Homeಮುಖಪುಟವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

ವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

- Advertisement -
- Advertisement -

ಲೋಕಸಭೆಯಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರ  ಬಗ್ಗೆ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ನಿಂದನೆ ಮಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದನಿಗೆ ಸಮುದಾಯಕ್ಕೆ ಲಿಂಕ್‌ ಮಾಡಿ ದಾಳಿ ಮಾಡಲು ಕರೆಯಲಾಗಿದೆಯೇ? ಎಂದು ಡ್ಯಾನಿಶ್‌ ಅಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಡ್ಯಾನಿಶ್ ಅಲಿ, ರಮೇಶ್ ಬಿಧುರಿ ವಿರುದ್ಧ ಸ್ಪೀಕರ್‌ ಕ್ರಮಕೈಗೊಳ್ಳದಿದ್ದರೆ ನಾನು ಸಂಸತ್‌ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಅವಹೇಳನದಿಂದ ನೊಂದು ರಾತ್ರಿಯಿಡೀ ನನಗೆ ನಿದ್ರೆ ಬಂದಿಲ್ಲ. ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದರನ್ನು ಅವರ ಸಮುದಾಯದ ಜೊತೆ ಲಿಂಕ್‌ ಮಾಡಿ ದಾಳಿ ಮಾಡಲು(ಅವಹೇಳನ ಮಾಡಲು) ಕರೆಯಲಾಗಿದೆಯಾ ?  ಈ ಬೆಳವಣಿಗೆ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಅವರ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾ ಅಥವಾ  ಅವರಿಗೆ ಪ್ರಚಾರ ನೀಡುತ್ತಾ ಎಂದು ನಾವು ನೋಡುತ್ತೇವೆ. ಇದು ದ್ವೇಷದ ಮಾತು ಎಂದು ಹೇಳಿದ್ದಾರೆ.

ಇದಲ್ಲದೆ  ಸಂಸದ ರಮೇಶ್‌ ಬಿಧುರಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದಿರುವುದಾಗಿ ಡ್ಯಾನಿಶ್‌ ಅಲಿ ಹೇಳಿದ್ದಾರೆ. ಪತ್ರದಲ್ಲಿ ಅವರು ನನ್ನ ವಿರುದ್ಧ ಅತ್ಯಂತ ಅಸಹ್ಯಕರ, ನಿಂದನೀಯ ಪದ ಬಳಕೆ  ಮಾಡಿದ್ದಾರೆ.  ಅವರು ನನ್ನ ವಿರುದ್ಧ ಬಳಸಿದ ಪದಗಳಲ್ಲಿ ‘ಭದ್ವಾ’ (ಪಿಂಪ್), ‘ಕಟ್ವಾ’ (ಸುನ್ನತಿ ಮಾಡಿಸಿಕೊಂಡವರು), ‘ಮುಲ್ಲಾ ಉಗ್ರವಾದಿ’ ಮತ್ತು ‘ಮುಲ್ಲಾ ಆತಂಕ್ವಾದಿ’  ‘(ಮುಸ್ಲಿಂ ಭಯೋತ್ಪಾದಕ) ಇತ್ಯಾದಿ ಇದೆ. ಇದು ಅತ್ಯಂತ ದುರದೃಷ್ಟಕರ ಮತ್ತು ಸ್ಪೀಕರ್ ಆಗಿ ನಿಮ್ಮ ನೇತೃತ್ವದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇದು ನಡೆದಿದೆ. ಈ ಮಹಾನ್ ರಾಷ್ಟ್ರದ ಅಲ್ಪಸಂಖ್ಯಾತ ಸದಸ್ಯ ಮತ್ತು ಚುನಾಯಿತ ಸಂಸದನಾಗಿ ನನಗೆ ನಿಜವಾಗಿಯೂ ಹೃದಯ ವಿದ್ರಾವಕ ಎನಿಸಿದೆ ಎಂದು ಬರೆದಿದ್ದಾರೆ.

ಇನ್ನು ಅವಹೇಳನಕಾರಿ ಹೇಳಿಕೆಯನ್ನು ಕೊಟ್ಟ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಸ್ವಪಕ್ಷದ ಸಂಸದ ನಿಶಿಕಾಂತ್ ದುಬೆ ಟೀಕಿಸಿದ್ದು, ಇಂತಹ ಹೇಳಿಕೆಗಳು ಸುಸಂಸ್ಕೃತ ಸಮಾಜಕ್ಕೆ ಸೂಕ್ತವಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ತಮ್ಮ ಪಕ್ಷದ ಸಂಸದ ರಮೇಶ್ ಬಿಧುರಿ ಮತ್ತೋರ್ವ ಸಂಸದರ ವಿರುದ್ಧ ನೀಡಿದ್ದ ಕೋಮುವಾದಿ ಹೇಳಿಕೆಗಳನ್ನು ಖಂಡಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಅವಹೇಳನಾಕಾರಿ ಹೇಳಿಕೆ ಬಗ್ಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಬಿಜೆಪಿ ಸಂಸದ ಬಿಧುರಿಗೆ ಎಚ್ಚರಿಕೆಯನ್ನು ನೀಡಿದ್ದು, ಲೋಕಸಭೆಯ ಕಡತದಿಂದ ಹೇಳಿಕೆ ತೆಗೆದು ಹಾಕಿರುವುದಾಗಿ ಹೇಳಿದ್ದರು. ರಮೇಶ್ ಬಿಧುರಿ ಅವರು ನೀಡಿರುವ ಹೇಳಿಕೆಯನ್ನು ನಾಗರಿಕ ಸಮಾಜ ಸ್ವೀಕರಿಸಲು ಸಾಧ್ಯವಿಲ್ಲ. ಇದಕ್ಕೆ ಎಷ್ಟು ಖಂಡನೆ ವ್ಯಕ್ತಪಡಿಸಿದರೂ ಸಾಲದು. ಸಂಸದರ ಬಗೆಗಿನ ಹೇಳಿಕೆ ಮತ್ತು ಅಸಭ್ಯ ಪದಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದುಬೆ ಹೇಳಿದ್ದಾರೆ.

ಬಿಜೆಪಿ ಸಂಸದರ ಹೇಳಿಕೆಗೆ ಪ್ರತಿಪಕ್ಷಗಳು ವ್ಯಾಪಕ ಖಂಡನೆಯನ್ನು ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಪಾರ್ಟಿ ಸಂಸದರಿಗೆ ವಿವರಣೆ ಕೇಳಿ ಶೋಕಾಸ್‌ ನೊಟೀಸ್‌ ನೀಡಿದ್ದು, 15 ದಿನಗಳೊಳಗೆ ಉತ್ತರಿಸಬೇಕು ಎಂದು ಹೇಳಿದೆ.

ಇದನ್ನು ಓದಿ: ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...