Homeಮುಖಪುಟವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

- Advertisement -
- Advertisement -

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3ರ ಮೂಲಕ ಚಂದ್ರನ ಅಂಗಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿತ್ತು. ಆದರೆ ಆ ಬಳಿಕ ಪ್ರತಿಪಕ್ಷಗಳ ಕೆಲ ನಾಯಕರು ಚಂದ್ರಯಾನ-3ಕ್ಕೆ ಶ್ರಮಿಸಿದ್ದ ವಿಜ್ಞಾನಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದರು. ಇದೀಗ ಆರೋಪಕ್ಕೆ  ಪುಷ್ಠಿ ನೀಡುವಂತೆ ವೇತನ ಸಿಗದೆ ಇಂಜಿನಿಯರ್‌ ಓರ್ವರು ಇಡ್ಲಿ ಮಾರಾಟಕ್ಕೆ ಇಳಿದಿರುವುದು ಬಹಿರಂಗವಾಗಿದೆ.

ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್)ನ ಇಂಜಿನಿಯರ್‌  ದೀಪಕ್ ಕುಮಾರ್ ಉಪ್ರಾರಿಯಾ ಅವರು ಜೀವನ ನಿರ್ವಹಣೆಗಾಗಿ ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

BBC ವರದಿಯ ಪ್ರಕಾರ, ಉಪ್ರಾರಿಯಾ ಅವರು ರಾಂಚಿಯ ಧುರ್ವಾ ಪ್ರದೇಶದಲ್ಲಿನ ಹಳೆಯ ವಿಧಾನಸಭಾ ಕಟ್ಟಡದ ಎದುರು ಅಂಗಡಿಯನ್ನು ಹೊಂದಿದ್ದಾರೆ. ಚಂದ್ರಯಾನ-3ಗಾಗಿ ಫೋಲ್ಡಿಂಗ್ ಪ್ಲಾಟ್‌ಫಾರ್ಮ್ ಮತ್ತು ಸ್ಲೈಡಿಂಗ್ ಡೋರ್‌ ತಯಾರಿಸಲು ನೆರವಾಗಿದ್ದ ಇವರು HECಯ ಉದ್ಯೋಗಿ. ಆದರೆ ಅವರಿಗೆ ಕಳೆದ 18 ತಿಂಗಳಿನಿಂದ ಸಂಬಳವನ್ನು ಪಾವತಿಸದ ಕಾರಣ ಕುಟುಂಬದ ನಿರ್ವಹಣೆಗೆ ಅವರು ರಸ್ತೆ ಬದಿಯಲ್ಲಿ ಅಂಗಡಿಯನ್ನು ತೆರೆದಿದ್ದಾರೆ.

ಚಂದ್ರಯಾನ-3 ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಚಂದ್ರಯಾನ ಮಿಷನ್‌ನ ಲಾಂಚ್‌ಪ್ಯಾಡ್ ನಿರ್ಮಿಸಿದ ವಿಜ್ಞಾನಿಗಳಿಗೆ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆದರೆ BBC ವರದಿಯ ಪ್ರಕಾರ, ಉಪ್ರಾರಿಯಾ ಸೇರಿ HECಯ ಸುಮಾರು 2,800 ಉದ್ಯೋಗಿಗಳಿಗೆ ಕಳೆದ 18 ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಲಾಗಿಲ್ಲ.

