Homeಮುಖಪುಟ'ಧಂಗರ್' ಮೀಸಲಾತಿ ಕುರಿತ ಮಾತುಕತೆ ವಿಫಲ: ಪ್ರತಿಭಟನೆ ತೀವ್ರಗೊಳಿಸಲು ಮುಂದಾದ ಸಮುದಾಯ

‘ಧಂಗರ್’ ಮೀಸಲಾತಿ ಕುರಿತ ಮಾತುಕತೆ ವಿಫಲ: ಪ್ರತಿಭಟನೆ ತೀವ್ರಗೊಳಿಸಲು ಮುಂದಾದ ಸಮುದಾಯ

- Advertisement -
- Advertisement -

ಧಂಗರ್ ಮೀಸಲಾತಿ ಕುರಿತು ಗುರುವಾರ ನಡೆದ ಮಾತುಕತೆ ವಿಫಲವಾಗಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಸರ್ಕಾರವು ಸಮಸ್ಯೆಯನ್ನು ಪರಿಹರಿಸಲು ಹೆಚ್ಚಿನ ಸಮಯವನ್ನು ಕೋರಿದರೆ, ಧಂಗರ್ ಸಮುದಾಯದ ಕಾರ್ಯಕರ್ತರು ಸರ್ಕಾರಕ್ಕೆ ಹೆಚ್ಚಿನ ಸಮಯವನ್ನು ನೀಡಲು ಸಿದ್ಧರಿಲ್ಲ ಮತ್ತು ತಮ್ಮ ಪ್ರತಿಭಟನೆ ತೀವ್ರಗೊಳಿಸುವುದಾಗಿ ಹೇಳಿದ್ದಾರೆ.

ಧಂಗರ್ ಸಮುದಾಯವು ‘ಪರಿಶಿಷ್ಟ ಪಂಗಡ’ (ST) ಪಟ್ಟಿಯ ಭಾಗವಾಗಿಲ್ಲ. ಬದಲಾಗಿ ‘ಧಂಗಡ್’ ಎಂದು ಪಟ್ಟಿಯಲ್ಲಿದೆ. ಮಹಾರಾಷ್ಟ್ರದ ಧಂಗರ್ ಸಮುದಾಯದ ಮುಖಂಡರು ಹಲವಾರು ವರ್ಷಗಳಿಂದ ಮಹಾರಾಷ್ಟ್ರ ಸರಕಾರದ ಬಳಿ ‘ಧಂಗಡ್’ ಎಂಬ ಶೀರ್ಷಿಕೆಯ ಯಾವುದೇ ಸಮುದಾಯ ಇಲ್ಲ ಮತ್ತು ಪಟ್ಟಿಯಲ್ಲಿ ನಮೂದನ್ನು ತಪ್ಪಾಗಿ ಬರೆಯಲಾಗಿದೆ ಎಂದು ಹೇಳಿದ್ದರು.

ಸರ್ಕಾರ ಅದನ್ನು ಸರಿಪಡಿಸಿ ‘ಧಂಗಡ್’ ಬದಲು ‘ಧಂಗರ್’ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಈ ವಿಚಾರವಾಗಿ ಈ ಮೊದಲು ಪ್ರತಿಭಟನೆ ನಡೆದಿತ್ತು. ಈ ವೇಳೆ ಸಮುದಾಯಕ್ಕೆ ಸರಕಾರದಿಂದ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆಯಲಾಗಿತ್ತು. ಆದರೆ ಮರಾಠ ಮೀಸಲಾತಿಗೆ ನಡೆದ ಹೋರಾಟದ ವಿಚಾರದಲ್ಲಿ ಸರಕಾರ ತ್ವರಿತ ಕ್ರಮಕೊಂಡ ನಂತರ ಧಂಗರ್ ಸಮುದಾಯವೂ ತಮ್ಮ ಪ್ರತಿಭಟನೆ ಪುನರಾರಂಭಿಸಿದೆ.

