HomeUncategorizedದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

ದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

- Advertisement -
- Advertisement -

ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್ ಗ್ರಾಮದಲ್ಲಿ 70 ವರ್ಷದ ದಲಿತ ಬಗ್ದಾವತ್ ಭಜನ್ (ಭಕ್ತಿಗೀತೆ) ಗಾಯಕನೊಬ್ಬ ತನ್ನ ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ‘ಶಿಕ್ಷೆ’ಯ ರೂಪವಾಗಿ ಆತನ ತಲೆಯ ಮೇಲೆ ಚಪ್ಪಲಿಯನ್ನು ಹೊರಿಸಿ, ಕ್ಷಮೆ ಕೇಳುವಂತೆ ಮಾಡಿರುವ ವೀಡಿಯೊ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತಡರಾತ್ರಿ 10 ಜನರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಜನಾ ಗಾಯಕ ದಾಲ್ಚಂದ್ ಬಾಲಾಯ್ ಅವರು ತಮ್ಮ ತಲೆಯ ಮೇಲೆ ಪಾದರಕ್ಷೆಗಳನ್ನು ಹೊತ್ತುಕೊಂಡು ಸುಮಾರು 60 ರಿಂದ 70 ಜನರ ಎದುರು ಸಾರ್ವಜನಿಕವಾಗಿ ‘ಕ್ಷಮೆ’ ಕೇಳುವಂತೆ ಒತ್ತಾಯಿಸಲಾಯಿತು. ಅವರು ಬಗ್ದಾವತ್ ಹಾಡಿನ ನಿರೂಪಣೆಯ ಸಮಯದಲ್ಲಿ ಗುರ್ಜರ್ ಸಮುದಾಯದ ದೇವತೆಯಾದ ಸಾದು ಮಾತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಹಿಂದಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಘಟನೆ ಬಗ್ಗೆ ಮಾತನಾಡಿದ ಚಿತ್ತೋರ್‌ಗಢ ಪೊಲೀಸ್ ವರಿಷ್ಠಾಧಿಕಾರಿ ರಾಜನ್ ದುಶ್ಯಂತ್, ”ದುಗರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ದಾಲು ಸಾಲ್ವಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಗುಜ್ಜರ್ ಸಮುದಾಯವನ್ನು ಕೆರಳಿಸಿತು ಮತ್ತು ನೂರಾರು ಜನರು ಜಾತಿ ಪಂಚಾಯತಿಗಾಗಿ ಜಮಾಯಿಸಿದರು ಮತ್ತು ಸಾಲ್ವಿಯನ್ನು ಕ್ಷಮೆಯಾಚಿಸಲು ಕೇಳಿದರು” ಎಂದು ತಿಳಿಸಿದ್ದಾರೆ.

ಸಾಲ್ವಿ ಭಯಭೀತರಾಗಿದ್ದರು ಮತ್ತು ಪೊಲೀಸರಿಗೆ ತಿಳಿಸುವ ಮೊದಲು ಕ್ಷಮೆಯಾಚಿಸಲು ತಲೆಯ ಮೇಲೆ ಬೂಟುಗಳನ್ನು ಇಟ್ಟುಕೊಂಡಿದ್ದರು. ಘಟನೆಯ ಬಗ್ಗೆ ನನಗೆ ತಿಳಿದಾಗ, ನಾನು ಸ್ಥಳೀಯ ಠಾಣಾಧಿಕಾರಿಯನ್ನು ಸಾಲ್ವಿ ಅವರ ಮನೆಗೆ ಕಳುಹಿಸಿದೆ ಆದರೆ ಅವರು ದೂರು ನೀಡಲು ನಿರಾಕರಿಸಿದರು. ಘಟನೆಯ ವಿಡಿಯೋ ಬುಧವಾರ ವೈರಲ್ ಆದಾಗ ನಾವು ಪ್ರಕರಣ ದಾಖಲಿಸಿಕೊಂಡೆವು” ಎಂದು ದುಶ್ಯಂತ್ ಹೇಳಿದರು.

”ಸಾಲ್ವಿಯನ್ನು ಈ ರೀತಿಯಾಗಿ ಕ್ಷಮೆಯಾಚಿಸಲು ಪ್ರೇರೇಪಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಕಟ್ಟುನಿಟ್ಟಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಹನ್ನೆರಡು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ದುಶ್ಯಂತ್ ಹೇಳಿದ್ದಾರೆ.

ಸಾಲ್ವಿಯ ಸಹ ಗಾಯಕ ಭೂರಾ ಗುಜ್ಜರ್‌ಗೆ ಜಾತಿ ಪಂಚಾಯತ್ ₹1,100 ದಂಡವನ್ನು ವಿಧಿಸಿದೆ. ಪಂಚಾಯತಿಯು ತನ್ನ ವಿರುದ್ಧ ದಂಡವನ್ನು ಘೋಷಿಸುವ ಮೊದಲು, ಕೆಲವರು ಕೂಗಲು ಪ್ರಾರಂಭಿಸಿದರು ಮತ್ತು ತನ್ನನ್ನು ಹಿಂಸಿಸಲು ಪ್ರಯತ್ನಿಸಿದರು ಎಂದು ಸಾಲ್ವಿ ಪೊಲೀಸರಿಗೆ ತಿಳಿಸಿದರು. ಅವರು ಭಯಭೀತರಾಗಿದ್ದರು ಮತ್ತು ಅದಕ್ಕಾಗಿಯೇ ಅವರು ತಮ್ಮ ಬೂಟುಗಳನ್ನು ತೆಗೆದುಕೊಂಡು ತಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಭಯದಿಂದ ತಲೆಯ ಮೇಲೆ ಇಟ್ಟುಕೊಂಡರು.

”ಧಾರ್ಮಿಕ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು ಮತ್ತು ಅವರಲ್ಲಿ ಹಲವರು ವೀಡಿಯೊಗಳನ್ನು ಮಾಡುತ್ತಿದ್ದರು. ಆಗ ನನ್ನ ಹೇಳಿಕೆಗೆ ಆಕ್ಷೇಪಗಳು ಬರಲಿಲ್ಲ ಆದರೆ ಒಂದು ವಾರದ ನಂತರ ವ್ಯಕ್ತಿಯೊಬ್ಬರು ನನಗೆ ಫೋನ್ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಸಾಲ್ವಿ ಹೇಳಿಕೊಂಡಿದ್ದಾರೆ.

ದಲಿತ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತು ಚಿತ್ತೋರ್‌ಗಢ ಜಿಲ್ಲಾಧಿಕಾರಿಗಳಿಗೆ ಜ್ಞಾಪಕ ಪತ್ರವನ್ನು ನೀಡಿದೆವು. ಆಗ ನಾನು ಪೊಲೀಸ್ ದೂರು ದಾಖಲಿಸಿದೆ ಎಂದು ಸಾಲ್ವಿ ಹೇಳಿದರು.

ಸಾಲ್ವಿಯನ್ನು ಬೆದರಿಸಿದ ವ್ಯಕ್ತಿಗಳನ್ನು ಗುರುತಿಸಲು, ಈ ಪ್ರಕರಣದ ತನಿಖೆ ಮಾಡಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ದುಶ್ಯಂತ್ ಹೇಳಿದರು. ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ದಲಿತರು, ಮುಸ್ಲಿಮರ ಕುರಿತ ರಾಹುಲ್ ಮಾತಿನಲ್ಲಿ ಕಹಿಸತ್ಯವಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...