HomeಮುಖಪುಟINDIA ಒಕ್ಕೂಟವು ಮಾದ್ಯಮಗಳಿಗೆ ಬಹಿಷ್ಕಾರ ಹಾಕಿರುವ ಬಗ್ಗೆ ಮಾಹಿತಿ ಇಲ್ಲ: ನಿತೀಶ್‌ ಕುಮಾರ್‌

INDIA ಒಕ್ಕೂಟವು ಮಾದ್ಯಮಗಳಿಗೆ ಬಹಿಷ್ಕಾರ ಹಾಕಿರುವ ಬಗ್ಗೆ ಮಾಹಿತಿ ಇಲ್ಲ: ನಿತೀಶ್‌ ಕುಮಾರ್‌

- Advertisement -
- Advertisement -

ಪ್ರತಿಪಕ್ಷಗಳ INDIA ಒಕ್ಕೂಟವು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿರುವುದರ ಬಗ್ಗೆ ಯಾವುದೇ ಮಾಹಿತಿ ನನಗಿಲ್ಲ ಮತ್ತು ಇದು ತಪ್ಪು ನಿರ್ಧಾರ ಎಂದು ಬಿಹಾರದ ಸಿಎಂ ಹಾಗೂ INDIA ಒಕ್ಕೂಟದ ಸದಸ್ಯ ಪಕ್ಷದ ನಾಯಕ ನಿತೀಶ್‌ ಕುಮಾರ್‌ ಅವರು ಹೇಳಿದ್ದಾರೆ.

INDIA ಮೈತ್ರಿಕೂಟದ ಕೆಲ ಸದಸ್ಯರಿಗೆ ಕೆಲ ಟಿವಿ ಆಂಕರ್‌ಗಳ ಕಾರ್ಯಕ್ರಮದಲ್ಲಿ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಕುಮಾರ್ ಹೇಳಿದರು. ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ನಾನು ಯಾವಾಗಲೂ ಕೇಂದ್ರದಲ್ಲಿ ಅಧಿಕಾರದಲ್ಲಿರುವವರ ದಾಳಿಗೆ ಒಳಗಾಗುತ್ತಿರುವ ಪತ್ರಿಕಾ ಸ್ವಾತಂತ್ರ್ಯದ ಪರವಾಗಿದ್ದೇನೆ ಎಂದು ಹೇಳಿದ್ದಾರೆ.

ನಾವು ಪ್ರಸ್ತುತ ಅಧಿಕಾರದಲ್ಲಿರುವವರನ್ನು ಸೋಲಿಸಿ ನಿಮ್ಮ ವೃತ್ತಿಯನ್ನು ಅಭ್ಯಾಸ ಮಾಡಲು ನಿಮಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುವ ಭರವಸೆ ನೀಡುತ್ತೇವೆ ಎಂದು ನಿತೀಶ್ ಕುಮಾರ್‌ ಅವರು ಇದೇ ವೇಳೆ ಪತ್ರಕರ್ತರಿಗೆ ಹೇಳಿದ್ದಾರೆ.

ನಾನು ಪತ್ರಕರ್ತರ ಬೆಂಬಲಕ್ಕೆ ಇದ್ದೇನೆ. ಎಲ್ಲರಿಗೂ ಸಂಪೂರ್ಣ ಮುಕ್ತ ಸ್ವಾತಂತ್ರ್ಯ ಸಿಕ್ಕಾಗ ಪತ್ರಕರ್ತರು ತಮಗೆ ಬೇಕಾದುದನ್ನು ಬರೆಯುತ್ತಾರೆ. ಅವರನ್ನು ನಿಯಂತ್ರಿಸಲಾಗಿದೆಯೇ? ನಾನು ಅದನ್ನು ಮಾಡಿದ್ದೇನೆಯೇ? ಅವರಿಗೆ ಹಕ್ಕುಗಳಿವೆ, ನಾನು ಯಾರ ವಿರುದ್ಧವೂ ಅಲ್ಲ ಎಂದು ಅವರು ಹೇಳಿದ್ದಾರೆ.

INDIA ಒಕ್ಕೂಟದ ನಾಯಕರು 14 ಸುದ್ದಿ ನಿರೂಪಕರು ಆಯೋಜಿಸುವ ಟಿವಿ ಸಂವಾದ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಬುಧವಾರ ಪ್ರಕಟಿಸಿತ್ತು. ಆದರೆ ನಿನ್ನೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಮೈತ್ರಿಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ ಅಥವಾ ನಿಷೇಧಿಸಿಲ್ಲ ಎಂದು ಹೇಳಿದ್ದರು.

ಅವರು ನಮ್ಮ ಶತ್ರುಗಳಲ್ಲ ಅವರು ತಮ್ಮ ವಿರುದ್ಧದ ನಿಲುವುಗಳನ್ನು ಹೊಂದಿರಬಹುದು ಆದರೆ ಯಾವುದೂ ಶಾಶ್ವತವಲ್ಲ,  ಅವರು ಮಾಡುತ್ತಿರುವುದು ಭಾರತಕ್ಕೆ ಒಳ್ಳೆಯದಲ್ಲ ಎಂದು ಅವರು ಅರಿತುಕೊಂಡರೆ, ನಾವು ಮತ್ತೆ ಅವರ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಅದಿತಿ ತ್ಯಾಗಿ, ಅಮನ್ ಚೋಪ್ರಾ, ಅಮಿದ್ ದೇವಗನ್, ಆನಂದ್ ನರಸಿಂಹನ್, ಅರ್ನಾಬ್ ಗೋಸ್ವಾಮಿ, ಅಶೋಕ್ ಶ್ರೀವಾಸ್ತವ್, ಚಿತ್ರಾ ತ್ರಿಪಾಠಿ, ಗೌರವ್ ಸಾವಂತ್, ನಾವಿಕ ಕುಮಾರ್, ಪ್ರಾಚಿ ಪರಾಶರ್, ರುಬಿಕಾ ಲಿಯಾಕತ್, ಶಿವ ಆರೂರ್, ಸುಧೀರ್ ಚೌಧರಿ ಮತ್ತು ಸುಶಾಂತ್ ಸಿನ್ಹಾ ನಡೆಸಿಕೊಡುವ ದೂರದರ್ಶನ ಚರ್ಚೆಗಳಿಗೆ ತನ್ನ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಹೇಳಲಾಗಿತ್ತು.

ಈ ಬಗ್ಗೆ ಶುಕ್ರವಾರ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಈ ಆಂಕರ್‌ಗಳು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕಾಗಿ ಪ್ರಾಯೋಜಿತ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಹಾಗಾಗಿ INDIA ಒಕ್ಕೂಟವು ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದರು.

ಇದನ್ನು ಓದಿ: INDIA ಒಕ್ಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ: ಪವನ್ ಖೇರಾ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...