Homeಮುಖಪುಟವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

ವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

- Advertisement -
- Advertisement -

ಲೋಕಸಭೆಯಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರ  ಬಗ್ಗೆ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ನಿಂದನೆ ಮಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದನಿಗೆ ಸಮುದಾಯಕ್ಕೆ ಲಿಂಕ್‌ ಮಾಡಿ ದಾಳಿ ಮಾಡಲು ಕರೆಯಲಾಗಿದೆಯೇ? ಎಂದು ಡ್ಯಾನಿಶ್‌ ಅಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಡ್ಯಾನಿಶ್ ಅಲಿ, ರಮೇಶ್ ಬಿಧುರಿ ವಿರುದ್ಧ ಸ್ಪೀಕರ್‌ ಕ್ರಮಕೈಗೊಳ್ಳದಿದ್ದರೆ ನಾನು ಸಂಸತ್‌ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಅವಹೇಳನದಿಂದ ನೊಂದು ರಾತ್ರಿಯಿಡೀ ನನಗೆ ನಿದ್ರೆ ಬಂದಿಲ್ಲ. ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದರನ್ನು ಅವರ ಸಮುದಾಯದ ಜೊತೆ ಲಿಂಕ್‌ ಮಾಡಿ ದಾಳಿ ಮಾಡಲು(ಅವಹೇಳನ ಮಾಡಲು) ಕರೆಯಲಾಗಿದೆಯಾ ?  ಈ ಬೆಳವಣಿಗೆ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಅವರ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾ ಅಥವಾ  ಅವರಿಗೆ ಪ್ರಚಾರ ನೀಡುತ್ತಾ ಎಂದು ನಾವು ನೋಡುತ್ತೇವೆ. ಇದು ದ್ವೇಷದ ಮಾತು ಎಂದು ಹೇಳಿದ್ದಾರೆ.

ಇದಲ್ಲದೆ  ಸಂಸದ ರಮೇಶ್‌ ಬಿಧುರಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದಿರುವುದಾಗಿ ಡ್ಯಾನಿಶ್‌ ಅಲಿ ಹೇಳಿದ್ದಾರೆ. ಪತ್ರದಲ್ಲಿ ಅವರು ನನ್ನ ವಿರುದ್ಧ ಅತ್ಯಂತ ಅಸಹ್ಯಕರ, ನಿಂದನೀಯ ಪದ ಬಳಕೆ  ಮಾಡಿದ್ದಾರೆ.  ಅವರು ನನ್ನ ವಿರುದ್ಧ ಬಳಸಿದ ಪದಗಳಲ್ಲಿ ‘ಭದ್ವಾ’ (ಪಿಂಪ್), ‘ಕಟ್ವಾ’ (ಸುನ್ನತಿ ಮಾಡಿಸಿಕೊಂಡವರು), ‘ಮುಲ್ಲಾ ಉಗ್ರವಾದಿ’ ಮತ್ತು ‘ಮುಲ್ಲಾ ಆತಂಕ್ವಾದಿ’  ‘(ಮುಸ್ಲಿಂ ಭಯೋತ್ಪಾದಕ) ಇತ್ಯಾದಿ ಇದೆ. ಇದು ಅತ್ಯಂತ ದುರದೃಷ್ಟಕರ ಮತ್ತು ಸ್ಪೀಕರ್ ಆಗಿ ನಿಮ್ಮ ನೇತೃತ್ವದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇದು ನಡೆದಿದೆ. ಈ ಮಹಾನ್ ರಾಷ್ಟ್ರದ ಅಲ್ಪಸಂಖ್ಯಾತ ಸದಸ್ಯ ಮತ್ತು ಚುನಾಯಿತ ಸಂಸದನಾಗಿ ನನಗೆ ನಿಜವಾಗಿಯೂ ಹೃದಯ ವಿದ್ರಾವಕ ಎನಿಸಿದೆ ಎಂದು ಬರೆದಿದ್ದಾರೆ.

ಇನ್ನು ಅವಹೇಳನಕಾರಿ ಹೇಳಿಕೆಯನ್ನು ಕೊಟ್ಟ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಸ್ವಪಕ್ಷದ ಸಂಸದ ನಿಶಿಕಾಂತ್ ದುಬೆ ಟೀಕಿಸಿದ್ದು, ಇಂತಹ ಹೇಳಿಕೆಗಳು ಸುಸಂಸ್ಕೃತ ಸಮಾಜಕ್ಕೆ ಸೂಕ್ತವಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ತಮ್ಮ ಪಕ್ಷದ ಸಂಸದ ರಮೇಶ್ ಬಿಧುರಿ ಮತ್ತೋರ್ವ ಸಂಸದರ ವಿರುದ್ಧ ನೀಡಿದ್ದ ಕೋಮುವಾದಿ ಹೇಳಿಕೆಗಳನ್ನು ಖಂಡಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಅವಹೇಳನಾಕಾರಿ ಹೇಳಿಕೆ ಬಗ್ಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಬಿಜೆಪಿ ಸಂಸದ ಬಿಧುರಿಗೆ ಎಚ್ಚರಿಕೆಯನ್ನು ನೀಡಿದ್ದು, ಲೋಕಸಭೆಯ ಕಡತದಿಂದ ಹೇಳಿಕೆ ತೆಗೆದು ಹಾಕಿರುವುದಾಗಿ ಹೇಳಿದ್ದರು. ರಮೇಶ್ ಬಿಧುರಿ ಅವರು ನೀಡಿರುವ ಹೇಳಿಕೆಯನ್ನು ನಾಗರಿಕ ಸಮಾಜ ಸ್ವೀಕರಿಸಲು ಸಾಧ್ಯವಿಲ್ಲ. ಇದಕ್ಕೆ ಎಷ್ಟು ಖಂಡನೆ ವ್ಯಕ್ತಪಡಿಸಿದರೂ ಸಾಲದು. ಸಂಸದರ ಬಗೆಗಿನ ಹೇಳಿಕೆ ಮತ್ತು ಅಸಭ್ಯ ಪದಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದುಬೆ ಹೇಳಿದ್ದಾರೆ.

ಬಿಜೆಪಿ ಸಂಸದರ ಹೇಳಿಕೆಗೆ ಪ್ರತಿಪಕ್ಷಗಳು ವ್ಯಾಪಕ ಖಂಡನೆಯನ್ನು ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಪಾರ್ಟಿ ಸಂಸದರಿಗೆ ವಿವರಣೆ ಕೇಳಿ ಶೋಕಾಸ್‌ ನೊಟೀಸ್‌ ನೀಡಿದ್ದು, 15 ದಿನಗಳೊಳಗೆ ಉತ್ತರಿಸಬೇಕು ಎಂದು ಹೇಳಿದೆ.

ಇದನ್ನು ಓದಿ: ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...