HomeUncategorizedಅದಾನಿ ಅಕ್ರಮ: ಮೋದಿಗಾಗಿ ನಿದ್ರೆಗೆ ಜಾರಿರುವ SEBI ಈಗಲಾದರೂ ಎಚ್ಚರಗೊಳ್ಳುವುದೇ?; ಜೈರಾಮ್ ರಮೇಶ್

ಅದಾನಿ ಅಕ್ರಮ: ಮೋದಿಗಾಗಿ ನಿದ್ರೆಗೆ ಜಾರಿರುವ SEBI ಈಗಲಾದರೂ ಎಚ್ಚರಗೊಳ್ಳುವುದೇ?; ಜೈರಾಮ್ ರಮೇಶ್

- Advertisement -
- Advertisement -

”ಅದಾನಿ ಗ್ರೂಪ್‌ನ ಘಟಕಗಳ ವಿರುದ್ಧ ಮತ್ತೆ ಅಕ್ರಮ ಹಣ ವರ್ಗಾವಣೆಯ ಆರೋಪಗಳು ಕೇಳಿಬರುತ್ತಿದ್ದು, ಈ ವಿಚಾರದಲ್ಲಿ ಕ್ರಮ ಕೈಗೊಳ್ಳದ ಸೆಬಿಯ ಕ್ರಮವನ್ನು ಕಾಂಗ್ರೆಸ್ ಶನಿವಾರ ಪ್ರಶ್ನಿಸಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸುವಂತೆ ಕರೆ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಅದಾನಿ ಗ್ರೂಪ್ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಆರೋಪಗಳ ಸುತ್ತ ಮತ್ತಷ್ಟು ದುರ್ನಾತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಮಾರಿಷಸ್ ಹಣಕಾಸು ನಿಯಂತ್ರಕವು ಅದಾನಿ ಗ್ರೂಪ್‌ನ ಎರಡು ಘಟಕಗಳ ಪರವಾನಗಿಯನ್ನು ರದ್ದುಗೊಳಿಸಿರುವುದರಿಂದ ಈಗ ಸೆಬಿ ಕಾರ್ಯನಿರ್ವಹಿಸುತ್ತದೆಯೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬಂಡವಾಳ ಮಾರುಕಟ್ಟೆಗಳ ನ್ಯಾಯಯುತ ನಿಯಂತ್ರಕರಾಗಿ ವಿಶ್ವಾಸವನ್ನು ಹೆಚ್ಚಿಸಲು ಸೆಬಿ ಏಕೆ ವಿಫಲವಾಗಿದೆ? ಎಂದು ಕೇಳಿದರು.

ಹಣಕಾಸು ಸೇವಾ ಕಾಯ್ದೆ, ಸೆಕ್ಯುರಿಟೀಸ್ ಆಕ್ಟ್, ಫೈನಾನ್ಷಿಯಲ್ ಇಂಟೆಲಿಜೆನ್ಸ್ ಸೇರಿದಂತೆ ಹಲವು ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸೆಬಿಗೆ ಸಮಾನವಾದ ಮಾರಿಷಸ್‌ನ ಹಣಕಾಸು ಸೇವಾ ಆಯೋಗವು (ಎಫ್‌ಎಸ್‌ಸಿ) ಮೇ 2022 ರಲ್ಲಿ ಅದಾನಿ-ಗ್ರೂಪ್‌ನ ಷೇರುದಾರರ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ರಮೇಶ್ ಹೇಳಿದರು. Anti-Money Laundering ನಿಯಮಗಳು (2003 ಮತ್ತು 2018), ಮತ್ತು ಮನಿ ಲಾಂಡರಿಂಗ್ ಮತ್ತು ಭಯೋತ್ಪಾದಕ ಹಣಕಾಸು ತಡೆಗಟ್ಟುವಿಕೆಯ ಸಂಹಿತೆಯಡಿ ಅದಾನಿ-ಗ್ರೂಪ್‌ನ ಷೇರುದಾರರ ಪರವಾನಗಿಯನ್ನು ಎಫ್‌ಎಸ್‌ಸಿ ರದ್ದುಗೊಳಿಸಿದೆ.

”ಮಾರಿಷಸ್ ನಿಯಂತ್ರಕರು ಶಂಕಿತ ಅದಾನಿ-ಸಂಬಂಧಿತ ಘಟಕಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೆ ಸೆಬಿ ಅಸಹಾಯಕತೆಯನ್ನು ಪ್ರತಿಪಾದಿಸುತ್ತಿದೆ” ಎಂದು ಹೇಳಿದರು.

”ಎಮರ್ಜಿಂಗ್ ಇಂಡಿಯಾ ಫಂಡ್ ಮ್ಯಾನೇಜ್‌ಮೆಂಟ್, ಈ ಗಂಭೀರ ಕಾರಣಗಳ ಮೇಲೆ ಪರವಾನಗಿಯನ್ನು ರದ್ದುಗೊಳಿಸಿದೆ. ವಿನೋದ್ ಅದಾನಿ ಸಹವರ್ತಿಗಳಾದ ನಾಸರ್ ಅಲಿ ಶಾಬನ್ ಅಹ್ಲಿ ಮತ್ತು ಚಾಂಗ್ ಚುಂಗ್-ಲಿಂಗ್‌ಗೆ ಮಾರ್ಗಗಳಾಗಿದ್ದ ಎರಡು ಘಟಕಗಳ ಷೇರುಗಳನ್ನು ನಿಯಂತ್ರಿಸಿದೆ. ಅಹ್ಲಿ ಮತ್ತು ಚಾಂಗ್ ಈ ನಿಧಿಗಳ ಮೂಲಕ ಅದಾನಿ ಕಂಪನಿಗಳಿಗೆ ಸಂಶಯಾಸ್ಪದ ಹೂಡಿಕೆಗಳನ್ನು ಮಾಡಿದ್ದರು.

”ಮೋದಿಗಾಗಿ ನಿದ್ರೆಗೆ ಜಾರಿರುವ ಸೆಬಿ ಈಗಲಾದರೂ ಎಚ್ಚರಗೊಳ್ಳುವುದೇ?” ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸಂಸತ್ತಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಮತ್ತು ಈ ಪ್ರಕರಣದ ತನಿಖೆಗಾಗಿ ಜೆಪಿಸಿಯನ್ನು ಸ್ಥಾಪಿಸಬೇಕು. ಇಲ್ಲವಾದರೆ ಅದಾನಿಯ ಬೃಹತ್ ಭ್ರಷ್ಟಾಚಾರದ ವಿರುದ್ಧ ಕ್ರಮ ಸಾಧ್ಯವಾಗುವುದಿಲ್ಲ ಎಂಬುದಕ್ಕೆ ಇದು ಹೆಚ್ಚು ಸಾಕ್ಷಿಯಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...