Homeಮುಖಪುಟವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

- Advertisement -
- Advertisement -

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3ರ ಮೂಲಕ ಚಂದ್ರನ ಅಂಗಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿತ್ತು. ಆದರೆ ಆ ಬಳಿಕ ಪ್ರತಿಪಕ್ಷಗಳ ಕೆಲ ನಾಯಕರು ಚಂದ್ರಯಾನ-3ಕ್ಕೆ ಶ್ರಮಿಸಿದ್ದ ವಿಜ್ಞಾನಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದರು. ಇದೀಗ ಆರೋಪಕ್ಕೆ  ಪುಷ್ಠಿ ನೀಡುವಂತೆ ವೇತನ ಸಿಗದೆ ಇಂಜಿನಿಯರ್‌ ಓರ್ವರು ಇಡ್ಲಿ ಮಾರಾಟಕ್ಕೆ ಇಳಿದಿರುವುದು ಬಹಿರಂಗವಾಗಿದೆ.

ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್)ನ ಇಂಜಿನಿಯರ್‌  ದೀಪಕ್ ಕುಮಾರ್ ಉಪ್ರಾರಿಯಾ ಅವರು ಜೀವನ ನಿರ್ವಹಣೆಗಾಗಿ ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

BBC ವರದಿಯ ಪ್ರಕಾರ, ಉಪ್ರಾರಿಯಾ ಅವರು ರಾಂಚಿಯ ಧುರ್ವಾ ಪ್ರದೇಶದಲ್ಲಿನ ಹಳೆಯ ವಿಧಾನಸಭಾ ಕಟ್ಟಡದ ಎದುರು ಅಂಗಡಿಯನ್ನು ಹೊಂದಿದ್ದಾರೆ. ಚಂದ್ರಯಾನ-3ಗಾಗಿ ಫೋಲ್ಡಿಂಗ್ ಪ್ಲಾಟ್‌ಫಾರ್ಮ್ ಮತ್ತು ಸ್ಲೈಡಿಂಗ್ ಡೋರ್‌ ತಯಾರಿಸಲು ನೆರವಾಗಿದ್ದ ಇವರು HECಯ ಉದ್ಯೋಗಿ. ಆದರೆ ಅವರಿಗೆ ಕಳೆದ 18 ತಿಂಗಳಿನಿಂದ ಸಂಬಳವನ್ನು ಪಾವತಿಸದ ಕಾರಣ ಕುಟುಂಬದ ನಿರ್ವಹಣೆಗೆ ಅವರು ರಸ್ತೆ ಬದಿಯಲ್ಲಿ ಅಂಗಡಿಯನ್ನು ತೆರೆದಿದ್ದಾರೆ.

ಚಂದ್ರಯಾನ-3 ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಚಂದ್ರಯಾನ ಮಿಷನ್‌ನ ಲಾಂಚ್‌ಪ್ಯಾಡ್ ನಿರ್ಮಿಸಿದ ವಿಜ್ಞಾನಿಗಳಿಗೆ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆದರೆ BBC ವರದಿಯ ಪ್ರಕಾರ, ಉಪ್ರಾರಿಯಾ ಸೇರಿ HECಯ ಸುಮಾರು 2,800 ಉದ್ಯೋಗಿಗಳಿಗೆ ಕಳೆದ 18 ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಲಾಗಿಲ್ಲ.

