Homeಮುಖಪುಟವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

- Advertisement -
- Advertisement -

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3ರ ಮೂಲಕ ಚಂದ್ರನ ಅಂಗಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿತ್ತು. ಆದರೆ ಆ ಬಳಿಕ ಪ್ರತಿಪಕ್ಷಗಳ ಕೆಲ ನಾಯಕರು ಚಂದ್ರಯಾನ-3ಕ್ಕೆ ಶ್ರಮಿಸಿದ್ದ ವಿಜ್ಞಾನಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದರು. ಇದೀಗ ಆರೋಪಕ್ಕೆ  ಪುಷ್ಠಿ ನೀಡುವಂತೆ ವೇತನ ಸಿಗದೆ ಇಂಜಿನಿಯರ್‌ ಓರ್ವರು ಇಡ್ಲಿ ಮಾರಾಟಕ್ಕೆ ಇಳಿದಿರುವುದು ಬಹಿರಂಗವಾಗಿದೆ.

ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್)ನ ಇಂಜಿನಿಯರ್‌  ದೀಪಕ್ ಕುಮಾರ್ ಉಪ್ರಾರಿಯಾ ಅವರು ಜೀವನ ನಿರ್ವಹಣೆಗಾಗಿ ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

BBC ವರದಿಯ ಪ್ರಕಾರ, ಉಪ್ರಾರಿಯಾ ಅವರು ರಾಂಚಿಯ ಧುರ್ವಾ ಪ್ರದೇಶದಲ್ಲಿನ ಹಳೆಯ ವಿಧಾನಸಭಾ ಕಟ್ಟಡದ ಎದುರು ಅಂಗಡಿಯನ್ನು ಹೊಂದಿದ್ದಾರೆ. ಚಂದ್ರಯಾನ-3ಗಾಗಿ ಫೋಲ್ಡಿಂಗ್ ಪ್ಲಾಟ್‌ಫಾರ್ಮ್ ಮತ್ತು ಸ್ಲೈಡಿಂಗ್ ಡೋರ್‌ ತಯಾರಿಸಲು ನೆರವಾಗಿದ್ದ ಇವರು HECಯ ಉದ್ಯೋಗಿ. ಆದರೆ ಅವರಿಗೆ ಕಳೆದ 18 ತಿಂಗಳಿನಿಂದ ಸಂಬಳವನ್ನು ಪಾವತಿಸದ ಕಾರಣ ಕುಟುಂಬದ ನಿರ್ವಹಣೆಗೆ ಅವರು ರಸ್ತೆ ಬದಿಯಲ್ಲಿ ಅಂಗಡಿಯನ್ನು ತೆರೆದಿದ್ದಾರೆ.

ಚಂದ್ರಯಾನ-3 ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಚಂದ್ರಯಾನ ಮಿಷನ್‌ನ ಲಾಂಚ್‌ಪ್ಯಾಡ್ ನಿರ್ಮಿಸಿದ ವಿಜ್ಞಾನಿಗಳಿಗೆ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆದರೆ BBC ವರದಿಯ ಪ್ರಕಾರ, ಉಪ್ರಾರಿಯಾ ಸೇರಿ HECಯ ಸುಮಾರು 2,800 ಉದ್ಯೋಗಿಗಳಿಗೆ ಕಳೆದ 18 ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಲಾಗಿಲ್ಲ.

