Homeಕರ್ನಾಟಕಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

ಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

- Advertisement -
- Advertisement -

ಹಣ ಪಡೆದು ಬಿಜೆಪಿ ಟಿಕೆಟ್ ಕೊಟ್ಟಿರುವ ಬಗ್ಗೆ ಊಹಾಪೋಹ ಇದೆ. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಐದು ಕೋಟಿ ವಂಚಿಸಿದ ಪ್ರಕರಣದ ಬಗ್ಗೆ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಣ ಪಡೆದ ಬಗ್ಗೆ ಕೆಲವು ಕಡೆ ಸುದ್ದಿ ಹೊರಗೆ ಬರುತ್ತಿವೆ, ಇನ್ನೂ ಕೆಲವೆಡೆ ಹೊರಗೆ ಬರುತ್ತಿಲ್ಲ. ಟಿಕೆಟ್ ಕೊಡಿಸಲು ಇಂಥದ್ದೊಂದು ಟೀಮ್ ರೆಡಿಯಾಗಿದೆ ಅಂದರೆ ಇದನ್ನು ಗಂಭೀರವಾಗಿ ವಿಚಾರ ಮಾಡಬೇಕು. ಮಾಹಿತಿ‌ ಪ್ರಕಾರ ಹಿಂದೂ ಕಾರ್ಯಕರ್ತರೇ ಪ್ರಕರಣದಲ್ಲಿದ್ದಾರೆ. ಕನಕಗಿರಿಯಲ್ಲಿ‌ ಟಿಕೆಟ್ ಡೀಲ್ ವಿಷಯಕ್ಕೆ ‌ದೂರು ದಾಖಲಾಗಿದೆ. ದೂರು ಕೊಡದೆ ಇರುವವರು ಇನ್ನೂ ಸಾಕಷ್ಟು ಜನ ಇರಬಹುದು?” ಎಂದು ಕೇಳಿದರು.

”ಕೆಲವೇ ವ್ಯಕ್ತಿಗಳ ಕೈಯಲ್ಲಿ ಬಿಜೆಪಿ ಇದೆ ಎಂದು ನಾನು ಹೇಳಿದ್ದೆ. ಅದು ಈಗ ಪ್ರೂವ್ ಆಗುತ್ತಿದೆ. ವ್ಯಕ್ತಿಯನ್ನು ನೋಡಿ ಟಿಕೆಟ್ ಕೊಡುವ ಪ್ರಕ್ರಿಯೆ ಮೊದಲು ಇತ್ತು. ನಾನೇ ಎಷ್ಟೋ ಜನರಿಗೆ ಹಠ ಮಾಡಿ ಟಿಕೆಟ್ ಕೊಡಿಸಿದ್ದೇನೆ. ರಾಮದುರ್ಗದಲ್ಲಿ ರಿಯಲ್ ಎಸ್ಟೇಟ್ ವ್ಯಕ್ತಿಗೆ ಟಿಕೆಟ್ ಕೊಡುತ್ತಾರೆ. ಏನೋ ವ್ಯವಹಾರ ನಡೆದಿದೆ ಅನ್ನೋದಂತೂ ಸತ್ಯ” ಎಂದು ಹೇಳಿದರು.

”ಪ್ರಾಥಮಿಕ ಹಂತದಲ್ಲಿ ವ್ಯವಹಾರ ನಡೆದಿರುವ ಬಗ್ಗೆ ಸಾಬೀತಾಗಿದೆ. ಚೈತ್ರಾ ಕುಂದಾಪೂರ ಅಪರಾಧಿ ಸ್ಥಾನದಲ್ಲಿ ‌ನಿಂತಿದ್ದಾರೆ. ಚೈತ್ರಾ ಕುಂದಾಪೂರ ಪ್ರಕರಣ ಹೊರಬರುತ್ತಿದ್ದಂತೆ ಕೆಲವರಿಗೆ ಧೈರ್ಯ ಬಂದಿದೆ” ಎಂದರು.

