಕಾಂಗ್ರೆಸ್ ಶನಿವಾರ ಪ್ರಶ್ನಿಸಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸುವಂತೆ ಕರೆ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಅದಾನಿ ಗ್ರೂಪ್ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಆರೋಪಗಳ ಸುತ್ತ ಮತ್ತಷ್ಟು ದುರ್ನಾತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಮಾರಿಷಸ್ ಹಣಕಾಸು ನಿಯಂತ್ರಕವು ಅದಾನಿ ಗ್ರೂಪ್‌ನ ಎರಡು ಘಟಕಗಳ ಪರವಾನಗಿಯನ್ನು ರದ್ದುಗೊಳಿಸಿರುವುದರಿಂದ ಈಗ ಸೆಬಿ ಕಾರ್ಯನಿರ್ವಹಿಸುತ್ತದೆಯೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬಂಡವಾಳ ಮಾರುಕಟ್ಟೆಗಳ ನ್ಯಾಯಯುತ ನಿಯಂತ್ರಕರಾಗಿ ವಿಶ್ವಾಸವನ್ನು ಹೆಚ್ಚಿಸಲು ಸೆಬಿ ಏಕೆ ವಿಫಲವಾಗಿದೆ? ಎಂದು ಕೇಳಿದರು.

ಹಣಕಾಸು ಸೇವಾ ಕಾಯ್ದೆ, ಸೆಕ್ಯುರಿಟೀಸ್ ಆಕ್ಟ್, ಫೈನಾನ್ಷಿಯಲ್ ಇಂಟೆಲಿಜೆನ್ಸ್ ಸೇರಿದಂತೆ ಹಲವು ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸೆಬಿಗೆ ಸಮಾನವಾದ ಮಾರಿಷಸ್‌ನ ಹಣಕಾಸು ಸೇವಾ ಆಯೋಗವು (ಎಫ್‌ಎಸ್‌ಸಿ) ಮೇ 2022 ರಲ್ಲಿ ಅದಾನಿ-ಗ್ರೂಪ್‌ನ ಷೇರುದಾರರ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ರಮೇಶ್ ಹೇಳಿದರು. Anti-Money Laundering ನಿಯಮಗಳು (2003 ಮತ್ತು 2018), ಮತ್ತು ಮನಿ ಲಾಂಡರಿಂಗ್ ಮತ್ತು ಭಯೋತ್ಪಾದಕ ಹಣಕಾಸು ತಡೆಗಟ್ಟುವಿಕೆಯ ಸಂಹಿತೆಯಡಿ ಅದಾನಿ-ಗ್ರೂಪ್‌ನ ಷೇರುದಾರರ ಪರವಾನಗಿಯನ್ನು ಎಫ್‌ಎಸ್‌ಸಿ ರದ್ದುಗೊಳಿಸಿದೆ.

”ಮಾರಿಷಸ್ ನಿಯಂತ್ರಕರು ಶಂಕಿತ ಅದಾನಿ-ಸಂಬಂಧಿತ ಘಟಕಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೆ ಸೆಬಿ ಅಸಹಾಯಕತೆಯನ್ನು ಪ್ರತಿಪಾದಿಸುತ್ತಿದೆ” ಎಂದು ಹೇಳಿದರು.

”ಎಮರ್ಜಿಂಗ್ ಇಂಡಿಯಾ ಫಂಡ್ ಮ್ಯಾನೇಜ್‌ಮೆಂಟ್, ಈ ಗಂಭೀರ ಕಾರಣಗಳ ಮೇಲೆ ಪರವಾನಗಿಯನ್ನು ರದ್ದುಗೊಳಿಸಿದೆ. ವಿನೋದ್ ಅದಾನಿ ಸಹವರ್ತಿಗಳಾದ ನಾಸರ್ ಅಲಿ ಶಾಬನ್ ಅಹ್ಲಿ ಮತ್ತು ಚಾಂಗ್ ಚುಂಗ್-ಲಿಂಗ್‌ಗೆ ಮಾರ್ಗಗಳಾಗಿದ್ದ ಎರಡು ಘಟಕಗಳ ಷೇರುಗಳನ್ನು ನಿಯಂತ್ರಿಸಿದೆ. ಅಹ್ಲಿ ಮತ್ತು ಚಾಂಗ್ ಈ ನಿಧಿಗಳ ಮೂಲಕ ಅದಾನಿ ಕಂಪನಿಗಳಿಗೆ ಸಂಶಯಾಸ್ಪದ ಹೂಡಿಕೆಗಳನ್ನು ಮಾಡಿದ್ದರು.

”ಮೋದಿಗಾಗಿ ನಿದ್ರೆಗೆ ಜಾರಿರುವ ಸೆಬಿ ಈಗಲಾದರೂ ಎಚ್ಚರಗೊಳ್ಳುವುದೇ?” ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸಂಸತ್ತಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಮತ್ತು ಈ ಪ್ರಕರಣದ ತನಿಖೆಗಾಗಿ ಜೆಪಿಸಿಯನ್ನು ಸ್ಥಾಪಿಸಬೇಕು. ಇಲ್ಲವಾದರೆ ಅದಾನಿಯ ಬೃಹತ್ ಭ್ರಷ್ಟಾಚಾರದ ವಿರುದ್ಧ ಕ್ರಮ ಸಾಧ್ಯವಾಗುವುದಿಲ್ಲ ಎಂಬುದಕ್ಕೆ ಇದು ಹೆಚ್ಚು ಸಾಕ್ಷಿಯಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...