ಈ ಕುರಿತು ಮಾತನಾಡಿದ ಉಪ್ರಾರಿಯಾ ಅವರು, ಜೀವನ ನಿರ್ವಹಣೆಗೆ ಕಳೆದ ಕೆಲವು ದಿನಗಳಿಂದ ಇಡ್ಲಿಗಳನ್ನು ಮಾರುತ್ತಿದ್ದೇನೆ. ನಾನು ಅಂಗಡಿ ಜೊತೆಗೆ ಕಚೇರಿಯ ಕೆಲಸಗಳನ್ನು ಕೂಡ ಮಾಡುತ್ತೇನೆ. ಬೆಳಿಗ್ಗೆ ಇಡ್ಲಿ ಮಾರಾಟ ಮಾಡುತ್ತೇನೆ. ಮಧ್ಯಾಹ್ನ ಕಚೇರಿಗೆ ಹೋಗುತ್ತೇನೆ. ಸಂಜೆ ಕಚೇರಿಯಿಂದ ಬಂದು  ಇಡ್ಲಿ ಮಾರಾಟದ  ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೊದಲು ನಾನು  2 ಲಕ್ಷ ಲೋನ್‌ ಪಡೆದು ಮನೆಯನ್ನು ನಿರ್ವಹಿಸಿದೆ. ಬಳಿಕ ಕುಟುಂಬಸ್ಥರಿಂದ ಸಾಲ ಪಡೆಯಲು ಪ್ರಾರಂಭಿಸಿದೆ. ಇದುವರೆಗೆ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಯಾರಿಗೂ ಹಣ ಹಿಂತಿರುಗಿಸದ ಕಾರಣ ಈಗ ಜನರು ಸಾಲ ನೀಡುವುದನ್ನು ನಿಲ್ಲಿಸಿದ್ದಾರೆ. ನಂತರ ನಾನು ನನ್ನ ಹೆಂಡತಿಯ ಆಭರಣಗಳನ್ನು ಅಡಮಾನವಿಟ್ಟು ಕೆಲವು ದಿನ ಮನೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಹಸಿವಿನ ಸಮಯ ನನಗೆ ಎದುರಾಗಿದೆ ಎಂದು ಭಾವಿಸಿದಾಗ ನಾನು ಇಡ್ಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ನನ್ನ ಹೆಂಡತಿ ಇಡ್ಲಿಗಳನ್ನು ಮಾಡುತ್ತಾಳೆ. ಅದನ್ನು ಮಾರಾಟ ಮಾಡುವುದರಿಂದ ನನಗೆ ಪ್ರತಿದಿನ 300 ರಿಂದ 400 ರೂಪಾಯಿಗಳು ಸಿಗುತ್ತವೆ. ಅದರಲ್ಲಿ ನಾನು 50-100 ರೂಪಾಯಿ ಲಾಭ ಗಳಿಸುತ್ತೇನೆ. ಈ ಹಣದಲ್ಲಿ ನಾನು ನನ್ನ ಮನೆಯನ್ನು ಮುನ್ನೆಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಬಿಟ್ಟು 8,000 ಸಂಬಳಕ್ಕೆ ಎಚ್‌ಇಸಿಗೆ ಸೇರಿದ್ದರು. ಸರ್ಕಾರಿ ಕಂಪನಿಯಾದ ಕಾರಣ ಅವರು ತಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಭಾವಿಸಿದ್ದರು. ಆದರೆ ಪರಿಸ್ಥಿತಿ ಇದೀಗ ಬೇರೆಯೇ ಆಗಿದೆ.

ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರೂ ಶಾಲೆಗೆ ಹೋಗುತ್ತಾರೆ. ಈ ವರ್ಷ ನಾನು ಅವರ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಪ್ರತಿದಿನ ನೋಟಿಸ್ ಕಳುಹಿಸಲಾಗುತ್ತಿದೆ. ತರಗತಿಯಲ್ಲಿಯೂ ಸಹ ಶಿಕ್ಷಕರು ಹೆಚ್ಇಸಿಯಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳು ಯಾರು ಎಂದು ಕೇಳುತ್ತಾರೆ. ಎದ್ದು ನಿಲ್ಲಲು ಅವರು ಹೇಳುತ್ತಾರೆ. ನನ್ನ ಮಕ್ಕಳು ಅವಮಾನಕ್ಕೊಳಗಾಗಿದ್ದಾರೆ. ನನ್ನ ಹೆಣ್ಣು ಮಕ್ಕಳು ಅಳುತ್ತಾ ಮನೆಗೆ ಬರುತ್ತಾರೆ. ಅವರು ಅಳುವುದನ್ನು ನೋಡಿ ನನ್ನ ಹೃದಯ ಒಡೆಯುತ್ತದೆ ಎಂದು ಉಪ್ರಾರಿಯಾ ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಈ ಪರಿಸ್ಥಿತಿ ದೀಪಕ್ ಉಪ್ರಾರಿಯಾಗೆ ಮಾತ್ರವಲ್ಲ. ಅವರಂತೆಯೇ HECಯಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. HEC employees ge sambla kodlilla Andre ISRO employee sambla sigde kelsa bitta anta baritira alla nimge social responsibility illva .. yen nam deshad maryadi tegiyakke anta ne hutkotiro ..fake news channel thu

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...