Homeಮುಖಪುಟ'ಧಂಗರ್' ಮೀಸಲಾತಿ ಕುರಿತ ಮಾತುಕತೆ ವಿಫಲ: ಪ್ರತಿಭಟನೆ ತೀವ್ರಗೊಳಿಸಲು ಮುಂದಾದ ಸಮುದಾಯ

‘ಧಂಗರ್’ ಮೀಸಲಾತಿ ಕುರಿತ ಮಾತುಕತೆ ವಿಫಲ: ಪ್ರತಿಭಟನೆ ತೀವ್ರಗೊಳಿಸಲು ಮುಂದಾದ ಸಮುದಾಯ

- Advertisement -
- Advertisement -

ಧಂಗರ್ ಮೀಸಲಾತಿ ಕುರಿತು ಗುರುವಾರ ನಡೆದ ಮಾತುಕತೆ ವಿಫಲವಾಗಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಸರ್ಕಾರವು ಸಮಸ್ಯೆಯನ್ನು ಪರಿಹರಿಸಲು ಹೆಚ್ಚಿನ ಸಮಯವನ್ನು ಕೋರಿದರೆ, ಧಂಗರ್ ಸಮುದಾಯದ ಕಾರ್ಯಕರ್ತರು ಸರ್ಕಾರಕ್ಕೆ ಹೆಚ್ಚಿನ ಸಮಯವನ್ನು ನೀಡಲು ಸಿದ್ಧರಿಲ್ಲ ಮತ್ತು ತಮ್ಮ ಪ್ರತಿಭಟನೆ ತೀವ್ರಗೊಳಿಸುವುದಾಗಿ ಹೇಳಿದ್ದಾರೆ.

ಧಂಗರ್ ಸಮುದಾಯವು ‘ಪರಿಶಿಷ್ಟ ಪಂಗಡ’ (ST) ಪಟ್ಟಿಯ ಭಾಗವಾಗಿಲ್ಲ. ಬದಲಾಗಿ ‘ಧಂಗಡ್’ ಎಂದು ಪಟ್ಟಿಯಲ್ಲಿದೆ. ಮಹಾರಾಷ್ಟ್ರದ ಧಂಗರ್ ಸಮುದಾಯದ ಮುಖಂಡರು ಹಲವಾರು ವರ್ಷಗಳಿಂದ ಮಹಾರಾಷ್ಟ್ರ ಸರಕಾರದ ಬಳಿ ‘ಧಂಗಡ್’ ಎಂಬ ಶೀರ್ಷಿಕೆಯ ಯಾವುದೇ ಸಮುದಾಯ ಇಲ್ಲ ಮತ್ತು ಪಟ್ಟಿಯಲ್ಲಿ ನಮೂದನ್ನು ತಪ್ಪಾಗಿ ಬರೆಯಲಾಗಿದೆ ಎಂದು ಹೇಳಿದ್ದರು.

ಸರ್ಕಾರ ಅದನ್ನು ಸರಿಪಡಿಸಿ ‘ಧಂಗಡ್’ ಬದಲು ‘ಧಂಗರ್’ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಈ ವಿಚಾರವಾಗಿ ಈ ಮೊದಲು ಪ್ರತಿಭಟನೆ ನಡೆದಿತ್ತು. ಈ ವೇಳೆ ಸಮುದಾಯಕ್ಕೆ ಸರಕಾರದಿಂದ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆಯಲಾಗಿತ್ತು. ಆದರೆ ಮರಾಠ ಮೀಸಲಾತಿಗೆ ನಡೆದ ಹೋರಾಟದ ವಿಚಾರದಲ್ಲಿ ಸರಕಾರ ತ್ವರಿತ ಕ್ರಮಕೊಂಡ ನಂತರ ಧಂಗರ್ ಸಮುದಾಯವೂ ತಮ್ಮ ಪ್ರತಿಭಟನೆ ಪುನರಾರಂಭಿಸಿದೆ.