ಈದ್ಗಾ ಮೈದಾನದ ಹೋರಾಟದಲ್ಲಿ ಜಗದೀಶ್ ಶೆಟ್ಟರ್ ವಿರುದ್ದವೂ ಬಿಜೆಪಿ ಕಾರ್ಯಕರ್ತರು ದಿಕ್ಕಾರ ಕೂಗಿದ ವಿಚಾರವಾಗಿ ಮಾತನಾಡಿದ ಅವರು, ”ಬಿಜೆಪಿಗೆ ನಾನು ಅಂದರೆ ಭಯ. ನಾನು ಪಕ್ಷ ಬಿಟ್ಟು ಹೋದ ಮೇಲೆ ಏನಾಗಿದೆ ಅನ್ನೋದು ಗೊತ್ತಾಗಿದೆ. ಅದನ್ನು ಇನ್ನೂ ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಆಗಿಲ್ಲ” ಎಂದು ಹೇಳಿದರು..

”ಜಗದೀಶ್ ಶೆಟ್ಟರ್ ಅವರನ್ನ ವಿಧಾನಸಭೆ ಚುನಾವಣೆಯಲ್ಲಿ ಟಾರ್ಗೆಟ್ ‌ಮಾಡಿದ್ದೀರಿ. ಇವಾಗಲೂ ಟಾರ್ಗೆಟ್ ‌ಯಾಕೆ? ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನನ್ನ ಭಯ ಆರಂಭವಾಗಿದೆ. ಭಯ ಇರುವ ಕಾರಣಕ್ಕೆ ಪದೇಪದೆ ನನ್ನ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಇದರಿಂದ ಬಿಜೆಪಿಗೆ ನಷ್ಟ ಹೊರತು ಲಾಭ ಅಲ್ಲ. ಪದೇಪದೆ ಶೆಟ್ಟರ್ ಹೆಸರು ಹೇಳಿದರೆ ನೀವು ಉದ್ಧಾರವೂ ಆಗುವುದಿಲ್ಲ” ಎಂದರು.

”ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆ ಮಾಡಿ, ಯಾರು ಬೇಡಾ ಅಂತಾರೆ? ನಾನು‌ ಪ್ರತಿ ವರ್ಷ ಮನೆಯಲ್ಲಿ ಗಣೇಶ ಕೂರಿಸುತ್ತೇನೆ. ಕೆಲವರು ಮನೆಯಲ್ಲಿ ಗಣೇಶ ಕೂರಿಸಲ್ಲ. ತೋರಿಕೆಗೆ ಮಾಡುತ್ತಾರೆ” ಎಂದರು.

”ಮಹಾದಾಯಿ ಬಗ್ಗೆ ಹೋರಾಟ ಮಾಡಿ, ಮೋದಿ ಬಂದು ಒಂಬತ್ತು ವರ್ಷ ಆಯ್ತು. ಹನಿ ನೀರು‌ ಕೊಡಲು ಇಷ್ಟು ವರ್ಷ ಬೇಕಾ? ಮಹದಾಯಿ ನೀರು ಕೊಡಿ… ನಿಮ್ಮ ಜನ್ಮ ಸಾರ್ಥಕ ಆಗತ್ತದೆ. ಅಲ್ಲದೆ, ಪ್ರತಿ ವರ್ಷ ಕಳಸಾ ಬಂಡೂರಿ ಹೆಸರಲ್ಲಿ ವೋಟ್ ತೆಗೆದುಕೊಳ್ಳುವುದಾ? ಮೋದಿ ಅವರಿದ್ದಾಗಲೇ ಕಳಸಾ ಬಂಡೂರಿ‌ ಮುಕ್ತಾಯ ಮಾಡಿ” ಎಂದರು.

ಇದನ್ನೂ ಓದಿ: ಕರ್ನಾಟಕ ಮಾದರಿಯಲ್ಲಿ ತೆಲಂಗಾಣ ಚುನಾವಣೆಗೆ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...