Homeಮುಖಪುಟಹೊಸ ಸಂಸತ್ ಕಟ್ಟಡವನ್ನು ’ಮೋದಿ ಮಲ್ಟಿಪ್ಲೆಕ್ಸ್’ ಎನ್ನಬಹುದು: ಜೈರಾಮ್ ರಮೇಶ್

ಹೊಸ ಸಂಸತ್ ಕಟ್ಟಡವನ್ನು ’ಮೋದಿ ಮಲ್ಟಿಪ್ಲೆಕ್ಸ್’ ಎನ್ನಬಹುದು: ಜೈರಾಮ್ ರಮೇಶ್

- Advertisement -
- Advertisement -

ಹೊಸ ಸಂಸತ್ ಭವನದ ವಾಸ್ತುಶೈಲಿ ಪ್ರಜಾಪ್ರಭುತ್ವ ಮತ್ತು ಸಂಭಾಷಣೆಗಳನ್ನು ಕೊಂದಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಶನಿವಾರ ವಾಗ್ದಾಳಿ ನಡೆಸಿದೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಅವಮಾನವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಹೊಸ ಸಂಸತ್ ಭವನವು ಪ್ರಧಾನಿಯವರ ಉದ್ದೇಶಗಳನ್ನು ಸಾಕಾರಗೊಳಿಸುತ್ತದೆ ಮತ್ತು ಅದನ್ನು “ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್” ಎಂದು ಕರೆಯಬೇಕೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”2024ರಲ್ಲಿ ಸರ್ಕಾರ ಬದಲಾವಣೆಯಾದ ಬಳಿಕ ಹೊಸ ಸಂಸತ್ತಿನ ಕಟ್ಟಡ ಒಳ್ಳೆಯ ರೀತಿಯಲ್ಲಿ ಬಳಕೆಯಾಗಬಹುದು” ಎಂದು ರಮೇಶ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

“ಪ್ರಧಾನಿಯವರಂತೆ ಹೊಸ ಸಂಸತ್ತಿನ ಕಟ್ಟಡಕ್ಕೂ ತುಂಬಾ ಪ್ರಚಾರ ಪಡೆದುಕೊಂಡಿದೆ. ಅದು ಕೂಡ ಪ್ರಧಾನಿಯವರ ಉದ್ದೇಶಗಳನ್ನು ಚೆನ್ನಾಗಿ ಅರಿತುಕೊಂಡಿದೆ. ಇದನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕು. ನಾಲ್ಕು ದಿನಗಳಲ್ಲಿ ನಾನು ನೋಡಿದ್ದು, ಉಭಯ ಸದನಗಳ ಒಳಗೆ ಮತ್ತು ಒಳಗೆ ಗೊಂದಲಗಳು ಮತ್ತು ಸಂಭಾಷಣೆಗಳ ಸಾವು. ವಾಸ್ತುಶೈಲಿಯು ಪ್ರಜಾಪ್ರಭುತ್ವವನ್ನು ಕೊಲ್ಲಬಹುದಾದರೆ, ಸಂವಿಧಾನವನ್ನು ಪುನಃ ಬರೆಯದೆ ಪ್ರಧಾನಿ ಈಗಾಗಲೇ ಯಶಸ್ವಿಯಾಗಿದ್ದಾರೆ” ರಮೇಶ್ ಹೇಳಿದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ”ಕಾಂಗ್ರೆಸ್ ಪಕ್ಷದ ಅತ್ಯಂತ ಕೆಳಮಟ್ಟದಲ್ಲಿಯೂ ಇದು ಕರುಣಾಜನಕ ಮನಸ್ಥಿತಿಯಾಗಿದೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಮಾಡಿದ ಅವಮಾನವಲ್ಲದೆ ಮತ್ತೇನೂ ಅಲ್ಲ” ಎಂದು ಹೇಳಿದ್ದಾರೆ.

”ಸಭಾಂಗಣಗಳು ಸ್ನೇಹಶೀಲ ಅಥವಾ ಸಾಂದ್ರವಾಗಿಲ್ಲದ ಕಾರಣ ಪರಸ್ಪರ ನೋಡಲು ಬೈನಾಕ್ಯುಲರ್ ಅಗತ್ಯವಿದೆ” ಎಂದು ರಮೇಶ್ ಆರೋಪಿಸಿದರು.

”ಹಳೆಯ ಸಂಸತ್ತಿನ ಕಟ್ಟಡವು ನಿರ್ದಿಷ್ಟ ಅಂತರ ಹೊಂದಿದ್ದಲ್ಲದೆ ಸಂಭಾಷಣೆಗಳನ್ನು ಸುಗಮಗೊಳಿಸಿತು. ಸದನಗಳು, ಸೆಂಟ್ರಲ್ ಹಾಲ್ ಮತ್ತು ಕಾರಿಡಾರ್‌ಗಳ ನಡುವೆ ನಡೆಯಲು ಸುಲಭವಾಗಿದೆ. ಇದು ಸಂಸತ್ತಿನ ಕಲಾಪ ಯಶಸ್ವಿಗೊಳಿಸಲು ಅಗತ್ಯವಾದ ಬಂಧವನ್ನು ದುರ್ಬಲಗೊಳಿಸುತ್ತದೆ” ಅವರು ಹೇಳಿಕೊಂಡರು.

”ಸಂಸತ್‌ನಲ್ಲಿ ಸುಮ್ಮನೆ ಸುತ್ತಾಡುವ ಆನಂದ ಮಾಯವಾಗಿದೆ. ನಾನು ಹಳೆಯ ಕಟ್ಟಡಕ್ಕೆ ಹೋಗಲು ಎದುರು ನೋಡುತ್ತಿದ್ದೆ. ಹೊಸ ಸಂಕೀರ್ಣವು ನೋವಿನಿಂದ ಕೂಡಿದೆ ಮತ್ತು ಯಾತನಾದಾಯಕವಾಗಿದೆ. ಪಕ್ಷದ ವ್ಯಾಪ್ತಿಯಲ್ಲಿರುವ ನನ್ನ ಅನೇಕ ಸಹೋದ್ಯೋಗಿಗಳು ಅದೇ ರೀತಿ ಭಾವಿಸುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು. .

”ಕಟ್ಟಡವನ್ನು ಬಳಸುವ ಜನರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿದ್ದಾಗ ಈ ರೀತಿಯಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...