ಅಹ್ಮದ್‌ನಗರ ಜಿಲ್ಲೆಯ ಚೋಂಡಿಯಲ್ಲಿ ಕಳೆದ ಆರು ದಿನಗಳಿಂದ ಹಿರಿಯ ಧಂಗರ್ ನಾಯಕ ಸುರೇಶ್ ಬಂಡಗರ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಮತ್ತು ಇತರ ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ಮುಂಬೈನ ಸಹ್ಯಾದ್ರಿ ರಾಜ್ಯ ಅತಿಥಿಗೃಹದಲ್ಲಿ ಸಭೆ ನಡೆದಿದೆ. ಆದರೆ ಸಭೆಯಲ್ಲಿ  ಪೂರಕ ಬೆಳವಣಿಗೆ ನಡೆದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ ಸರ್ಕಾರದ ನಿಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸಮಸ್ಯೆಯ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ. ಎರಡು ದಿನಗಳಲ್ಲಿ ಸಮಿತಿಯನ್ನು ರಚಿಸಲಾಗುವುದು ಮತ್ತು ಸರ್ಕಾರ ಹೇಳಿದಂತೆ ಎರಡು ತಿಂಗಳೊಳಗೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಮಿತಿಯು ರಾಜ್ಯಗಳಲ್ಲಿ ಪ್ರವಾಸ ಮಾಡಿ ತನ್ನ ವರದಿಯನ್ನು ಸಿದ್ಧಪಡಿಸುತ್ತದೆ ಎಂದು ಹೇಳಿದ್ದಾರೆ.

ಯಶವಂತ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಬಾಳಾಸಾಹೇಬ ದೊಡ್ತೊಳೆ ಮಾತನಾಡಿ,  ಮೂರು ತಿಂಗಳೊಳಗೆ ಅಧ್ಯಯನ ಮಾಡಿ ಸಮುದಾಯದ ಬೇಡಿಕೆಗಳಿಗೆ ನ್ಯಾಯ ಒದಗಿಸುವುದಾಗಿ ಸರ್ಕಾರ ಹೇಳಿದೆ. ಆದರೆ ಇದು ಹೆಚ್ಚು ಸಮಯ ತೆಗೆದುಕೊಳ್ಳುವ  ಪ್ರಕ್ರಿಯೆ. ಆದ್ದರಿಂದ ನಾವು ಉಪವಾಸವನ್ನು ಮುಂದುವರಿಸಲು ಮತ್ತು ನಮ್ಮ ಬೇಡಿಕೆಗಳ ಕಡೆಗೆ  ಆಂದೋಲನವನ್ನು ತೀವ್ರಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ ಕೇವಲ ಸಕಾರಾತ್ಮಕತೆ ಮತ್ತು ಸಿಹಿ ಮಾತುಗಳು ಕಳೆದ 70 ವರ್ಷಗಳಿಂದ ಧಂಗರ್ ಸಮುದಾಯಕ್ಕೆ ನ್ಯಾಯವನ್ನು ತಂದುಕೊಟ್ಟಿಲ್ಲ. ಇಂದು ಅದೇ ಪುನರಾವರ್ತನೆಯಾಗಿದೆ. ಸರ್ಕಾರ ಈ ಸಮಸ್ಯೆಯನ್ನು ಸಕಾರಾತ್ಮಕವಾಗಿ ನೋಡುತ್ತಿದೆ ಆದರೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟ ಮುಂದುವರಿಸಲು ನಿರ್ಧರಿಸಿದ್ದೇವೆ. ಈಗಾಗಲೇ ಆಮರಣಾಂತ ಉಪವಾಸ ನಡೆಯುತ್ತಿದ್ದು, ಅದನ್ನು ತೀವ್ರಗೊಳಿಸುತ್ತೇವೆ ಎಂದು ಅವರು ಹೇಳಿದರು.

ಬಿಜೆಪಿ ಧಂಗರ್ ಸಮುದಾಯದ ವಿರುದ್ಧವಾಗಿದೆ. ಅವರು ನಮ್ಮ ಸಮುದಾಯಕ್ಕೆ ಕೋಟಾ ನೀಡಲು ಬಯಸುವುದಿಲ್ಲ. ನಾನು ಕಳೆದ 10 ವರ್ಷಗಳಿಂದ ಇದನ್ನು ನೋಡುತ್ತಿದ್ದೇನೆ. ನನ್ನ ಸಮುದಾಯಕ್ಕಾಗಿ ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧನಿದ್ದೇನೆ. ಆದರೆ ನಾನು ಹೋರಾಟವನ್ನು ನಿಲ್ಲಿಸುವುದಿಲ್ಲ, ನಾನು ಆಮರಣಾಂತ ಉಪವಾಸವನ್ನು ಮುಂದುವರಿಸುತ್ತೇನೆ ಎಂದು ಬಂಡಗರ್ ಅವರು ಹೇಳಿದ್ದಾರೆ.

ಇದನ್ನು ಓದಿ: NDA ಆಡಳಿತದ 16 ರಾಜ್ಯಗಳಲ್ಲಿ ಒಬ್ಬರೇ ಒಬ್ಬ ಮಹಿಳಾ ಸಿಎಂಗಳಿಲ್ಲ: ಡೆರೆಕ್ ಓಬ್ರಿಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...