Homeಕರ್ನಾಟಕಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರಕ್ಕೆ ಅವಮಾನ: ಊರಿನ ಹೆಸರು ಬಳಸದಂತೆ ನಿರ್ಬಂಧಿಸಲು ಕೋರ್ಟ್‌ಗೆ ಮನವಿ

ಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರಕ್ಕೆ ಅವಮಾನ: ಊರಿನ ಹೆಸರು ಬಳಸದಂತೆ ನಿರ್ಬಂಧಿಸಲು ಕೋರ್ಟ್‌ಗೆ ಮನವಿ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ವ್ಯಕ್ತಿಯೊಬ್ಬರು ದಾವೆ ಹೂಡಿದ್ದಾರೆ.

ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖ ಮಾಡಲಾಗುತ್ತಿತ್ತು. ಈ ಬಗ್ಗೆ ಬೆಂಗಳೂರಿನ ಬಸವನಗುಡಿಯಲ್ಲಿ “ಕಾಫಿ ಶಾಪ್‌” ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್‌ ಶೆಟ್ಟಿ ಅಸಮಾಧಾನ ಹೊಂದಿದ್ದರು.

ಗಣೇಶ್ ಶೆಟ್ಟಿ ಅವರು ಮೂಲ ದಾವೆ ಹೂಡಿದ್ದಾರೆ. ಇವರು ಕುಂದಾಪುರ ಮೂಲದವರಾಗಿದ್ದು,  ದಾವೆಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕುಂದಾಪುರ ಎಂಬುದು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. 10 ಮತ್ತು 11ನೇ ಶತಮಾನದಲ್ಲಿ ಅಲುಪು ರಾಜವಂಶಸ್ಥರಾದ ಕುಂದವರ್ಮ ಅವರು ಕುಂದಾಪುರವನ್ನು ಆಳ್ವಿಕೆ ನಡೆಸಿದ್ದರು. ಐತಿಹಾಸಿಕ ಕುಂದೇಶ್ವರ ದೇವಸ್ಥಾನ ಸಹ ನಿರ್ಮಿಸಿದ್ದಾರೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆನಂತರ ಪೋರ್ಚಗೀಸರು , ಟಿಪ್ಪುಸುಲ್ತಾನ್‌, ಬ್ರೀಟಿಷರು ಕುಂದಾಪುರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಇಂದಿಗೂ ಅನೇಕ ಐತಿಹಾಸಿಕ ದೇವಸ್ಥಾಗಳಿಂದ ಕುಂದಾಪುರ ಖ್ಯಾತಿ ಪಡೆದಿದೆ ಎಂದು ದಾವೆಯಲ್ಲಿ ವಿವರಿಸಲಾಗಿದೆ.

ಮಾಧ್ಯಮಗಳು ಚೈತ್ರ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಘಾಸಿಯಾಗುತ್ತಿದೆ. ಕಳೆದ 23 ವರ್ಷಗಳಿಂದ ಬೆಂಗಳೂರಿನ ಬಸನಗುಡಿಯಲ್ಲಿ ಕಾಫಿ ಶಾಪ್‌ ನಡೆಸುತ್ತಿದ್ದೇನೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಗ್ರಾಹಕರು ಶಾಪ್‌ಗೆ ಭೇಟಿ ನೀಡುತ್ತಾರೆ. ಚೈತ್ರಾ ಪ್ರಕರಣ ಬೆಳಕಿಗೆ ಬಂದ ನಂತರ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ನ್ಯಾಯಾಲಯಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.

ವಂಚನೆ ಪ್ರಕರಣದಲ್ಲಿ ಚೈತ್ರಾ ಕುರಿತು ಸುದ್ದಿ ಪ್ರಸಾರ ಮಾಡುವಾಗ ಕುಂದಾಪುರ ಎಂದು ಉಲ್ಲೇಖಿಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಮಾಡಬೇಕು. ಈಗಾಗಲೇ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ದಾವೆದಾರ ಕೋರಿದ್ದಾರೆ. ದಾವೆದಾರ ಪರ ವಕೀಲ ಪವನ ಚಂದ್ರ ಶೆಟ್ಟಿ ವಕಾಲತ್ತು ಹಾಕಿದ್ದಾರೆ.  ಶುಕ್ರವಾರವಷ್ಟೇ ಈ ದಾವೆ ಹೂಡಿದ್ದಾರೆ. ದಾವೆಯು ಶನಿವಾರ ಅಥವಾ ಸೋಮವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್‌ನ ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿ 10 ದಿನ ಸಿಸಿಬಿ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is stated by Shetty is absolutely correct.Kundapur is a small beautiful town with communal harmony and good business place. Linking this name with a criminal is unwanted and unfortunate.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...