ಈ ಕುರಿತು ಮಾತನಾಡಿದ ಉಪ್ರಾರಿಯಾ ಅವರು, ಜೀವನ ನಿರ್ವಹಣೆಗೆ ಕಳೆದ ಕೆಲವು ದಿನಗಳಿಂದ ಇಡ್ಲಿಗಳನ್ನು ಮಾರುತ್ತಿದ್ದೇನೆ. ನಾನು ಅಂಗಡಿ ಜೊತೆಗೆ ಕಚೇರಿಯ ಕೆಲಸಗಳನ್ನು ಕೂಡ ಮಾಡುತ್ತೇನೆ. ಬೆಳಿಗ್ಗೆ ಇಡ್ಲಿ ಮಾರಾಟ ಮಾಡುತ್ತೇನೆ. ಮಧ್ಯಾಹ್ನ ಕಚೇರಿಗೆ ಹೋಗುತ್ತೇನೆ. ಸಂಜೆ ಕಚೇರಿಯಿಂದ ಬಂದು  ಇಡ್ಲಿ ಮಾರಾಟದ  ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೊದಲು ನಾನು  2 ಲಕ್ಷ ಲೋನ್‌ ಪಡೆದು ಮನೆಯನ್ನು ನಿರ್ವಹಿಸಿದೆ. ಬಳಿಕ ಕುಟುಂಬಸ್ಥರಿಂದ ಸಾಲ ಪಡೆಯಲು ಪ್ರಾರಂಭಿಸಿದೆ. ಇದುವರೆಗೆ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಯಾರಿಗೂ ಹಣ ಹಿಂತಿರುಗಿಸದ ಕಾರಣ ಈಗ ಜನರು ಸಾಲ ನೀಡುವುದನ್ನು ನಿಲ್ಲಿಸಿದ್ದಾರೆ. ನಂತರ ನಾನು ನನ್ನ ಹೆಂಡತಿಯ ಆಭರಣಗಳನ್ನು ಅಡಮಾನವಿಟ್ಟು ಕೆಲವು ದಿನ ಮನೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಹಸಿವಿನ ಸಮಯ ನನಗೆ ಎದುರಾಗಿದೆ ಎಂದು ಭಾವಿಸಿದಾಗ ನಾನು ಇಡ್ಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ನನ್ನ ಹೆಂಡತಿ ಇಡ್ಲಿಗಳನ್ನು ಮಾಡುತ್ತಾಳೆ. ಅದನ್ನು ಮಾರಾಟ ಮಾಡುವುದರಿಂದ ನನಗೆ ಪ್ರತಿದಿನ 300 ರಿಂದ 400 ರೂಪಾಯಿಗಳು ಸಿಗುತ್ತವೆ. ಅದರಲ್ಲಿ ನಾನು 50-100 ರೂಪಾಯಿ ಲಾಭ ಗಳಿಸುತ್ತೇನೆ. ಈ ಹಣದಲ್ಲಿ ನಾನು ನನ್ನ ಮನೆಯನ್ನು ಮುನ್ನೆಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಬಿಟ್ಟು 8,000 ಸಂಬಳಕ್ಕೆ ಎಚ್‌ಇಸಿಗೆ ಸೇರಿದ್ದರು. ಸರ್ಕಾರಿ ಕಂಪನಿಯಾದ ಕಾರಣ ಅವರು ತಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಭಾವಿಸಿದ್ದರು. ಆದರೆ ಪರಿಸ್ಥಿತಿ ಇದೀಗ ಬೇರೆಯೇ ಆಗಿದೆ.

ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರೂ ಶಾಲೆಗೆ ಹೋಗುತ್ತಾರೆ. ಈ ವರ್ಷ ನಾನು ಅವರ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಪ್ರತಿದಿನ ನೋಟಿಸ್ ಕಳುಹಿಸಲಾಗುತ್ತಿದೆ. ತರಗತಿಯಲ್ಲಿಯೂ ಸಹ ಶಿಕ್ಷಕರು ಹೆಚ್ಇಸಿಯಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳು ಯಾರು ಎಂದು ಕೇಳುತ್ತಾರೆ. ಎದ್ದು ನಿಲ್ಲಲು ಅವರು ಹೇಳುತ್ತಾರೆ. ನನ್ನ ಮಕ್ಕಳು ಅವಮಾನಕ್ಕೊಳಗಾಗಿದ್ದಾರೆ. ನನ್ನ ಹೆಣ್ಣು ಮಕ್ಕಳು ಅಳುತ್ತಾ ಮನೆಗೆ ಬರುತ್ತಾರೆ. ಅವರು ಅಳುವುದನ್ನು ನೋಡಿ ನನ್ನ ಹೃದಯ ಒಡೆಯುತ್ತದೆ ಎಂದು ಉಪ್ರಾರಿಯಾ ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಈ ಪರಿಸ್ಥಿತಿ ದೀಪಕ್ ಉಪ್ರಾರಿಯಾಗೆ ಮಾತ್ರವಲ್ಲ. ಅವರಂತೆಯೇ HECಯಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. HEC employees ge sambla kodlilla Andre ISRO employee sambla sigde kelsa bitta anta baritira alla nimge social responsibility illva .. yen nam deshad maryadi tegiyakke anta ne hutkotiro ..fake news channel thu

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...