Homeಅಂತರಾಷ್ಟ್ರೀಯಖಲಿಸ್ತಾನಿ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಆರೋಪಿಸಿದ ಕೆನಡಾ: ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟನೆ

ಖಲಿಸ್ತಾನಿ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಆರೋಪಿಸಿದ ಕೆನಡಾ: ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟನೆ

- Advertisement -
- Advertisement -

ಕಳೆದ ಜೂನ್‌ನಲ್ಲಿ ನಡೆದಿದ್ದ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕನ ಹತ್ಯೆಯಲ್ಲಿ ಭಾರತಕ್ಕೆ ಸಂಬಂಧವಿದೆ ಎಂದು ಆರೋಪಿಸಿ ಕೆನಡಾವು ಭಾರತೀಯ ಅಧಿಕಾರಿಯನ್ನು ದೇಶ ತೊರೆಯಲು ಸೂಚಿಸಿದ ಬೆನ್ನಲ್ಲೇ ಕೆನಡಾದ ರಾಜತಾಂತ್ರಿಕ ಅಧಿಕಾರಿಯನ್ನು ಭಾರತವು ಉಚ್ಛಾಟನೆ ಮಾಡಿದೆ.

ಕೆನಡಾದ ರಾಜತಾಂತ್ರಿಕ ಅಧಿಕಾರಿಗೆ ದೇಶ ತೊರೆಯಲು ಐದು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಭಾರತ ಮಂಗಳವಾರ ಹೇಳಿದೆ. ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಕರೆಸಿಕೊಂಡು ಉಚ್ಛಾಟಣೆ ನಿರ್ಧಾರದ ಬಗ್ಗೆ ತಿಳಿಸಲಾಗಿದೆ.

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ಭಾರತ ತಿರಸ್ಕರಿಸಿದೆ  ಮತ್ತು ಇದನ್ನು ಅಸಂಬದ್ಧ ಎಂದು ಹೇಳಿದೆ.

ಭಾರತವು ವಾಂಟೆಡ್ ಭಯೋತ್ಪಾದಕ ಎಂದು ಘೋಷಿಸಿದ್ದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತೀಯ ಏಜೆಂಟ್‌ಗಳಿಗೆ ಸಂಬಂಧವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಗಳನ್ನು ಮಾಡಿದ್ದರು.

ಇದರ ಬೆನ್ನಲ್ಲೇ ಭಾರತದಲ್ಲಿನ ಕೆನಡಾದ ಹೈ ಕಮಿಷನರ್ ಕ್ಯಾಮರೂನ್ ಮ್ಯಾಕೆ ಅವರನ್ನು ವಿದೇಶಾಂಗ  ಸಚಿವಾಲಯಕ್ಕೆ ಕರೆಸಲಾಗಿದೆ ಮತ್ತು ಅವರು ಸಭೆಯ ನಂತರ ವಿದೇಶಾಂಗ ಸಚಿವಾಲಯದಿಂದ  ಹೊರಹೋಗುತ್ತಿರುವುದು ವೀಡಿಯೊದಲ್ಲಿ ಕಂಡು ಬಂದಿದೆ.

ವೀಡಿಯೊದಲ್ಲಿ, ಮ್ಯಾಕೆ  ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದು ಕಂಡು ಬಂದಿದೆ. ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ಇಂದು ಸಚಿವಾಲಯಕ್ಕೆ ಕರೆಸಲಾಯಿತು ಮತ್ತು ಉಚ್ಛಾಟನೆ ಮಾಡುವ  ಭಾರತ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.

ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಭಾರತವು ವಾಂಟೆಡ್ ಭಯೋತ್ಪಾದಕ ಎಂದು ಘೋಷಿಸಿತ್ತು ಎಂಬುವುದು ಉಲ್ಲೇಖನೀಯ. ಈ ಮಧ್ಯೆ ಜೂನ್ 18 ರಂದು, ವ್ಯಾಂಕೋವರ್‌ನ ಉಪನಗರವಾದ ಸರ್ರೆಯ ಗುರುದ್ವಾರದ ಬಳಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಇದನ್ನು ಓದಿ: ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...