Homeಕರ್ನಾಟಕಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

ಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

- Advertisement -
- Advertisement -

ಹಣ ಪಡೆದು ಬಿಜೆಪಿ ಟಿಕೆಟ್ ಕೊಟ್ಟಿರುವ ಬಗ್ಗೆ ಊಹಾಪೋಹ ಇದೆ. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಐದು ಕೋಟಿ ವಂಚಿಸಿದ ಪ್ರಕರಣದ ಬಗ್ಗೆ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಣ ಪಡೆದ ಬಗ್ಗೆ ಕೆಲವು ಕಡೆ ಸುದ್ದಿ ಹೊರಗೆ ಬರುತ್ತಿವೆ, ಇನ್ನೂ ಕೆಲವೆಡೆ ಹೊರಗೆ ಬರುತ್ತಿಲ್ಲ. ಟಿಕೆಟ್ ಕೊಡಿಸಲು ಇಂಥದ್ದೊಂದು ಟೀಮ್ ರೆಡಿಯಾಗಿದೆ ಅಂದರೆ ಇದನ್ನು ಗಂಭೀರವಾಗಿ ವಿಚಾರ ಮಾಡಬೇಕು. ಮಾಹಿತಿ‌ ಪ್ರಕಾರ ಹಿಂದೂ ಕಾರ್ಯಕರ್ತರೇ ಪ್ರಕರಣದಲ್ಲಿದ್ದಾರೆ. ಕನಕಗಿರಿಯಲ್ಲಿ‌ ಟಿಕೆಟ್ ಡೀಲ್ ವಿಷಯಕ್ಕೆ ‌ದೂರು ದಾಖಲಾಗಿದೆ. ದೂರು ಕೊಡದೆ ಇರುವವರು ಇನ್ನೂ ಸಾಕಷ್ಟು ಜನ ಇರಬಹುದು?” ಎಂದು ಕೇಳಿದರು.

”ಕೆಲವೇ ವ್ಯಕ್ತಿಗಳ ಕೈಯಲ್ಲಿ ಬಿಜೆಪಿ ಇದೆ ಎಂದು ನಾನು ಹೇಳಿದ್ದೆ. ಅದು ಈಗ ಪ್ರೂವ್ ಆಗುತ್ತಿದೆ. ವ್ಯಕ್ತಿಯನ್ನು ನೋಡಿ ಟಿಕೆಟ್ ಕೊಡುವ ಪ್ರಕ್ರಿಯೆ ಮೊದಲು ಇತ್ತು. ನಾನೇ ಎಷ್ಟೋ ಜನರಿಗೆ ಹಠ ಮಾಡಿ ಟಿಕೆಟ್ ಕೊಡಿಸಿದ್ದೇನೆ. ರಾಮದುರ್ಗದಲ್ಲಿ ರಿಯಲ್ ಎಸ್ಟೇಟ್ ವ್ಯಕ್ತಿಗೆ ಟಿಕೆಟ್ ಕೊಡುತ್ತಾರೆ. ಏನೋ ವ್ಯವಹಾರ ನಡೆದಿದೆ ಅನ್ನೋದಂತೂ ಸತ್ಯ” ಎಂದು ಹೇಳಿದರು.

”ಪ್ರಾಥಮಿಕ ಹಂತದಲ್ಲಿ ವ್ಯವಹಾರ ನಡೆದಿರುವ ಬಗ್ಗೆ ಸಾಬೀತಾಗಿದೆ. ಚೈತ್ರಾ ಕುಂದಾಪೂರ ಅಪರಾಧಿ ಸ್ಥಾನದಲ್ಲಿ ‌ನಿಂತಿದ್ದಾರೆ. ಚೈತ್ರಾ ಕುಂದಾಪೂರ ಪ್ರಕರಣ ಹೊರಬರುತ್ತಿದ್ದಂತೆ ಕೆಲವರಿಗೆ ಧೈರ್ಯ ಬಂದಿದೆ” ಎಂದರು.

