Homeಕರ್ನಾಟಕಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್​ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯು ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿದೆ.

ಅಭಿನವ ಹಾಲಶ್ರೀ ಸ್ವಾಮೀಜಿ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ​ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಹಾಗಾಗಿ ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಸ್ವಾಮೀಜಿಯ ಮೇಲಿನ ಆರೋಪವೇನು?

ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಇದೇ ಮನೆಯಲ್ಲಿ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿದೆ.

ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಆಂಧ್ರಪ್ರದೇಶದಲ್ಲಿ ಕಾರು ಚಾಲಕ ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.

MLA ಟಿಕೆಟ್ ಕೊಡಿಸುವುದಾಗಿ ವಂಚಿಸಿ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ.

ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿ ಜಿಲ್ಲೆ ಬೈಂದೂರಿನ ಹರ್ಷಾನಾಯ್ಕ್ ಹಳ್ಳಿಹೊಳೆ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ. 11ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

ಉದ್ಯಮಿಗೆ 5 ಕೋಟಿ ವಂಚಿಸಿರುವ ಚೈತ್ರಾ ಕುಂದಾಪುರ ತನ್ನ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಾರೆ. ಉಡುಪಿ ತಾಲೂಕಿನ ಉಪ್ಪೂರಿನಲ್ಲಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಾಕರ್​ನಲ್ಲಿ ನಗನಾಣ್ಯ ಸೇರಿದಂತೆ 1.08 ಕೋಟಿ ಮೌಲ್ಯದ ಆಸ್ತಿ ಪತ್ರ, 65 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಲಕ್ಷ ರೂ. ಬ್ಯಾಂಕ್​ ಲಾಕರ್​ನಲ್ಲಿ ಪತ್ತೆ ಆಗಿದೆ.

ಇದನ್ನೂ ಓದಿ: 5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...