ಅಹ್ಮದ್‌ನಗರ ಜಿಲ್ಲೆಯ ಚೋಂಡಿಯಲ್ಲಿ ಕಳೆದ ಆರು ದಿನಗಳಿಂದ ಹಿರಿಯ ಧಂಗರ್ ನಾಯಕ ಸುರೇಶ್ ಬಂಡಗರ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಮತ್ತು ಇತರ ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ಮುಂಬೈನ ಸಹ್ಯಾದ್ರಿ ರಾಜ್ಯ ಅತಿಥಿಗೃಹದಲ್ಲಿ ಸಭೆ ನಡೆದಿದೆ. ಆದರೆ ಸಭೆಯಲ್ಲಿ  ಪೂರಕ ಬೆಳವಣಿಗೆ ನಡೆದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ ಸರ್ಕಾರದ ನಿಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸಮಸ್ಯೆಯ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ. ಎರಡು ದಿನಗಳಲ್ಲಿ ಸಮಿತಿಯನ್ನು ರಚಿಸಲಾಗುವುದು ಮತ್ತು ಸರ್ಕಾರ ಹೇಳಿದಂತೆ ಎರಡು ತಿಂಗಳೊಳಗೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಮಿತಿಯು ರಾಜ್ಯಗಳಲ್ಲಿ ಪ್ರವಾಸ ಮಾಡಿ ತನ್ನ ವರದಿಯನ್ನು ಸಿದ್ಧಪಡಿಸುತ್ತದೆ ಎಂದು ಹೇಳಿದ್ದಾರೆ.

ಯಶವಂತ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಬಾಳಾಸಾಹೇಬ ದೊಡ್ತೊಳೆ ಮಾತನಾಡಿ,  ಮೂರು ತಿಂಗಳೊಳಗೆ ಅಧ್ಯಯನ ಮಾಡಿ ಸಮುದಾಯದ ಬೇಡಿಕೆಗಳಿಗೆ ನ್ಯಾಯ ಒದಗಿಸುವುದಾಗಿ ಸರ್ಕಾರ ಹೇಳಿದೆ. ಆದರೆ ಇದು ಹೆಚ್ಚು ಸಮಯ ತೆಗೆದುಕೊಳ್ಳುವ  ಪ್ರಕ್ರಿಯೆ. ಆದ್ದರಿಂದ ನಾವು ಉಪವಾಸವನ್ನು ಮುಂದುವರಿಸಲು ಮತ್ತು ನಮ್ಮ ಬೇಡಿಕೆಗಳ ಕಡೆಗೆ  ಆಂದೋಲನವನ್ನು ತೀವ್ರಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ ಕೇವಲ ಸಕಾರಾತ್ಮಕತೆ ಮತ್ತು ಸಿಹಿ ಮಾತುಗಳು ಕಳೆದ 70 ವರ್ಷಗಳಿಂದ ಧಂಗರ್ ಸಮುದಾಯಕ್ಕೆ ನ್ಯಾಯವನ್ನು ತಂದುಕೊಟ್ಟಿಲ್ಲ. ಇಂದು ಅದೇ ಪುನರಾವರ್ತನೆಯಾಗಿದೆ. ಸರ್ಕಾರ ಈ ಸಮಸ್ಯೆಯನ್ನು ಸಕಾರಾತ್ಮಕವಾಗಿ ನೋಡುತ್ತಿದೆ ಆದರೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟ ಮುಂದುವರಿಸಲು ನಿರ್ಧರಿಸಿದ್ದೇವೆ. ಈಗಾಗಲೇ ಆಮರಣಾಂತ ಉಪವಾಸ ನಡೆಯುತ್ತಿದ್ದು, ಅದನ್ನು ತೀವ್ರಗೊಳಿಸುತ್ತೇವೆ ಎಂದು ಅವರು ಹೇಳಿದರು.

ಬಿಜೆಪಿ ಧಂಗರ್ ಸಮುದಾಯದ ವಿರುದ್ಧವಾಗಿದೆ. ಅವರು ನಮ್ಮ ಸಮುದಾಯಕ್ಕೆ ಕೋಟಾ ನೀಡಲು ಬಯಸುವುದಿಲ್ಲ. ನಾನು ಕಳೆದ 10 ವರ್ಷಗಳಿಂದ ಇದನ್ನು ನೋಡುತ್ತಿದ್ದೇನೆ. ನನ್ನ ಸಮುದಾಯಕ್ಕಾಗಿ ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧನಿದ್ದೇನೆ. ಆದರೆ ನಾನು ಹೋರಾಟವನ್ನು ನಿಲ್ಲಿಸುವುದಿಲ್ಲ, ನಾನು ಆಮರಣಾಂತ ಉಪವಾಸವನ್ನು ಮುಂದುವರಿಸುತ್ತೇನೆ ಎಂದು ಬಂಡಗರ್ ಅವರು ಹೇಳಿದ್ದಾರೆ.

ಇದನ್ನು ಓದಿ: NDA ಆಡಳಿತದ 16 ರಾಜ್ಯಗಳಲ್ಲಿ ಒಬ್ಬರೇ ಒಬ್ಬ ಮಹಿಳಾ ಸಿಎಂಗಳಿಲ್ಲ: ಡೆರೆಕ್ ಓಬ್ರಿಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...