Homeಮುಖಪುಟಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಬಹುಜನ ಸಮಾಜ ಪಕ್ಷದ ಮುಸ್ಲಿಂ ಸಂಸದರ ವಿರುದ್ಧ ಬಿಜೆಪಿ ಸಂಸದ ಸಂಸತ್ತಿನಲ್ಲಿಯೇ ಕೋಮು ದೂಷಣೆ ಮಾಡಿದ ನಂತರ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಈ ವಿಚಾರವಾಗಿ ಸುದ್ದಿ ಸಂಸ್ಥೆ ಪಿಟಿಐಗೆ ಮಾತನಾಡಿದ ಮೊಯಿತ್ರಾ, ”ಬಿಜೆಪಿ ಇಂತಹ ದ್ವೇಷದ ವಾತಾವರಣ ಸೃಷ್ಟಿಸಿದೆ. ಅವರು ಬಹಿರಂಗವಾಗಿ ಇಂತಹ ವಿಷಯಗಳನ್ನು ಹೇಳುವುದನ್ನು ಸಾಮಾನ್ಯಗೊಳಿಸಿದ್ದಾರೆ” ಎಂದು ಹರಿಹಾಯ್ದರು.

ಈ ದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ವಿರುದ್ಧ ದ್ವೇಷದ ಭಾಷಣ ಮಾಡುತ್ತಿರುವುದನ್ನು ನೋಡಿ ನನಗೆ ಅಸಹ್ಯವೆನಿಸುತ್ತದೆ. ಆದರೆ ಈಗ ”ಬಿಜೆಪಿಯ ನಿಜವಾದ ಬಣ್ಣ ಬಯಲಾಗಿರುವುದು ಸಂತೋಷವಾಗಿದೆ” ಎಂದು ಹೇಳಿದರು.

ದಕ್ಷಿಣ ದೆಹಲಿಯ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಅವರಿಗೆ ಅವಹೇಳನಕಾರಿ ಪದಗಳನ್ನು ಬಳಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದ ನಂತರ ವಿವಾದ ಭುಗಿಲೆದ್ದಿದೆ.

ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಅಲಿ ಪತ್ರ ಬರೆದಿದ್ದಾರೆ. ಕ್ರಮ ತೆಗೆದುಕೊಳ್ಳದಿದ್ದರೆ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಇಂತಹ ವರ್ತನೆಗಳಿಗೆ BJP, RSS ಮುಕ್ತ ಅವಕಾಶ ನೀಡಿದೆ’: ಮುಸ್ಲಿಂ ವಿರೋಧಿ ನಿಂದನೆಗೆ ಶಶಿ ತರೂರ್ ಪ್ರತಿಕ್ರಿಯೆ

ಪತ್ರದಲ್ಲಿ ಏನಿದೆ?

”ಅವರು ನನ್ನ ವಿರುದ್ಧ ಅತ್ಯಂತ ಅಸಹ್ಯಕರ, ನಿಂದನೀಯ ಆಕ್ರಮಣ ಮಾಡಿದ್ದಾರೆ … ಅವರು ನನ್ನ ವಿರುದ್ಧ ಬಳಸಿದ ಪದಗಳಲ್ಲಿ ‘ಭದ್ವಾ’ (ಪಿಂಪ್), ‘ಕಟ್ವಾ’ (ಸುನ್ನತಿ ಮಾಡಿಸಿಕೊಂಡವರು), ‘ಮುಲ್ಲಾ ಉಗ್ರವಾದಿ’ ಮತ್ತು ‘ಮುಲ್ಲಾ ಆಟಂಕ್ವಾಡಿ. ‘(ಮುಸ್ಲಿಂ ಭಯೋತ್ಪಾದಕ) ಇತ್ಯಾದಿ… ಇದು ಅತ್ಯಂತ ದುರದೃಷ್ಟಕರ ಮತ್ತು ಸ್ಪೀಕರ್ ಆಗಿ ನಿಮ್ಮ ನೇತೃತ್ವದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇದು ನಡೆದಿದೆ. ಈ ಮಹಾನ್ ರಾಷ್ಟ್ರದ ಅಲ್ಪಸಂಖ್ಯಾತ ಸದಸ್ಯ ಮತ್ತು ಚುನಾಯಿತ ಸಂಸದನಾಗಿ ನನಗೆ ನಿಜವಾಗಿಯೂ ಹೃದಯ ವಿದ್ರಾವಕ ಎನಿಸಿದೆ” ಎಂದು ಬರೆದಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ, ”ಬಿಧುರಿಯನ್ನು ಉದಾಹರಣೆಯಾಗಿ ಮಾಡಬೇಕು. ಸಮಸ್ಯೆ ಬಿಧುರಿಯೊಬ್ಬರದ್ದಲ್ಲ, ಸಮಸ್ಯೆ ಏನೆಂದರೆ, ಬಿಜೆಪಿಯವರು ಇಂತಹ ಮಾತುಗಳನ್ನು ಬಹಿರಂಗವಾಗಿ ಹೇಳುವುದನ್ನು ಸಾಮಾನ್ಯಗೊಳಿಸಿದ ವ್ಯವಸ್ಥೆಯನ್ನು ಸೃಷ್ಟಿಸಿದ್ದಾರೆ. ಜನರು ಬಿಜೆಪಿಯ ನಿಜವಾದ ಬಣ್ಣವನ್ನು ನೋಡಿದ್ದಾರೆ” ಎಂದರು.

”ಒಂದು ಘಟನೆ ಬಗ್ಗೆ ನನಗೆ ಅಸಹ್ಯ ಹುಟ್ಟಿದೆ. ಆದರೆ ಒಂದು ರೀತಿಯಲ್ಲಿ ನನಗೆ ಸಂತೋಷವಾಗಿದೆ ಏಕೆಂದರೆ ಜನರು ಬಿಜೆಪಿಯ ನಿಜವಾದ ಬಣ್ಣವನ್ನು ನೋಡುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ವಿಶ್ವದ ಅತ್ಯುನ್ನತ,  ಶ್ರೇಷ್ಠ ಪ್ರಜಾಪ್ರಭುತ್ವ ದೇಶದಲ್ಲಿ ಚುನಾಯಿತ ಪ್ರತಿನಿಧಿಯಾಗಿರುವ ಸಂಸದರ ಮುಖಕ್ಕೆ “ಈಸ್ ಮುಲ್ಲೆ ಕೊ ನಿಕಾಲ್ ಕೊ (ಈ ಮುಸಲ್ಮಾನನನ್ನು ಒದೆಯಿರಿ) ಎಂದು ನೀವು ಹೇಳಿದಂತಿದೆ ನಿಮ್ ಮಾತುಗಳು…” ಎಂದು ಮೋಯಿತ್ರಾ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...