Homeಕರ್ನಾಟಕಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

- Advertisement -
- Advertisement -

ಬೈಂದೂರಿನ ಉದ್ಯಮಿಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್​ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಲಾಗಿದೆ.

ಈ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಹೀಗಾಗಿ ಅವರು ನಿರೀಕ್ಷಣಾ ಜಾಮೀನು ಪ್ರಯತ್ನಿಸಿದರು. ಆದರೆ ನ್ಯಾಯಾಲಯವು ಅವರ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿದೆ.

ಕಳೆದ ವಾರ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದರು. ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಲಶ್ರೀ ಸ್ವಾಮೀಜಿ ಇಂದು (ಮಂಗಳವಾರ) ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆಪ್ಟೆಂಬರ್ 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದು, ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ. ಅಲ್ಲದೇ ಆ ದೊಡ್ಡ ದೊಡ್ಡವರು ಯಾರ್ಯಾರು ಎನ್ನುವುದನ್ನು ಕಾದುನೋಡಬೇಕಿದೆ.

ಹಾಲಶ್ರೀ ಸ್ವಾಮೀಜಿ ಜೊತೆ ಸೂಲಿಬೆಲೆ ಫೋಟೊ ವೈರಲ್

ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿವೆ.

ಚಕ್ರವರ್ತಿ ಸೂಲಿಬೆಲೆ ಮತ್ತು ಹಾಲಶ್ರೀ ಸ್ವಾಮೀಜಿ ರೈಲಿನಲ್ಲಿ ಪ್ರಯಾಣಿಸುವ ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊಗಳು ಹರಿದಾಡುತ್ತಿವೆ. ಅಲ್ಲದೇ, ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಜೊತೆಗಿದ್ದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ ಅವರ ಫೋಟೊಗಳು ಕೂಡ ಹರಿದಾಡುತ್ತಿದ್ದು, ”ʼಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ”ʼ ಎಂದು ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಫೋಟೊ ಹಂಚಿಕೊಂಡಿದ್ದು, ಈ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಇರಬಹುದು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...