Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಎಲ್ಗಾರ್ ಪರಿಷದ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ಯಕರ್ತ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿ ರಾವುತ್ ಮಾಡಿದ ಮನವಿಯನ್ನು ಅಂಗೀಕರಿಸಿತು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಎರಡು ವಾರಗಳ ಕಾಲ ತನ್ನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದೆ. ನಂತರ ಪೀಠವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿತು.

ರಾವತ್ ಅವರನ್ನು ಜೂನ್ 2018ರಲ್ಲಿ ಬಂಧಿಸಲಾಯಿತು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರು ವಿಶೇಷ ಎನ್‌ಐಎ ನ್ಯಾಯಾಲಯವು ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ, ಜಾಮೀನು ಕೋರಿ 2022ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾವುತ್ ತನ್ನ ಮನವಿಯಲ್ಲಿ ತನ್ನ ಕಸ್ಟಡಿಯು ಅನಗತ್ಯವಾಗಿದೆ ಮತ್ತು ಇದು ಸಂವಿಧಾನದ 14 ಮತ್ತು 21 ನೇ ವಿಧಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸಾಂವಿಧಾನಿಕ ಆಧಾರದ ಮೇಲೆ ಜಾಮೀನು ಪಡೆಯಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾದ ಆರೋಪಿಗೆ ಮಂಜೂರು ಮಾಡುವುದು ಸಮರ್ಥನೀಯವಲ್ಲ ಎಂದು ಎನ್ಐಎ ಮನವಿಯನ್ನು ವಿರೋಧಿಸಿದೆ.

ಈ ಪ್ರಕರಣದಲ್ಲಿ 16 ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಐವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ವಿದ್ವಾಂಸ-ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ವಕೀಲೆ ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರಿಗೆ ನಿಯಮಿತ ಜಾಮೀನು ನೀಡಲಾಗಿದ್ದು, ಕವಿ ವರವರ ರಾವ್ ಅವರು ಆರೋಗ್ಯದ ಆಧಾರದ ಮೇಲೆ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಮತ್ತೊಬ್ಬ ಆರೋಪಿ, ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಪ್ರಕರಣವು ಪುಣೆಯಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ, ಪುಣೆ ಪೊಲೀಸರ ಪ್ರಕಾರ ಮಾವೋವಾದಿಗಳಿಂದ ಹಣ ಪಡೆದಿದೆ. ಅಲ್ಲಿ ಮಾಡಿದ ಉದ್ರೇಕಕಾರಿ ಭಾಷಣಗಳು ಮರುದಿನ ಪುಣೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಜಾಮೀನು

ಮಹೇಶ್ ರಾವುತ್‌ ಕುರಿತು ಮಾಹಿತಿ:

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.

ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...