ಈದ್ಗಾ ಮೈದಾನದ ಹೋರಾಟದಲ್ಲಿ ಜಗದೀಶ್ ಶೆಟ್ಟರ್ ವಿರುದ್ದವೂ ಬಿಜೆಪಿ ಕಾರ್ಯಕರ್ತರು ದಿಕ್ಕಾರ ಕೂಗಿದ ವಿಚಾರವಾಗಿ ಮಾತನಾಡಿದ ಅವರು, ”ಬಿಜೆಪಿಗೆ ನಾನು ಅಂದರೆ ಭಯ. ನಾನು ಪಕ್ಷ ಬಿಟ್ಟು ಹೋದ ಮೇಲೆ ಏನಾಗಿದೆ ಅನ್ನೋದು ಗೊತ್ತಾಗಿದೆ. ಅದನ್ನು ಇನ್ನೂ ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಆಗಿಲ್ಲ” ಎಂದು ಹೇಳಿದರು..

”ಜಗದೀಶ್ ಶೆಟ್ಟರ್ ಅವರನ್ನ ವಿಧಾನಸಭೆ ಚುನಾವಣೆಯಲ್ಲಿ ಟಾರ್ಗೆಟ್ ‌ಮಾಡಿದ್ದೀರಿ. ಇವಾಗಲೂ ಟಾರ್ಗೆಟ್ ‌ಯಾಕೆ? ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನನ್ನ ಭಯ ಆರಂಭವಾಗಿದೆ. ಭಯ ಇರುವ ಕಾರಣಕ್ಕೆ ಪದೇಪದೆ ನನ್ನ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಇದರಿಂದ ಬಿಜೆಪಿಗೆ ನಷ್ಟ ಹೊರತು ಲಾಭ ಅಲ್ಲ. ಪದೇಪದೆ ಶೆಟ್ಟರ್ ಹೆಸರು ಹೇಳಿದರೆ ನೀವು ಉದ್ಧಾರವೂ ಆಗುವುದಿಲ್ಲ” ಎಂದರು.

”ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆ ಮಾಡಿ, ಯಾರು ಬೇಡಾ ಅಂತಾರೆ? ನಾನು‌ ಪ್ರತಿ ವರ್ಷ ಮನೆಯಲ್ಲಿ ಗಣೇಶ ಕೂರಿಸುತ್ತೇನೆ. ಕೆಲವರು ಮನೆಯಲ್ಲಿ ಗಣೇಶ ಕೂರಿಸಲ್ಲ. ತೋರಿಕೆಗೆ ಮಾಡುತ್ತಾರೆ” ಎಂದರು.

”ಮಹಾದಾಯಿ ಬಗ್ಗೆ ಹೋರಾಟ ಮಾಡಿ, ಮೋದಿ ಬಂದು ಒಂಬತ್ತು ವರ್ಷ ಆಯ್ತು. ಹನಿ ನೀರು‌ ಕೊಡಲು ಇಷ್ಟು ವರ್ಷ ಬೇಕಾ? ಮಹದಾಯಿ ನೀರು ಕೊಡಿ… ನಿಮ್ಮ ಜನ್ಮ ಸಾರ್ಥಕ ಆಗತ್ತದೆ. ಅಲ್ಲದೆ, ಪ್ರತಿ ವರ್ಷ ಕಳಸಾ ಬಂಡೂರಿ ಹೆಸರಲ್ಲಿ ವೋಟ್ ತೆಗೆದುಕೊಳ್ಳುವುದಾ? ಮೋದಿ ಅವರಿದ್ದಾಗಲೇ ಕಳಸಾ ಬಂಡೂರಿ‌ ಮುಕ್ತಾಯ ಮಾಡಿ” ಎಂದರು.

ಇದನ್ನೂ ಓದಿ: ಕರ್ನಾಟಕ ಮಾದರಿಯಲ್ಲಿ ತೆಲಂಗಾಣ ಚುನಾವಣೆಗೆ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...