ಈ ಕುರಿತು ಮಾತನಾಡಿದ ಉಪ್ರಾರಿಯಾ ಅವರು, ಜೀವನ ನಿರ್ವಹಣೆಗೆ ಕಳೆದ ಕೆಲವು ದಿನಗಳಿಂದ ಇಡ್ಲಿಗಳನ್ನು ಮಾರುತ್ತಿದ್ದೇನೆ. ನಾನು ಅಂಗಡಿ ಜೊತೆಗೆ ಕಚೇರಿಯ ಕೆಲಸಗಳನ್ನು ಕೂಡ ಮಾಡುತ್ತೇನೆ. ಬೆಳಿಗ್ಗೆ ಇಡ್ಲಿ ಮಾರಾಟ ಮಾಡುತ್ತೇನೆ. ಮಧ್ಯಾಹ್ನ ಕಚೇರಿಗೆ ಹೋಗುತ್ತೇನೆ. ಸಂಜೆ ಕಚೇರಿಯಿಂದ ಬಂದು  ಇಡ್ಲಿ ಮಾರಾಟದ  ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೊದಲು ನಾನು  2 ಲಕ್ಷ ಲೋನ್‌ ಪಡೆದು ಮನೆಯನ್ನು ನಿರ್ವಹಿಸಿದೆ. ಬಳಿಕ ಕುಟುಂಬಸ್ಥರಿಂದ ಸಾಲ ಪಡೆಯಲು ಪ್ರಾರಂಭಿಸಿದೆ. ಇದುವರೆಗೆ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಯಾರಿಗೂ ಹಣ ಹಿಂತಿರುಗಿಸದ ಕಾರಣ ಈಗ ಜನರು ಸಾಲ ನೀಡುವುದನ್ನು ನಿಲ್ಲಿಸಿದ್ದಾರೆ. ನಂತರ ನಾನು ನನ್ನ ಹೆಂಡತಿಯ ಆಭರಣಗಳನ್ನು ಅಡಮಾನವಿಟ್ಟು ಕೆಲವು ದಿನ ಮನೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಹಸಿವಿನ ಸಮಯ ನನಗೆ ಎದುರಾಗಿದೆ ಎಂದು ಭಾವಿಸಿದಾಗ ನಾನು ಇಡ್ಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ನನ್ನ ಹೆಂಡತಿ ಇಡ್ಲಿಗಳನ್ನು ಮಾಡುತ್ತಾಳೆ. ಅದನ್ನು ಮಾರಾಟ ಮಾಡುವುದರಿಂದ ನನಗೆ ಪ್ರತಿದಿನ 300 ರಿಂದ 400 ರೂಪಾಯಿಗಳು ಸಿಗುತ್ತವೆ. ಅದರಲ್ಲಿ ನಾನು 50-100 ರೂಪಾಯಿ ಲಾಭ ಗಳಿಸುತ್ತೇನೆ. ಈ ಹಣದಲ್ಲಿ ನಾನು ನನ್ನ ಮನೆಯನ್ನು ಮುನ್ನೆಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಬಿಟ್ಟು 8,000 ಸಂಬಳಕ್ಕೆ ಎಚ್‌ಇಸಿಗೆ ಸೇರಿದ್ದರು. ಸರ್ಕಾರಿ ಕಂಪನಿಯಾದ ಕಾರಣ ಅವರು ತಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಭಾವಿಸಿದ್ದರು. ಆದರೆ ಪರಿಸ್ಥಿತಿ ಇದೀಗ ಬೇರೆಯೇ ಆಗಿದೆ.

ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರೂ ಶಾಲೆಗೆ ಹೋಗುತ್ತಾರೆ. ಈ ವರ್ಷ ನಾನು ಅವರ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಪ್ರತಿದಿನ ನೋಟಿಸ್ ಕಳುಹಿಸಲಾಗುತ್ತಿದೆ. ತರಗತಿಯಲ್ಲಿಯೂ ಸಹ ಶಿಕ್ಷಕರು ಹೆಚ್ಇಸಿಯಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳು ಯಾರು ಎಂದು ಕೇಳುತ್ತಾರೆ. ಎದ್ದು ನಿಲ್ಲಲು ಅವರು ಹೇಳುತ್ತಾರೆ. ನನ್ನ ಮಕ್ಕಳು ಅವಮಾನಕ್ಕೊಳಗಾಗಿದ್ದಾರೆ. ನನ್ನ ಹೆಣ್ಣು ಮಕ್ಕಳು ಅಳುತ್ತಾ ಮನೆಗೆ ಬರುತ್ತಾರೆ. ಅವರು ಅಳುವುದನ್ನು ನೋಡಿ ನನ್ನ ಹೃದಯ ಒಡೆಯುತ್ತದೆ ಎಂದು ಉಪ್ರಾರಿಯಾ ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಈ ಪರಿಸ್ಥಿತಿ ದೀಪಕ್ ಉಪ್ರಾರಿಯಾಗೆ ಮಾತ್ರವಲ್ಲ. ಅವರಂತೆಯೇ HECಯಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. HEC employees ge sambla kodlilla Andre ISRO employee sambla sigde kelsa bitta anta baritira alla nimge social responsibility illva .. yen nam deshad maryadi tegiyakke anta ne hutkotiro ..fake news channel thu

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....