Homeಮುಖಪುಟಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

- Advertisement -
- Advertisement -

ಇಂದಿನಿಂದ ಐದು ದಿನಗಳ ಕಾಲ ಸಂಸತ್ತಿನ ‘ಅಮೃತ್ ಕಾಲ’ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಕಾರ್ಯಸೂಚಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವದ ವಿಕಾಸದ ಚರ್ಚೆಗಳನ್ನು ಒಳಗೊಂಡಿದೆ. ವಿವಾದಾತ್ಮಕ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸೇರಿದಂತೆ ಎಂಟು ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ.

ಸಂಸತ್ತಿನ 75 ವರ್ಷಗಳ ಕುರಿತು ಸೋಮವಾರದ ಚರ್ಚೆಯನ್ನು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪಿಯೂಷ್ ಗೋಯಲ್ ಅವರು ಆರಂಭಿಸುವ ಸಾಧ್ಯತೆಯಿದೆ.

“ಭಾರತದ ಸಂಸತ್ತಿನ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಮತ್ತು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ” ಕಾರ್ಯಕ್ರಮಕ್ಕಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ, ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ಸಭೆಯು ನಡೆಯಲಿದೆ. ಅದರ ನಂತರ ಫೋಟೋ ಸೆಷನ್ ನಡೆಯಲಿದೆ.

ಅಧಿವೇಶನದಲ್ಲಿ ಎಂಟು ಮಸೂದೆಗಳನ್ನು ಮಂಡಿಸಲು ಕೇಂದ್ರವು ಯೋಜಿಸಿದೆ ಆದರೆ ಐದು ದಿನಗಳ ಅಧಿವೇಶನಕ್ಕಾಗಿ ಅಜೆಂಡಾದಲ್ಲಿ ಉಲ್ಲೇಖಿಸದ ವಿಷಯಗಳನ್ನು ಕೇಂದ್ರವು ಕೈಗೆತ್ತಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಸೋಮವಾರ ಸಂಸತ್ತಿನ 75 ವರ್ಷಗಳ ಪಯಣದ ಕುರಿತು ಚರ್ಚೆ ನಡೆಯಲಿದೆ.

ಶಾಸಕಾಂಗ ವ್ಯವಹಾರದಲ್ಲಿ ಉಲ್ಲೇಖಿಸಲಾದ ಮಸೂದೆಗಳಲ್ಲಿ ಒಂದು ಚುನಾವಣಾ ಆಯುಕ್ತರ ನೇಮಕಾತಿಗಾಗಿ ಆಯ್ಕೆ ಸಮಿತಿಯನ್ನು ರಚಿಸುವ ಗುರಿಯನ್ನು ಹೊಂದಿದೆ. ಆದರೆ, ಈ ಮಸೂದೆಯನ್ನು ಕಾರ್ಯಸೂಚಿಯಿಂದ ತೆಗೆದುಹಾಕಲಾಗಿದೆ ಎಂದು ಸೋಮವಾರ ಸುದ್ದಿ ವರದಿಗಳು ತಿಳಿಸಿವೆ.

ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಂಪುಟ ಸಚಿವರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ ಮಸೂದೆಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ಹಿರಿಯ ನಾಗರಿಕರ ಕಲ್ಯಾಣ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದ ಮೂರು ಮಸೂದೆಯನ್ನು ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಎಲ್ಲ ಸದಸ್ಯರಿಗೆ ತಿಳಿಸಲಾಯಿತು.

ಬಿಜು ಜನತಾ ದಳ ಮತ್ತು ಭಾರತ್ ರಾಷ್ಟ್ರ ಸಮಿತಿ ಸೇರಿದಂತೆ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಂತಹ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಕೋಟಾವನ್ನು ಖಚಿತಪಡಿಸಿಕೊಳ್ಳಲು ಮಸೂದೆಯನ್ನು ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿವೆ. ಭಾನುವಾರ ನಡೆದ ಹೈದರಾಬಾದ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಈ ವಿಷಯದ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದೆ. ಆದರೆ, ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿಲ್ಲ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸೆಂಟ್ರಲ್ ಹಾಲ್ ನಲ್ಲಿ ಮಂಗಳವಾರದ ಕಾರ್ಯಕ್ರಮದ ನಂತರ, ಸದನವನ್ನು ಹೊಸ ಸಂಸತ್ ಭವನಕ್ಕೆ ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...