Homeಕರ್ನಾಟಕOBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

OBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಕೂಡ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳ ಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರು ಅವರು, ”ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ” ಎಂದು ಹೇಳಿದ್ದಾರೆ.

”ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದುʼʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.

”ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ” ಎಂದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಬಿಲ್‌: ಒಬಿಸಿಗಳನ್ನು ಸೇರ್ಪಡೆಗೆ ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆಗ್ರಹ

”ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರ ಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

”ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

”ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ” ಎಂದು ಹೇಳಿದರು.

”2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು. ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು” ಎಂದು ವಿವರಿಸಿದ್ದಾರೆ.

”2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ದರಾಗಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾತ್‌ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. “ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ” ಎಂದು ಸಿದ್ದರಾಮಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಮಸೂದೆಯು ಮಹಿಳೆಯರ ಓಲೈಕೆಯ ಪ್ರಯತ್ನವಾಗಿದೆ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...